ಕಬ್ಬನ್ ಪಾರ್ಕ್ ಆವರಣದಲ್ಲಿ ಆದೇಶ ಉಲ್ಲಂಘಿಸಿ ಕಟ್ಟಡ ನಿರ್ಮಾಣ: ವಾಕರ್ಸ್ ಅಸೋಸಿಯೇಷನ್ ಖಂಡನೆ

ಬೆಂಗಳೂರು: BENGALURU : ಕಬ್ಬನ್ ಪಾರ್ಕ್ನ (Cubbon Park) ವಲಯದಲ್ಲಿ ರಾಜ್ಯ ಸರ್ಕಾರದ ಉದ್ಯಾನಗಳ (ಸಂರಕ್ಷಣೆ) ಕಾಯ್ದೆಯನ್ನು ನಿರಂತರವಾಗಿ ಮತ್ತು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದು, ಹೈಕೋರ್ಟ್ (High Court) ಆದೇಶಕ್ಕೆ ವಿರುದ್ಧವಾಗಿ ವಿಶ್ವೇಶ್ವರಯ ಮ್ಯೂಸಿಯಂ (Vishweswaraiah museum) ಆವರಣದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ.  ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ (Walkers Association) ಅಧ್ಯಕ್ಷ ಎಸ್. ಉಮೇಶ್ (S.Umesh) ಒತ್ತಾಯಿಸಿದ್ದಾರೆ.

ಅಕ್ರಮ ನಿರ್ಮಾಣ ಮತ್ತು ನಿಯಂತ್ರಣರಹಿತ ವಾಣಿಜ್ಯೀಕರಣದಿಂದ ಕಬ್ಬನ್ ಪಾರ್ಕ್ನ ಪರಿಸರಕ್ಕೆ ಭಾರಿ ಅಪಾಯ ಎದುರಾಗಿದೆ. ಕಾನೂನು ಮತ್ತು ಪರಿಸರ ಸಂರಕ್ಷಣೆಯನ್ನು ಪರಿಗಣಿಸದೇ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಕಾನೂನು ಪರಿಪಾಲನೆ ಮಾಡಬೇಕಾದ ರಾಜ್ಯ ಪುರಾತತ್ವ ಇಲಾಖೆ ಪಾರ್ಕ್ ನ ತನ್ನ ಆವರಣದ ವ್ಯಾಪ್ತಿಯೊಳಗೆ ಶಾಶ್ವತ ಕಟ್ಟಡ ನಿರ್ಮಿಸುತ್ತಿದ್ದು, ಇದು ಉದ್ಯಾನ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ. ಈ ಪ್ರಮುಖ ಹಸಿರು ಪ್ರದೇಶದಲ್ಲಿ ಹೊಸ ಕಾಂಕ್ರಿಟ್ ನಿರ್ಮಾಣವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಸ್. ಉಮೇಶ್ ಅವರು, ತೋಟಗಾರಿಕೆ ಇಲಾಖೆ ಇಂತಹ ಅಕ್ರಮ ನಿರ್ಮಾಣಕ್ಕೆ ಸಹಕಾರ ನೀಡುತ್ತಿದೆ. ಕಬ್ಬನ್ ಪಾರ್ಕ್ನ ಸಂರಕ್ಷಣೆ ಮತ್ತು ರಕ್ಷಣೆಯ ಹೊಣೆ ಹೊತ್ತಿರುವ ತೋಟಗಾರಿಕೆ ಇಲಾಖೆ ಈ ಅಕ್ರಮ ನಿರ್ಮಾಣದ ಬಗ್ಗೆ ಕಣ್ಣುಮುಚ್ಚಿ ಕುಳಿತಿದೆ. ನಿಯಂತ್ರಣ ಕ್ರಮ ಕೈಗೊಳ್ಳದೇ ಸಂಪೂರ್ಣವಾಗಿ ನಿರ್ಲಕ್ಷ್ಯವಹಿಸಿದೆ ಎಂದು ಹೇಳಿದ್ದಾರೆ.

ತೋಟಗಾರಿಕೆ ಇಲಾಖೆಯ ಕೆಲವು ಭ್ರಷ್ಟ ಅಧಿಕಾರಿಗಳು ಪಾರ್ಕ್ನ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದು, ಪರಿಸರ ಸಂರಕ್ಷಣೆಗೆ ಬದಲಾಗಿ ಸ್ವಾರ್ಥಪರ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಪರಿಸರ ಹಾಟ್ಸ್ಪಾಟ್ ಅನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತನೆ ಮಾಡಲಾಗಿದೆ. ಕಬ್ಬನ್ ಪಾರ್ಕ್ ಅನ್ನು ಕ್ರಮಬದ್ಧವಾಗಿ ಒಂದು ಸ್ವಚ್ಛ ಪರಿಸರ ವಲಯದಿಂದ ಅಸ್ತವ್ಯಸ್ತ ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ. ಕಾಂಕ್ರೀಟ್ ಮತ್ತು ವಾಣಿಜ್ಯ ಚಟುವಟಿಕೆಗಳಿಂದ ಪಾರ್ಕ್ನಲ್ಲಿ ಉಸಿರು ಕಟ್ಟುವ ವಾತಾವರನ ನಿರ್ಮಾಣವಾಗಿದೆ.

ಪಾರ್ಕ್ ಆವರಣದಲ್ಲಿ ಅನಧಿಕೃತ ಅಂಗಡಿಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಆಯೋಜಿಸಲಾದ ಭಾರೀ ‘ಮಾವಿನ ಮೇಳ’ದಿಂದ ಅಪಾರ ಪ್ರಮಾಣದ ಕಸ, ಶಬ್ದ ಹಾಗೂ ಜನಸಂದಣಿ ಉಂಟಾಗಿ ಸ್ಥಳೀಯ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ತೀವ್ರ ಹಾನಿಯಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಕಬ್ಬನ್ ಪಾರ್ಕ್ ಅನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕೆ ಬಳಸುವುದಿಲ್ಲ” ಎಂದು ಭರವಸೆ ನೀಡಿದ್ದರು. ಆದರೆ ಅವರ ಕಣ್ಣಳತೆಯ ದೂರದಲ್ಲಿ ಇಂತಹ ಲೋಪಗಳು ಜರುಗುತ್ತಿವೆ ಎಂದು ಎಸ್. ಉಮೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಶ್ವಾಸಕೋಶವಾಗಿರುವ ಕಬ್ಬನ್ ಪಾರ್ಕ್ ನಾಶವಾಗಲು ಬಿಡುವುದಿಲ್ಲ. ಪುರಾತತ್ವ ಇಲಾಖೆ ತಕ್ಷಣವೇ ನಿರ್ಮಾಣ ಕಾರ್ಯವನ್ನು ನಿಲ್ಲಿಸಿ, ಈಗಾಗಲೇ ನಿರ್ಮಿಸಿರುವ ಭಾಗವನ್ನು ತೆರವುಗೊಳಿಸಬೇಕು. ಈ ಉಲ್ಲಂಘನೆಗಳಿಗೆ ಸಹಕಾರ ನೀಡಿರುವ ತೋಟಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಕಟ್ಟುನಿಟ್ಟಿನ ತನಿಖೆ ಆರಂಭಿಸಬೇಕು. ಕರ್ತವ್ಯ
ಉಲ್ಲಂಘನೆ ಮತ್ತು ನಂಬಿಕೆ ದ್ರೋಹ ಎಸಗಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ವೈಯಕ್ತಿಕವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಸೋಸಿಯೇಷನ್ ಸಿದ್ಧತೆ ನಡೆಸುತ್ತಿದೆ. ಕಬ್ಬನ್ ಪಾರ್ಕ್ ಅನ್ನು ಭವಿಷ್ಯದ ಪೀಳಿಗೆಗಳಿಗಾಗಿ ಉಳಿಸಲು ಈ ವಾಣಿಜ್ಯ ದಾಳಿಯ ವಿರುದ್ಧ ಹೋರಾಟದಲ್ಲಿ ಬೆಂಗಳೂರು ನಾಗರಿಕರು ಮತ್ತು ಪರಿಸರ ಹೋರಾಟಗಾರರು ಕೈಜೋಡಿಸಬೇಕು ಎಂದು ಎಸ್. ಉಮೇಶ್ ಮನವಿ ಮಾಡಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles