ಅಭಾಸಾಪ- ನಾಕುತಂತಿ ಷಷ್ಟಿಪೂರ್ತಿ ನಾದ-೫ ವಿಶೇಷ ವ್ಯಾಖ್ಯಾನ ಕಾರ್ಯಕ್ರಮ

ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ ಎಂಬುದನ್ನು ಕನ್ನಡಿಗರು ಎಲ್ಲೆಡೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ೧೯೬೪ರಲ್ಲಿ  ಡಾ. ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ರಚಿಸಿದ “ನಾಕುತಂತಿ” ಕೃತಿಗೆ ೧೯೭೪ರಲ್ಲಿ ಜ್ಞಾನಪೀಠ ಲಭಿಸಿದೆ ಎನ್ನುವುದು ತಿಳಿದ ವಿಚಾರವೆ. ಈ ಕೃತಿ ರಚನೆಯಾಗಿ ಅರವತ್ತು ವರ್ಷಗಳಾಗಿದ್ದು, ಜ್ಞಾನಪೀಠ ಪುರಸ್ಕೃತಗೊಂಡು ಐವತ್ತು ವರ್ಷ ತುಂಬುತ್ತಿದೆ. ಈ ನೆನಪಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಬೆಂಗಳೂರು ಮಹಾನಗರ ಘಟಕದ ವತಿಯಿಂದ ‘ನಾಕುತಂತಿ ಷಷ್ಟಿಪೂರ್ತಿ’ ಸಂಭ್ರಮಾಚರಣೆಯನ್ನು ವರ್ಷವಿಡೀ ಆಚರಿಸಲು ತೀರ್ಮಾನಿಸಿದೆ. ಹೆಸರಾಂತ ಇತಿಹಾಸಕಾರರೂ ವಿಮರ್ಶಕರೂ ಆದ ಡಾ. ಜಿ. ಬಿ. ಹರೀಶರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ೧೨ ತಿಂಗಳು ಬೆಂಗಳೂರಿನ ವಿವಿಧೆಡೆಗಳಲ್ಲಿ ಒಂದೊಂದು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ.

ಡಾ.ಜಿ.ಬಿ.ಹರೀಶ ರವರು ನಾಕುತಂತಿಯ ಆಯ್ದ ಕವನಗಳ ಪರಿಚಯ ಹಾಗೂ ವಿಶ್ಲೇಷಣೆಯನ್ನು ನಡೆಸಿಕೊಡುತ್ತಾರೆ. ಪ್ರಮುಖವಾಗಿ ನಾಕುತಂತಿ ಸಾಹಿತ್ಯದಲ್ಲಿ ಸಂಸ್ಕೃತಿ, ತತ್ವಶಾಸ್ತ್ರ ಮತ್ತು ಅಧ್ಯಾತ್ಮದ ಹಿನ್ನೆಲೆ ಪರಿಚಯವನ್ನು ಈ ಸರಣಿಯ ಮುಖಾಂತರ ಮಾಡಲಾಗುತ್ತದೆ. ಇದು ಸಾಹಿತ್ಯಾಭ್ಯಾಸಿಗಳಿಗೆ ಕವನಗಳ ಒಳಗನ್ನು ತೆರೆದಿಟ್ಟು ಕಾವ್ಯಪ್ರಪಂಚಕ್ಕೆ ಆತ್ಮವಿಶ್ವಾಸದ ಪ್ರವೇಶಕ್ಕೆ ಅನುವಾಗುತ್ತದೆ. ಜತೆಗೆ ಇಂದಿನ ಪೀಳಿಗೆಗೆ ಬೇಂದ್ರೆಯವರ ಕಾವ್ಯ, ಸಂಸ್ಕೃತಿ ಮತ್ತು ಆಧ್ಯಾತ್ಮ ಪರಿಚಯಿಸುವ ಸದುದ್ದೇಶವನ್ನು ಹೊಂದಿದೆ.

ಈ ಸರಣಿಯ ನಾಲ್ಕನೇ ಕಾರ್ಯಕ್ರಮವನ್ನು ದಿನಾಂಕ ೨೧ ಜೂನ್‌ ೨೦೨೫, ಶನಿವಾರದಂದು ಸಂಜೆ ೪:೩೦ ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಶೇಷಾದ್ರಿಪುರಂ ಕಾಲೇಜುನಲ್ಲಿ (ಮೇನ್‌ ಕಾಲೇಜ್‌) ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕವಿ, ಕಾದಂಬರಿಕಾರ ಡಾ. ಜಿ.ಬಿ. ಹರೀಶ ಅವರು ನಾಕುತಂತಿ ಕವನದ ವಿಶೇಷ ವ್ಯಾಖ್ಯಾನವನ್ನು ನಡೆಸಿಕೊಡಲಿದ್ದಾರೆ. ಖ್ಯಾತ ಹಾಸ್ಯ ಬರಹಗಾರರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌, ಬೆಂಗಳೂರು ಮಹಾನಗರದ ಅಧ್ಯಕ್ಷರಾದ ಎಂ.ಎಸ್‌. ನರಸಿಂಹಮೂರ್ತಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಸುಗಮ ಸಂಗೀತ ಗಾಯಕಿ ರಮ್ಯ ವಸಿಷ್ಠ ಅವರು ಬೇಂದ್ರೆ ಗೀತಗಾಯನವನ್ನು ನಡೆಸಿಕೊದಲಿದ್ದಾರೆ.

ತಮ್ಮ ಘನತೆವೆತ್ತ ಮಾಧ್ಯಮದಲ್ಲಿ ಕಾರ್ಯಕ್ರಮದ ಕುರಿತು ಸುದ್ದಿ, ಕಾರ್ಯಕ್ರಮದ ದಿನ ಇಂದಿನ ಕಾರ್ಯಕ್ರಮ ವಿಭಾಗದಲ್ಲಿ ವಿವರವನ್ನು ಪ್ರಕಟಿಸಬೇಕು ಹಾಗೂ ಕಾರ್ಯಕ್ರಮದಂದು ತಮ್ಮ ಪ್ರತಿನಿಧಿಯನ್ನು ಕಳಿಸುವ ಮೂಲಕ ವರದಿ ಪ್ರಕಟಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ.

ದಿನಾಂಕ: 21 ಜೂನ್‌ ‌2025, ಶನಿವಾರ

ಸಮಯ: ಸಂಜೆ ೪:೩೦ ಗಂಟೆ

ಸ್ಥಳ ಶೇಷಾದ್ರಿಪುರಂ ಕಾಲೇಜು (ಮೇನ್‌), ಶೇಷಾದ್ರಿಪುರ, ಬೆಂಗಳೂರು – 560020

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles