“ಮಕ್ಕಳ ಆಟ ಇನ್ ತೋಟ” ವಿಶೇಷ ಬೇಸಿಗೆ ಶಿಬಿರ

ಬೇಸಿಗೆ ಶಿಬಿರ ಮಕ್ಕಳಿಗೆ ಪ್ರಕೃತಿಯ ಪಾಠಶಾಲೆ – ಡಾ.ಎಸ್.ವಿ.ಸುರೇಶ
BENGALURU : ಬೇಸಿಗೆ  ಶಿಬಿರವು ಮಕ್ಕಳಿಗೆ ಪ್ರಕೃತಿಯ ಪಾಠಶಾಲೆಯಾಗಿದೆ. ವಿವಿಧ ಗಿಡಗಳು, ಹಣ್ಣುಗಳು ಹಾಗೂ ಪಕ್ಷಿಗಳನ್ನು ಕಂಡು ಮಕ್ಕಳು ಹೊಸ ವಿಚಾರಗಳನ್ನು ಕಲಿತಿದ್ದಾರೆ. ಈ ರೀತಿಯ ಬೇಸಿಗೆ ಶಿಬಿರಗಳು (Summer Camps) ಮಕ್ಕಳಿಗೆ ಪಠ್ಯಪುಸ್ತಕದ ಹೊರಗಿನ ಬದುಕಿನ ಪಾಠಗಳನ್ನು ಕಲಿಸುವ ನೈಜ ಅನುಭವದ ಶಾಲೆಯಾಗಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ (GKVK) ಗೌರವಾನ್ವಿತ ಕುಲಪತಿಗಳಾದ ಡಾ. ಎಸ್.ವಿ. ಸುರೇಶ (Dr.SV Suresh) ಅವರು ತಿಳಿಸಿದರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಮಕ್ಕಳ ಕಲಿಕೆಯ ಅಂಗವಾಗಿ ಮೇ 18 ರಿಂದ 22 ರವರೆಗೆ  5 ದಿನಗಳ ಕಾಲ ಆಯೋಜಿಸಲಾಗಿದ್ದ “ಮಕ್ಕಳ ಆಟ ಇನ್ ತೋಟ” ಗಿಡ, ಮರ, ಕೀಟ, ಚಿಟ್ಟೆಗಳ ಜೊತೆ ಒಂದು ವಾರ ಎಂಬ ಶೀರ್ಷಿಕೆಯಡಿಯ ವಿಶೇಷ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಈ ವಿಶೇಷ ಕಾರ್ಯಕ್ರಮದಲ್ಲಿ ತೋಟದಲ್ಲಿ ಮಕ್ಕಳ ಆಟವು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ, ಪ್ರಕೃತಿಯೊಂದಿಗೆ ಬೆರೆಯುವ ಅದ್ಭುತ ಅನುಭವವನ್ನು ನೀಡಿತು. ಹಸಿರು ವಾತಾವರಣದಲ್ಲಿ ಗಿಡ, ಮರಗಳು, ಬಣ್ಣ ಬಣ್ಣದ ಚಿಟ್ಟೆಗಳು ಹಾಗೂ ವಿವಿಧ ಕೀಟಗಳೊಂದಿಗೆ ಬೆರೆಯುವ ಮೂಲಕ ಮಕ್ಕಳು ಪ್ರಕೃತಿಯ ಸೌಂದರ್ಯವನ್ನು ಹತ್ತಿರದಿಂದ ಆಸ್ವಾದಿಸಿದರು. ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ತೋಟದಲ್ಲಿ ಓಡಾಟ, ಗಿಡ ನೆಡುವುದು, ಗಿಡಗಳಿಗೆ ನೀರು ಹಾಕುವುದು, ಸಸ್ಯಗಳ ಆರೈಕೆ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ಶಿಬಿರದ ಕೊನೆಯ ದಿನವಾದ ಇಂದು ಮಕ್ಕಳು ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ತೋಟದಲ್ಲಿನ ಹೂ, ಹಣ್ಣು, ಸುಗಂಧದ್ರವ್ಯ ಹಾಗೂ ಔಷಧೀಯ ಸಸ್ಯಗಳ ಬಗ್ಗೆ ತಮಗಿರುವ ಜ್ಞಾನವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಪರಿಸರ ಮಾಲಿನ್ಯ, ಪರಿಸರದ ಅಸಮತೋಲನ ಮತ್ತು ಪ್ರಕೃತಿ ಸಂರಕ್ಷಣೆಯ ಅಗತ್ಯತೆಯನ್ನು ಸರಳವಾಗಿ ಬಿಂಬಿಸುವ, ಪ್ಲಾಸ್ಟಿಕ್ ನಿವಾರಣೆಯಂತಹ ಜಾಗೃತಿ ಮೂಡಿಸುವ ಹಾಗೂ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿಸುವ ಸಂದೇಶವುಳ್ಳ ಅದ್ಭುತ ಮೂಕಾಭಿನಯವನ್ನು ಮಕ್ಕಳು ಪ್ರದರ್ಶಿಸಿದರು. ಈ ಶಿಬಿರದಲ್ಲಿ ಒಟ್ಟು 70 ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಸ್ತರಣಾ ನಿರ್ದೇಶಕರಾದ ಡಾ: ವೈ.ಎನ್. ಶಿವಲಿಂಗಯ್ಯ ಮತ್ತು ಸಹ ವಿಸ್ತರಣಾ ನಿರ್ದೇಶಕರಾದ ಡಾ: ಕೆ.ಪಿ. ರಘುಪ್ರಸಾದ್, ಡಾ: ಸಿ.ಕೆ. ಪ್ರಮಿಳ, ಡಾ: ಪ್ರಹ್ಲಾದ್ ಪಿ ಭಟ್ ಮತ್ತು ಡಾ: ಕೆ. ಪಲ್ಲವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles