ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಂಡಲ ಬಿಜೆಪಿ ಕಛೇರಿಯಲ್ಲಿ ಅದ್ದೂರಿ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮ. ಪರಮಪೂಜ್ಯ ಬಿಜಿಎಸ್ ಆಟದ ಮೈದಾನದಿಂದ ನಾಗರಬಾವಿ ವೃತ್ತದವರೆಗೆ ಬೃಹತ್ ಶೋಭಾ ಯಾತ್ರೆ.
ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ನಾಡಪ್ರಭು ಕೆಂಪೇಗೌಡರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವೀರಗಾಸೆ, ಕಂಸಾಳೆ, ತಮಟೆವಾದ್ಯ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಜೊತೆಯಲ್ಲಿ ಸಾವಿರಾರು ಜನರು ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಕೆ.ಉಮೇಶ್ ಶೆಟ್ಟಿರವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ಚಿಂತಕ, ಜಾತ್ಯತೀತ ನಾಯಕ , ಪರಿಸರ ವಾದಿ ಮತ್ತು ಜನಪರ ಆಡಳಿತ ನೀಡಿದ ಮಹಾನ್ ನಾಯಕ.
ಬೆಂಗಳೂರುನಗರದಲ್ಲಿ ನಾಲ್ಕು ದಿಕ್ಕುಗಳಲ್ಲಿ ಗಡಿಗೋಪುರ ನಿರ್ಮಾಣ ಮಾಡಿದರು. ಬೆಂಗಳೂರುನಗರದಲ್ಲಿ ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸಿದರು. ಪರಿಸರ ಉಳಿಸಲು ಸಸಿಗಳನ್ನು ನೆಟ್ಟು ಹಸಿರುಮಯ ನಗರ ಮಾಡಿದರು. ಹಲವಾರು ದೇವಾಲಯಗಳನ್ನು ಕಟ್ಟಿಸಿದರು
ಗಾಣಿಗರ ಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಮಾಮೂಲ್ ಪೇಟೆ ಅಕ್ಕಪೇಟೆ ಉದ್ಯೋಗ ತಕ್ಕಂತೆ, ಸಮುದಾಯಗಳಿಗೆ ಪೇಟೆಗಳನ್ನು ನಿರ್ಮಿಸಿದರು. ಇಂದು ವಿಶ್ವಖ್ಯಾತಿ ನಗರವಾಗಿದೆ ಬೆಂಗಳೂರು. ಐ.ಟಿ. ಮತ್ತು ಬಿ.ಟಿ. ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಹೋಟೆಲ್ ಉದ್ಯಮ ಎಲ್ಲವು ಯಶಸ್ಸಿಯಾಗಿ ನಡೆಯುತ್ತಿದೆ. ಬೆಂಗಳೂರುನಗರದ ನಿವಾಸಿ ಎಂದರೆ ಹೆಮ್ಮೆಪಡುವ ಸಂಗತಿಯಾಗಿದೆ. ಬೆಂಗಳೂರುನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ ಆದರ್ಶ ಅವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರು ಸಾಗೋಣ ಎಂದು ಹೇಳಿದರು.
ಮಂಡಲ ಅಧ್ಯಕ್ಷರಾದ ಎನ್.ಬಿ.ಮಂಜುನಾಥ್ ರವರು,ರಾಮಪ್ಪ, ಕ್ರಾಂತಿರಾಜು ಎಸ್.ರಾಜು, ದೊಡ್ಡವೀರಯ್ಯ, ಮಾಜಿ ಪಾಲಿಕೆ ಸದಸ್ಯರುಗಳು, ಬಿಜೆಪಿ ಪಕ್ಷದ ಪ್ರಮುಖರು ಶೋಭಯಾತ್ರೆಯಲ್ಲಿ ಭಾಗವಹಿಸಿದ್ದರು.

