ಅಕ್ಷಯ ವಿಪ್ರ ಮಹಾಸಭಾದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ `ಅಕ್ಷಯ ರತ್ನ’ ಪುರಸ್ಕಾರ

ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅಕ್ಷಯ ವಿಪ್ರ ಮಹಾಸಭಾ (Akshaya Vipra Mahasabha) ವತಿಯಿಂದ ಈ ಬಾರಿ ನಾಲ್ವರು ಮಹನೀಯರಿಗೆ `ಅಕ್ಷಯ ರತ್ನ’ (Akshaya Rathna) ಪುರಸ್ಕಾರ (Awards) ನೀಡಿ ಗೌರವಿಸಲಾಗುತ್ತಿದೆ.
೨೦೨೫-೨೬ನೇ ಸಾಲಿನ “ಅಕ್ಷಯ ರತ್ನ” ಬಿರುದು ಪುರಸ್ಕೃತರಲ್ಲಿ ಎ.ವಿ.ಎಂ.ಎಸ್.ನ ಮಾಜಿ ಅಧ್ಯಕ್ಷರು ಹಾಗೂ ವಕೀಲರಾದ ಎನ್.ಜಿ.ವಾಸುದೇವಮೂರ್ತಿ, ಜಯನಗರ ಎವಿಎಂಎಸ್‌ನ ಉಪಾಧ್ಯಕ್ಷರಾದ ಡಿಪಿಟಿಪಿಜಿಆರ್ ಬಿಜಿಎಸ್‌ನ ಡಾ.ಕೆ.ರಘುನಾಥರಾವ್, ಎವಿಎಂಎಸ್‌ನ ಮಾಜಿ ಉಪಾಧ್ಯಕ್ಷರಾದ ದಿ.ಎಸ್.ರಾಮಕೃಷ್ಣ (ಮರಣೋತ್ತರ), ಬೆಂಗಳೂರು ಗ್ರಾಮಾಂತರ ಹೊಸಕೋಟೆಯ ಎವಿಎಂಎಸ್ ಮಾಜಿ ಉಪಾಧ್ಯಕ್ಷರಾದ ಎನ್.ಕೆ.ಪಣೆರಾಜ್ ಇವರು ಪ್ರಮುಖರಾಗಿದ್ದಾರೆ.
ಆಗಸ್ಟ್ ೨ ರಂದು ಭಾನುವಾರ ನಡೆಯಲಿರುವ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುಳಬಾಗಿಲು ಶ್ರೀಪಾದರಾಜಮಠದ ಪೀಠಾಧಿಪತಿಗಳಾದ ೧೦೦೮ ಶ್ರೀ ಶ್ರೀ ಸುಜಯನಿಧಿ ತೀರ್ಥರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ, ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಕೆ.ರಾಮಮೂರ್ತಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್ ಅವರು ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ ೧೦ ಗಂಟೆಯಿAದ ಕಾರ್ಯಕ್ರಮಗಳು ಆರಂಭವಾಗಲಿದ್ದು ಮಧ್ಯಾಹ್ನ ೨ ಗಂಟೆಯವರೆಗೆ ಜರುಗಲಿವೆ. ಈ ವೇಳೆ ಪ್ರಾರ್ಥನೆ, ಜ್ಯೋತಿ ಬೆಳಗುವುದು, ಸ್ವಾಗತ ಭಾಷಣ, ಗೌರವ ಅಧ್ಯಕ್ಷರಿಂದ ಭಾಷಣ, ಡೈರೆಕ್ಟರಿ ಪುಸ್ತಕ ಬಿಡುಗಡೆ, ಅಧ್ಯಕ್ಷರ ಭಾಷಣ ಜರುಗಲಿದೆ. ಸಂಜೆ ೫-೩೦ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯಲಿವೆ. ಈ ನಡುವೆ ೮೫ ವರ್ಷ ತುಂಬಿದ ವೃದ್ಧರಿಗೆ, ೭೦ ವರ್ಷದ ದಂಪತಿಗಳಿಗೆ, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಜೊತೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಘದ ಸದಸ್ಯರುಗಳಿಗೆ ಸನ್ಮಾನ ಇರಲಿದೆ. ಬಳಿಕ ವಂದನಾರ್ಪಣೆಯ ಮೂಲಕ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಈ ಸಮಾರಂಭಕ್ಕೆ ಅಕ್ಷಯ ವಿಪ್ರ ಮಹಾಸಭಾದ ಅಧ್ಯಕ್ಷರಾದ ಎನ್.ಕೆ.ರಾಮಚಂದ್ರರಾವ್, ಗೌರವಾಧ್ಯಕ್ಷರಾದ ಡಾ.ಎನ್.ಕೀರ್ತಿರಾಜ್, ಉಪಾಧ್ಯಕ್ಷರಾದ ಕೆ.ಆನಂದರಾವ್, ಡಾ.ಕಿರಣ್ ಎಸ್.ಮೂರ್ತಿ, ಡಾ.ಕೆ.ರಘುನಾಥರಾವ್, ಲಕ್ಷಿö್ಮÃಶ, ವಿ.ಶ್ರೀಪ್ರಕಾಶ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರರಾವ್, ಕಾರ್ಯದರ್ಶಿಗಳಾದ ಎನ್.ಎಸ್.ಸುಧೀಂದ್ರ ರಾವ್, ಜಂಟಿ ಕಾರ್ಯದರ್ಶಿಗಳಾದ ಮಹೇಶ್ ಕುಮಾರ್ ಆರ್., ಟಿ.ಎನ್.ಶಾಂತ ಕುಮಾರ್., ಎನ್.ಪಿ.ಮಂಜುನಾಥ್, ಎಲ್.ಜಗನ್ನಾಥ್, ಆರ್.ಶ್ರೀನಿವಾಸ್, ಎನ್.ರಾಘವೇಂದ್ರ ರಾವ್, ಆಂತರಿಕ ಲೆಕ್ಕ ಪರಿಶೋಧಕರಾದ ಎನ್.ಜೆ.ಮಣಿಕುಮಾರ್, ಕಾನೂನು ಸಲಹೆಗಾರರಾದ ಎ.ವಿಜಯಕುಮಾರ್ ಭಟ್, ಖಜಾಂಚಿಗಳಾದ ಎನ್.ರಾಘವೇಂದ್ರರಾವ್ ಮತ್ತು ಕಾರ್ಯಕಾರಿ ಸದಸ್ಯರು ಸ್ವಾಗತಿಸಿದ್ದಾರೆ.
ಅಕ್ಷಯ ವಿಪ್ರ ಮಹಾಸಭಾ(ರಿ)ದ ೨೦೨೫-೨೦೨೬ ೧೯ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಜರುಗಲಿದೆ. ಬೆಂಗಳೂರು ಜಯನಗರದ ೪ನೇ ಬ್ಲಾಕ್ ನ ೧೧ನೇ ಮುಖ್ಯರಸ್ತೆಯ ವಿಜಯ ಕಾಲೇಜು ಆವರಣದ ಪ್ರೊ.ಬಿ.ವಿ. ನಾರಾಯಣ ರಾವ್ ಆಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಅಕ್ಷಯ ಪುರಸ್ಕಾರಾಭಿನಂದನ ಕಾರ್ಯಕ್ರಮವೂ ಜರುಗಲಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles