Bengaluru : ಮೇ 2026ರ ಒಂದೇ ತಿಂಗಳಿನಲ್ಲಿ ಟಿಕೆಟ್ ಪಡೆಯದೆ ಕೆಎಸ್ಆರ್ಟಿಸಿ (KSRTC) ಬಸ್ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರ ತಪಾಸಣೆಯ ವೇಳೆ, ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಸಾವಿರಾರು ಪ್ರಯಾಣಿಕರಿಗೆ ದಂಡ ವಿಧಿಸಿದ್ದು, ನಿಯಮ ಉಲ್ಲಂಘಟಿಸಿದ ಪ್ರಯಾಣಿಕರಿಂದ ಒಟ್ಟು ರೂ. 8,94,109/- ರೂ.ಗಳನ್ನು ದಂಡದ ರೂಪ(Fine) ದಲ್ಲಿ ವಸೂಲಿ ಮಾಡಲಾಗಿದೆ.
ಕೆಎಸ್ಆರ್ಟಿಸಿಯ ತನಿಖಾ ತಂಡಗಳು ರಾಜ್ಯ ಹಾಗೂ ನೆರೆರಾಜ್ಯಗಳಲ್ಲಿ ಸಂಚರಿಸುವ ಒಟ್ಟು 42,518 ಬಸ್ಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿವೆ. ತಪಾಸಣೆ ವೇಳೆ ಒಟ್ಟು 4,353 ಆದಾಯ ಸೋರಿಕೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 4,476 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುತ್ತಿದ್ದ ರೂ. 1,52,843/- ರೂ.ಗಳ ಸೋರಿಕೆಯನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ.
ಆದಾಯ ಸೋರಿಕೆಗೆ ಕಾರಣರಾದ ಹಾಗೂ ಕರ್ತವ್ಯ ಲೋಪ ಎಸಗಿದ ಸಂಸ್ಥೆಯ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧವೂ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮಗಳನ್ನು ಜರುಗಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಕೆಎಸ್ಆರ್ಟಿಸಿ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಲ್ಲಿ ವಿಶೇಷ ಮನವಿ ಮಾಡಿದ್ದು, ಬಸ್ಸುಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಸರಿಯಾದ ಹಾಗೂ ಸಿಂಧುವಾದ ಟಿಕೆಟ್ ಅಥವಾ ಪಾಸ್ಗಳನ್ನು ಪಡೆದೇ ಪ್ರಯಾಣಿಸಬೇಕು. ಆ ಮೂಲಕ ಸಂಸ್ಥೆಯೊಂದಿಗೆ ಸಹಕರಿಸಬೇಕಾಗಿ ಕೋರಿದೆ. ಮುಂಬರುವ ದಿನಗಳಲ್ಲೂ ಈ ತಪಾಸಣಾ ಕಾರ್ಯ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
