ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಔಷಧೀಯ ಮತ್ತು ಸುಗಂಧಿತ ಸಸ್ಯಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ (Exploring Nature’s Pharmacy: Potentials of Medicinal and Aromatic Plants for Health, Livelihoods, Bio-economy and Conservation) ಎಂಬ ವಿಷಯದ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
ಈ ಸಮ್ಮೇಳನವು ದಿನಾಂಕ 2026 ರ ಜುಲೈ 16 ರಿಂದ 18 ರವರೆಗೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಅಕಾಡೆಮಿಯ ಪ್ರೊ. ಯು. ಆರ್. ರಾವ್ ವಿಜ್ಞಾನ ಭವನದ ಕಛೇರಿಯಲ್ಲಿ ನಡೆಯಲಿದೆ. ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ತಾಂತ್ರಿಕ ವಿಶೇಷ ಉಪನ್ಯಾಸಗಳನ್ನು ನೀಡಲಿದ್ದಾರೆ.
ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಹಾಗೂ ಯುವ ಉದ್ಯಮಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ.
ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ಪ್ರಬಂಧವನ್ನು (Research Paper) ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಅತ್ಯುತ್ತಮವಾಗಿ ಆಯ್ಕೆಯಾಗುವ ಸಂಶೋಧನಾ ಪ್ರಬಂಧಗಳಿಗೆ ನಗದು ಬಹುಮಾನ ನೀಡಲಾಗುವುದು.
ಆಸಕ್ತರು ಜುಲೈ 10 ರೊಳಗಾಗಿ ಲಿಂಕ್ https://forms.gle/
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9620767819 & 9743084194 ಹಾಗೂ ಜಾಲತಾಣ: https://kstacademy.in ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಸಕ್ತರು ಈ ರಾಷ್ಟ್ರೀಯ ಸಮ್ಮೇಳನದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

