ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮದ್ಯದ ಅಂಶ ಆಧಾರಿತ ನೂತನ ಸುಂಕ ವ್ಯವಸ್ಥೆ ಜಾರಿ

ಮುಖ್ಯಮಂತ್ರಿಗಳು 2026-27ನೇ ಸಾಲಿನ ಆಯವ್ಯಯ (Budget Speech) ಭಾಷಣದಲ್ಲಿ ಘೋಷಿಸಿರುವಂತೆ, ಭಾರತದಲ್ಲೇ ಅತ್ಯಂತ ಪ್ರಥಮ ಬಾರಿಗೆ ಮದ್ಯದ ಅಂಶವನ್ನು (Alcohol-in-Beverage – AIB) ಆಧರಿಸಿದ ನೂತನ ಸುಂಕದ ವ್ಯವಸ್ಥೆಯನ್ನು ಮೇ 11, 2026 ರಿಂದ ಕರ್ನಾಟಕ ರಾಜ್ಯಾದ್ಯಂತ ಜಾರಿಗೆ ತರಲಾಗಿದೆ ಎಂದು ರಾಜ್ಯ ಅಬಕಾರಿ ಇಲಾಖೆ (Department of Excise) ಪ್ರಕಟಿಸಿದೆ.

ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸುವ ಈ ಪದ್ಧತಿಯು ಅತ್ಯಂತ ಯಶಸ್ವಿ ಮತ್ತು ‘ಚಿನ್ನದ ಗುಣಮಟ್ಟ’ (Gold Standard) ಎಂದು ಪರಿಗಣಿಸಲ್ಪಟ್ಟಿದೆ.

ನೂತನ ನೀತಿಯ ಪ್ರಮುಖ ಅಂಶಗಳು:

ಹೊಸ ನೀತಿಯಡಿ ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರವಾಗುವುದನ್ನು ಮುಕ್ತಗೊಳಿಸಲಾಗಿದೆ. ಮಾರುಕಟ್ಟೆ ಪರಿಗಣನೆ ಆಧಾರದ ಮೇಲೆ ಮದ್ಯದ ಉತ್ಪನ್ನಗಳನ್ನು ಆಯಾ ಸ್ಲ್ಯಾಬ್‍ಗಳಲ್ಲಿ ನಿರ್ಧರಿಸುವ ಸಂಪೂರ್ಣ ಅಧಿಕಾರವನ್ನು ಈಗ ಉತ್ಪಾದಕರಿಗೆ ನೀಡಲಾಗಿದೆ.

ಸರ್ಕಾರದ ಅಧಿಸೂಚನೆ ಸಂಖ್ಯೆ: FD 14 PES 2026, ದಿನಾಂಕ: 08-05-2026 ರ ಆದೇಶದಂತೆ, ಈ ಹಿಂದೆ ಚಾಲ್ತಿಯಲ್ಲಿದ್ದ 16 ಐ.ಎಂ.ಎಲ್ ಸ್ಲ್ಯಾಬ್‍ಗಳನ್ನು ಪುನರ್ವಿಮರ್ಶಿಸಿ ಹಾಗೂ ತರ್ಕಬದ್ಧಗೊಳಿಸಿ 8 ಸ್ಲ್ಯಾಬ್‍ಗಳಿಗೆ ಇಳಿಸಲಾಗಿದೆ. ರಾಜ್ಯದ ಗ್ರಾಹಕರಿಗೆ ಅಗ್ಗದ ದರದಲ್ಲಿ ಮದ್ಯ ದೊರಕುವಂತೆ ಮಾಡಲು ಕ್ರಮ ವಹಿಸಲಾಗಿದೆ.

ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಇರುವ ಮದ್ಯದ ದರಗಳಿಗೆ ಹೋಲಿಸಿದಾಗ, ಕರ್ನಾಟಕದಲ್ಲಿ ಅದಕ್ಕಿಂತ ಕಡಿಮೆ ಇರುವಂತೆ ಹಾಗೂ ತುಲನಾತ್ಮಕವಾಗಿ ಸಮನಾಗಿರುವಂತೆ ನೋಡಿಕೊಳ್ಳಲು ಐ.ಎಂ.ಎಲ್ ಸ್ಲ್ಯಾಬ್‍ಗಳನ್ನು ವೈಜ್ಞಾನಿಕವಾಗಿ ಮರುರಚಿಸಲಾಗಿದೆ.

ಕೆಲವು ಹೆಚ್ಚು ಮಾರಾಟವಾಗುವ ಮದ್ಯ ಮತ್ತು ಬಿಯರ್ ಬ್ರಾಂಡ್‍ಗಳ ಪರಿಷ್ಕøತ ಗರಿಷ್ಠ ಚಿಲ್ಲರೆ ಮಾರಾಟ ಬೆಲೆ ದರ ಪಟ್ಟಿಯನ್ನು (ಅಳತೆವಾರು ಮತ್ತು ಬೆಲೆಯ ಪ್ರಕಾರ) ಪ್ರಕಟಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಪ್ರಕಟಣೆ ತಿಳಿಸಿದೆ.

 

ಬಿಚ್ಚಾಲೆ ಬೃಂದಾವನ ಬಳಿಯ ಗೋಶಾಲೆ ಬೀಗ ಹಾಕಿದ ಅಧಿಕಾರಿಗಳು

2026ರ ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿ ಪ್ರಕಟ

ಭಾರತ ಚುನಾವಣಾ ಆಯೋಗವು 2026ರ ಜೂನ್ ಮತ್ತು ಜುಲೈ ತಿಂಗಳಲ್ಲಿ ನಿವೃತ್ತಿ ಹೊಂದಲಿರುವ ಒಟ್ಟು 10 ರಾಜ್ಯಗಳ 24 ರಾಜ್ಯಸಭಾ ಸದಸ್ಯರ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗಳನ್ನು ನಡೆಸಲು ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ರಾಜ್ಯದ 4 ಪ್ರಮುಖ ಸ್ಥಾನಗಳು ಸೇರಿದಂತೆ ವಿವಿಧ ರಾಜ್ಯಗಳ ನಿವೃತ್ತಿ ಹೊಂದಲಿರುವ ಸದಸ್ಯರ ಖಾಲಿ ಸ್ಥಾನಗಳಿಗೆ ಈ ಕೆಳಗಿನಂತೆ ಚುನಾವಣಾ ಪ್ರಕ್ರಿಯೆಗಳು ಜರುಗಲಿವೆ.

ಚುನಾವಣಾ ವೇಳಾಪಟ್ಟಿಯಂತೆ ಚುನಾವಣಾ ಅಧಿಸೂಚನೆ ಹೊರಡಿಸುವ ದಿನಾಂಕ 01 ಜೂನ್ 2026 (ಸೋಮವಾರ), ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 08 ಜೂನ್ (ಸೋಮವಾರ) ನಾಮಪತ್ರಗಳ ಪರಿಶೀಲನೆ 09 ಜೂನ್ (ಮಂಗಳವಾರ), ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ 11 ಜೂನ್ (ಗುರುವಾರ), ಮತದಾನದ ದಿನಾಂಕ 18 ಜೂನ್ (ಗುರುವಾರ), ಮತದಾನದ ಸಮಯ ಬೆಳಿಗ್ಗೆ 09:00 ಗಂಟೆಯಿಂದ ಸಾಯಂಕಾಲ 04:00 ಗಂಟೆಯವರೆಗೆ ಮತಗಳ ಎಣಿಕೆ ಕಾರ್ಯ 18 ಜೂನ್ (ಗುರುವಾರ) ಸಾಯಂಕಾಲ 05:00 ಗಂಟೆಗೆ, ಚುನಾವಣಾ ಪ್ರಕ್ರಿಯೆ 20 ಜೂನ್ (ಶನಿವಾರ) ಪೂರ್ಣಗೊಳ್ಳಲಿದೆ.

ವಿವಿಧ ರಾಜ್ಯಗಳನ್ನು ಪ್ರತಿನಿಧಿಸುತ್ತಿರುವ ಒಟ್ಟು 24 ರಾಜ್ಯಸಭಾ ಸದಸ್ಯರು ಬರುವ 2026ರ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ನಿವೃತ್ತಿ ಹೊಂದಲಿದ್ದಾರೆ. ಭಾರತೀಯ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ನಿವೃತ್ತಿ ಪ್ರಕ್ರಿಯೆ ನಡೆಯಲಿದೆ.

ಕರ್ನಾಟಕದ ನಾಲ್ಕು ಪ್ರಮುಖ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ನಿವೃತ್ತಿ ಹೊಂದಲಿರುವ ಸದಸ್ಯರ ಅಧಿಕೃತ ವಿವರಗಳು ಈ ಕೆಳಗಿನಂತಿವೆ:

ಕರ್ನಾಟಕ ರಾಜ್ಯದಿಂದ ಒಟ್ಟು 4 ಸದಸ್ಯರು 2026 ರ ಜೂನ್ 25 ರಂದು ನಿವೃತ್ತಿ ಹೊಂದಲಿದ್ದು, ಆ ಸ್ಥಾನಗಳಿಗೂ ಈ ಚುನಾವಣಾ ವೇಳಾಪಟ್ಟಿಯಂತೆ ಮತದಾನ ನಡೆಯಲಿದೆ. ರಾಜ್ಯಸಭೆ ಸದಸ್ಯರಾದ ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ, ಹೆಚ್.ಡಿ. ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅವರು ನಿವೃತ್ತಿ ಹೊಂದಲಿದ್ದಾರೆ.

ಆಂಧ್ರಪ್ರದೇಶದ ಅಯೋಧ್ಯ ರಾಮಿ ರೆಡ್ಡಿ ಅಲ್ಲಾ, ನತ್ವಾಮಿ ಪರಿಮಳ್, ಪಿಲ್ಲಿ ಸುಭಾಷ್ ಚಂದ್ರ ಬೋಸ್, ಸನಾ ಸತೀಶ್ ಬಾಬು, ಗುಜರಾತ್‍ನ ರಾಮ್‍ಭಾಯ್ ಹರ್ಜಿಭಾಯ್ ಮೊಕರಿಯಾ, ಅಮಿನ್ ನರಹರಿ ಹೀರಾಭಾಯ್, ಗೋಹಿಲ್ ಶಕ್ತಿಸಿನ್ಹಜಿ ಹರಿಚಂದ್ರಸಿನ್ಹಜಿ, ರಮಿಲಾ ಬೆಚರಭಾಯ್ ಬಾರಾ, ರಾಜಸ್ಥಾನದ ನೀರಜ್ ಡಾಂಗಿ, ರಾಜೇಂದ್ರ ಗೆಹ್ಲೋಟ್, ರವನೀತ್ ಸಿಂಗ್, ಮಧ್ಯಪ್ರದೇಶದ ಜಾರ್ಜ್ ಕುರಿಯನ್, ದಿಗ್ವಿಜಯ್ ಸಿಂಗ್, ಸುಮೇರ್ ಸಿಂಗ್ ಸೋಲಂಕಿ, ಜಾಖರ್ಂಡ್ ನ ದೀಪಕ್ ಪ್ರಕಾಶ್ ಮತ್ತು ಶಿಬು ಸೊರೇನ್ (ಶಿಬು ಸೊರೇನ್ ಅವರ ಸ್ಥಾನವು 04.08.2025 ರಿಂದಲೇ ತೆರವಾಗಿದೆ).
ಮಣಿಪುರದ ಮಹಾರಾಜ ಸನಾಜಾವೊಬಾ ಲೀಶೆಂಬಾ ಹಾಗೂ ಮೇಘಾಲಯದ ವಾನ್‍ವೈರಾಯ್ ಖರ್ಲುಖಿ ಅವರು 2026 ರ ಜೂನ್ 21 ರಂದು ನಿವೃತ್ತಿ ಹೊಂದಲಿದ್ದಾರೆ.

ಅರುಣಾಚಲ ಪ್ರದೇಶದ ನಬಮ್ ರೆಬಿಯಾ 2026 ರ ಜೂನ್ 23 ರಂದು ಹಾಗೂ ಮಿಜೋರಾಂನ ಕೆ. ವನ್‍ಲಾಲ್‍ವೇನಾ 2026 ರ ಜುಲೈ 19 ರಂದು ನಿವೃತ್ತಿ ಹೊಂದಲಿದ್ದಾರೆ.

ಬ್ಯಾಲೆಟ್ ಪತ್ರಿಕೆಯಲ್ಲಿ ಆದ್ಯತೆಗಳನ್ನು ಗುರುತಿಸಲು ಚುನಾವಣಾಧಿಕಾರಿಗಳು ಒದಗಿಸುವ ನಿಗದಿತ ವಿಶೇಷ ಸಂಯೋಜಿತ ನೇರಳೆ ಬಣ್ಣದ ಸ್ಕೆಚ್ ಪೆನ್ ಅನ್ನು ಮಾತ್ರ ಬಳಸಬೇಕಾಗಿರುತ್ತದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಪೆನ್ ಬಳಸುವಂತಿಲ್ಲ. ಚುನಾವಣಾ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಅಗತ್ಯ ವೀಕ್ಷಕರನ್ನು ನೇಮಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles