ಅಭಾಸಾಪ- ನಾಕುತಂತಿ ಷಷ್ಟಿಪೂರ್ತಿ ನಾದ-೫ ವಿಶೇಷ ವ್ಯಾಖ್ಯಾನ ಕಾರ್ಯಕ್ರಮ

ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿವೆ ಎಂಬುದನ್ನು ಕನ್ನಡಿಗರು ಎಲ್ಲೆಡೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ೧೯೬೪ರಲ್ಲಿ  ಡಾ. ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ರಚಿಸಿದ “ನಾಕುತಂತಿ” ಕೃತಿಗೆ ೧೯೭೪ರಲ್ಲಿ ಜ್ಞಾನಪೀಠ ಲಭಿಸಿದೆ ಎನ್ನುವುದು ತಿಳಿದ ವಿಚಾರವೆ. ಈ ಕೃತಿ ರಚನೆಯಾಗಿ ಅರವತ್ತು ವರ್ಷಗಳಾಗಿದ್ದು, ಜ್ಞಾನಪೀಠ ಪುರಸ್ಕೃತಗೊಂಡು ಐವತ್ತು ವರ್ಷ ತುಂಬುತ್ತಿದೆ. ಈ ನೆನಪಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಬೆಂಗಳೂರು ಮಹಾನಗರ ಘಟಕದ ವತಿಯಿಂದ ‘ನಾಕುತಂತಿ ಷಷ್ಟಿಪೂರ್ತಿ’ ಸಂಭ್ರಮಾಚರಣೆಯನ್ನು ವರ್ಷವಿಡೀ ಆಚರಿಸಲು ತೀರ್ಮಾನಿಸಿದೆ. ಹೆಸರಾಂತ ಇತಿಹಾಸಕಾರರೂ ವಿಮರ್ಶಕರೂ ಆದ ಡಾ. ಜಿ. ಬಿ. ಹರೀಶರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ೧೨ ತಿಂಗಳು ಬೆಂಗಳೂರಿನ ವಿವಿಧೆಡೆಗಳಲ್ಲಿ ಒಂದೊಂದು ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ.

ಡಾ.ಜಿ.ಬಿ.ಹರೀಶ ರವರು ನಾಕುತಂತಿಯ ಆಯ್ದ ಕವನಗಳ ಪರಿಚಯ ಹಾಗೂ ವಿಶ್ಲೇಷಣೆಯನ್ನು ನಡೆಸಿಕೊಡುತ್ತಾರೆ. ಪ್ರಮುಖವಾಗಿ ನಾಕುತಂತಿ ಸಾಹಿತ್ಯದಲ್ಲಿ ಸಂಸ್ಕೃತಿ, ತತ್ವಶಾಸ್ತ್ರ ಮತ್ತು ಅಧ್ಯಾತ್ಮದ ಹಿನ್ನೆಲೆ ಪರಿಚಯವನ್ನು ಈ ಸರಣಿಯ ಮುಖಾಂತರ ಮಾಡಲಾಗುತ್ತದೆ. ಇದು ಸಾಹಿತ್ಯಾಭ್ಯಾಸಿಗಳಿಗೆ ಕವನಗಳ ಒಳಗನ್ನು ತೆರೆದಿಟ್ಟು ಕಾವ್ಯಪ್ರಪಂಚಕ್ಕೆ ಆತ್ಮವಿಶ್ವಾಸದ ಪ್ರವೇಶಕ್ಕೆ ಅನುವಾಗುತ್ತದೆ. ಜತೆಗೆ ಇಂದಿನ ಪೀಳಿಗೆಗೆ ಬೇಂದ್ರೆಯವರ ಕಾವ್ಯ, ಸಂಸ್ಕೃತಿ ಮತ್ತು ಆಧ್ಯಾತ್ಮ ಪರಿಚಯಿಸುವ ಸದುದ್ದೇಶವನ್ನು ಹೊಂದಿದೆ.

ಈ ಸರಣಿಯ ನಾಲ್ಕನೇ ಕಾರ್ಯಕ್ರಮವನ್ನು ದಿನಾಂಕ ೨೧ ಜೂನ್‌ ೨೦೨೫, ಶನಿವಾರದಂದು ಸಂಜೆ ೪:೩೦ ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಶೇಷಾದ್ರಿಪುರಂ ಕಾಲೇಜುನಲ್ಲಿ (ಮೇನ್‌ ಕಾಲೇಜ್‌) ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕವಿ, ಕಾದಂಬರಿಕಾರ ಡಾ. ಜಿ.ಬಿ. ಹರೀಶ ಅವರು ನಾಕುತಂತಿ ಕವನದ ವಿಶೇಷ ವ್ಯಾಖ್ಯಾನವನ್ನು ನಡೆಸಿಕೊಡಲಿದ್ದಾರೆ. ಖ್ಯಾತ ಹಾಸ್ಯ ಬರಹಗಾರರು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌, ಬೆಂಗಳೂರು ಮಹಾನಗರದ ಅಧ್ಯಕ್ಷರಾದ ಎಂ.ಎಸ್‌. ನರಸಿಂಹಮೂರ್ತಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಸುಗಮ ಸಂಗೀತ ಗಾಯಕಿ ರಮ್ಯ ವಸಿಷ್ಠ ಅವರು ಬೇಂದ್ರೆ ಗೀತಗಾಯನವನ್ನು ನಡೆಸಿಕೊದಲಿದ್ದಾರೆ.

ತಮ್ಮ ಘನತೆವೆತ್ತ ಮಾಧ್ಯಮದಲ್ಲಿ ಕಾರ್ಯಕ್ರಮದ ಕುರಿತು ಸುದ್ದಿ, ಕಾರ್ಯಕ್ರಮದ ದಿನ ಇಂದಿನ ಕಾರ್ಯಕ್ರಮ ವಿಭಾಗದಲ್ಲಿ ವಿವರವನ್ನು ಪ್ರಕಟಿಸಬೇಕು ಹಾಗೂ ಕಾರ್ಯಕ್ರಮದಂದು ತಮ್ಮ ಪ್ರತಿನಿಧಿಯನ್ನು ಕಳಿಸುವ ಮೂಲಕ ವರದಿ ಪ್ರಕಟಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ.

ದಿನಾಂಕ: 21 ಜೂನ್‌ ‌2025, ಶನಿವಾರ

ಸಮಯ: ಸಂಜೆ ೪:೩೦ ಗಂಟೆ

ಸ್ಥಳ ಶೇಷಾದ್ರಿಪುರಂ ಕಾಲೇಜು (ಮೇನ್‌), ಶೇಷಾದ್ರಿಪುರ, ಬೆಂಗಳೂರು – 560020

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles