ಇನ್ಮುಂದೆ ವಾಟ್ಸಾಪ್‌ನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಪ್ರಯಾಣಿಕರಿಗೆ ಮತ್ತಷ್ಟು ಸುಲಭ, ಸರಳ ಹಾಗೂ ಅನುಕೂಲಕರ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಬೃಹತ್ ಡಿಜಿಟಲ್ (Digital) ಹೆಜ್ಜೆಯನ್ನಿಟ್ಟಿದೆ. ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳನ್ನು ಒಂದೇ ಸೂರಿನಡಿ ತರುವ ‘ಒಂದು ಕರ್ನಾಟಕ ಮೊಬಿಲಿಟಿ ಆಪ್’ (Ona Karnataka Mobility App) ಹಾಗೂ ‘ವಾಟ್ಸಾಪ್ ಟಿಕೆಟಿಂಗ್’ (What’sApp Ticketing) ಸೌಲಭ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ.
ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ 100 ದಿನಗಳ ಕಾರ್ಯಕ್ರಮದ ಅಂಗವಾಗಿ, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 2026 ನೇ ಸೆಪ್ಟೆಂಬರ್  10 ರಂದು ಈ ನವೀಕೃತ ಮೊಬೈಲ್ ಆಪ್ ಹಾಗೂ ವಾಟ್ಸಾಪ್ ಟಿಕೆಟಿಂಗ್ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿದರು.
ಒಂದೇ ಆಪ್‌ನಲ್ಲಿ ರಾಜ್ಯದ 4 ಸಾರಿಗೆ ಸಂಸ್ಥೆಗಳು
ಈ ಹೊಸ ಏಕೀಕೃತ ಡಿಜಿಟಲ್ ವೇದಿಕೆಯ ಮೂಲಕ ರಾಜ್ಯದ ನಾಲ್ಕೂ ಪ್ರಮುಖ ಸಾರಿಗೆ ಸಂಸ್ಥೆಗಳಾದ,
KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ),
NWKRTC (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ),  KKRTC (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಮತ್ತು BMTC (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ)  ಈ ನಾಲ್ಕೂ ನಿಗಮಗಳ ಸೇವೆಗಳು ಒಂದೇ ಆಪ್‌ನಲ್ಲಿ ಪ್ರಯಾಣಿಕರಿಗೆ ಲಭ್ಯವಾಗಲಿವೆ.
 
ಮೊಬೈಲ್ ಆಪ್‌ನ ಪ್ರಮುಖ ಸೌಲಭ್ಯಗಳು
ಸುರಕ್ಷಿತ ಲಾಗಿನ್: ಪ್ರಯಾಣಿಕರ ಗುರುತಿನ ದೃಢೀಕರಣ, ಹಿಂದಿನ ಬುಕ್ಕಿಂಗ್‌ಗಳ ವಿವರ ವೀಕ್ಷಣೆ ಹಾಗೂ ವಹಿವಾಟು ನಿರ್ವಹಣೆ.
ಏಕೀಕೃತ ದೂರು ನಿರ್ವಹಣೆ: ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಸಂಬಂಧಿಸಿದ ದೂರುಗಳನ್ನು ಒಂದೇ ಕಡೆ ದಾಖಲಿಸಿ, ದೂರಿನ ಸ್ಥಿತಿ ಹಾಗೂ ಪರಿಹಾರದ ಪ್ರಗತಿಯನ್ನು ಟ್ರ್ಯಾಕ್ ಮಾಡಬಹುದು.
ಡಿಜಿಟಲ್ ಮಾಸಿಕ ಪಾಸ್ (ಮುಂದಿನ ದಿನಗಳಲ್ಲಿ): ಆನ್‌ಲೈನ್‌ನಲ್ಲಿ ಬಸ್ ಪಾಸ್ ಬುಕ್ಕಿಂಗ್, ವಿತರಣೆ, ನಿರ್ವಹಣೆ ಹಾಗೂ QR ಕೋಡ್ ಆಧಾರಿತ ಡಿಜಿಟಲ್ ಪರಿಶೀಲನೆ ವ್ಯವಸ್ಥೆ ಜಾರಿಗೆ ಬರಲಿದೆ.
ವಾಟ್ಸಾಪ್ ಮೂಲಕವೇ KSRTC, NWKRTC, KKRTC ಟಿಕೆಟ್ ಬುಕ್ ಮಾಡಿ!
ಈಗ ಆಪ್ ಡೌನ್‌ಲೋಡ್ ಮಾಡಿಕೊಳ್ಳದೆಯೂ ವಾಟ್ಸಾಪ್ ಮೂಲಕ ಸುಲಭವಾಗಿ ಬಸ್ ಟಿಕೆಟ್ ಬುಕ್ ಮಾಡಬಹುದು. ಅಧಿಕೃತ ವಾಟ್ಸಾಪ್ ಸಂಖ್ಯೆ: +91 6364940880
 
ಟಿಕೆಟ್ ಬುಕ್ಕಿಂಗ್ ಮಾಡುವ ಸರಳ ಹಂತಗಳು:
ಸಂದೇಶ ಕಳುಹಿಸಿ: ಅಧಿಕೃತ ವಾಟ್ಸಾಪ್ ಸಂಖ್ಯೆ  +91 6364940880 ಗೆ  ಸಂದೇಶ ಕಳುಹಿಸುವ ಮೂಲಕ ಸಂವಾದ ಪ್ರಕ್ರಿಯೆ ಆರಂಭಿಸಿ.
ವಿವರ ಆಯ್ಕೆಮಾಡಿ: ಪ್ರಯಾಣದ ಆರಂಭಿಕ ಸ್ಥಳ, ತಲುಪಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ನಮೂದಿಸಿ ಲಭ್ಯವಿರುವ ಬಸ್‌ಗಳನ್ನು ಹುಡುಕಿ.
ಬಸ್ ಹಾಗೂ ಪ್ರಯಾಣಿಕರ ವಿವರ: ನಿಮ್ಮ ಆದ್ಯತೆಗೆ ತಕ್ಕಂತೆ ಬಸ್ ಆಯ್ಕೆ ಮಾಡಿ ಪ್ರಯಾಣಿಕರ ವಿವರಗಳನ್ನು ಭರ್ತಿ ಮಾಡಿ.
ಸುಲಭ ಪಾವತಿ: UPI, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ವಾಲೆಟ್‌ಗಳ ಮೂಲಕ ಹಣ ಪಾವತಿಸಿ.
ಇ-ಟಿಕೆಟ್ ಸ್ವೀಕರಿಸಿ: ಪಾವತಿ ಯಶಸ್ವಿಯಾದ ತಕ್ಷಣ ವಾಟ್ಸಾಪ್ ಹಾಗೂ ಇ-ಮೇಲ್‌ಗೆ ಇ-ಟಿಕೆಟ್ ಮತ್ತು ಬುಕ್ಕಿಂಗ್ ದೃಢೀಕರಣ ಸಂದೇಶ ಬರಲಿದೆ.
ವಾಟ್ಸಾಪ್‌ನಲ್ಲೇ ಟಿಕೆಟ್ ರದ್ದು (Cancellation) ಮಾಡುವ ಸೌಲಭ್ಯ : ವಾಟ್ಸಾಪ್ ಮೂಲಕ ಕಾಯ್ದಿರಿಸಿದ ಟಿಕೆಟ್‌ಗಳನ್ನು ಅದೇ ವಾಟ್ಸಾಪ್‌ನಲ್ಲಿ ಸುಲಭವಾಗಿ ರದ್ದುಗೊಳಿಸಬಹುದು.
ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ “Ticket Cancellation” ಆಯ್ಕೆಯನ್ನು ಆರಿಸಿಕೊಳ್ಳಿ.
ನಿಮ್ಮ PNR ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಬುಕ್ಕಿಂಗ್ ಸಮಯದಲ್ಲಿ ಪಡೆದ Transaction Password ನಮೂದಿಸುವ ಮೂಲಕ ಟಿಕೆಟ್ ರದ್ದುಗೊಳಿಸಬಹುದು.
ಭವಿಷ್ಯದ ಸಾರಿಗೆಗೆ ಬುನಾದಿ : 
‘ಒಂದು ಕರ್ನಾಟಕ ಮೊಬಿಲಿಟಿ ಆಪ್’ ಮುಂದಿನ ದಿನಗಳಲ್ಲಿ ಇತರ ಸಾರ್ವಜನಿಕ ಸಾರಿಗೆ ಹಾಗೂ ಮೊಬಿಲಿಟಿ ಸೇವೆಗಳನ್ನು ಏಕೀಕರಿಸಲು ತಾಂತ್ರಿಕ ಬುನಾದಿ ನಿರ್ಮಿಸಲಿದೆ. ತಂತ್ರಜ್ಞಾನ ಆಧಾರಿತ ಸುಗಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಸಹಾಯ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
24×7 ಕರೆ ಕೇಂದ್ರ: 080-26252625 ಅಥವಾ AWATAR ಸೆಲ್: 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ರವರೆಗೆ) ಸಂರ್ಕಿಸಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ‌ಡಾ. ಲತಾ ಟಿ.ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

Topics

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

Related Articles