ಶೇ 60 ಕಮಿಷನ್, ಸರಕಾರಿ ನೌಕರರ ಆತ್ಮಹತ್ಯೆ- ಇವು ಸಾಧನೆಯೇ?

ಬೆಂಗಳೂರು: ಮೂರು ವರ್ಷಗಳಲ್ಲಿ ನಮ್ಮ ಸಾಧನೆ ಇಂಥದ್ದೆಂದು ಕಾಂಗ್ರೆಸ್(Congress) ಮುಖಂಡರು ಹೇಳಲಿ ಎಂದು ಬಿಜೆಪಿ (BJP National General Secretary) ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ MLC ಸಿ.ಟಿ. ರವಿ (CT Ravi) ಅವರು ಸವಾಲು ಹಾಕಿದ್ದಾರೆ.
ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಹಗರಣಗಳೇ ನಿಮ್ಮ ಸಾಧನೆಯೇ? ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಲೂಟಿ ಹೊಡೆದು ನಮ್ಮ ಒಬ್ಬ ಸಚಿವ ಜೈಲಿಗೆ ಹೋದ ಎಂಬುದು ಸಾಧನೆಯೇ ಎಂದು ಪ್ರಶ್ನಿಸಿದರು. ಎಸ್.ಇ.ಪಿ., ಟಿಎಸ್‍ಪಿ ಹಣ ದುರುಪಯೋಗ ಸಾಧನೆಯೇ ಎಂದು ಕೇಳಿದರು.
ಸಾಧನೆಯ ಕಾರಣಕ್ಕಾಗಿ ಕೆಎಸ್‍ಆರ್‍ಟಿಸಿ ನೌಕರರು ಚಳವಳಿಗೆ ಕರೆ ಕೊಟ್ಟಿದ್ದಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. 3 ಗಂಟೆಯೂ ರೈತರ ಪಂಪ್‍ಸೆಟ್‍ಗಳಿಗೆ 3 ಫೇಸ್ ಕರೆಂಟ್ ಕೊಡುತ್ತಿಲ್ಲ. ಇದು ಸಾಧನೆಯೇ? 3 ವರ್ಷದಲ್ಲಿ ಕರ್ನಾಟಕದ ಜನರು ಹೆಮ್ಮೆ ಪಡುವಂತೆ, ತಲೆಯೆತ್ತಿ ನಿಲ್ಲುವಂತೆ, ಇಡೀ ದೇಶದಲ್ಲಿ ಹೇಳಿಕೊಂಡು ಓಡಾಡುವಂತೆ ಯಾವ ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದರು.
ಶೇ 60 ಕಮಿಷನ್- ಅದು ಸಾಧನೆಯೇ? ಸರಕಾರಿ ನೌಕರರ ಆತ್ಮಹತ್ಯೆ- ಅದು ಸಾಧನೆಯೇ? ಎಂದ ಅವರು, ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಕುರ್ಚಿಯಲ್ಲಿ ಎಷ್ಟು ದಿನ ಕುಳಿತಿರುತ್ತಾರೋ ಎಂಬ ಗ್ಯಾರಂಟಿ ಸಿದ್ದರಾಮಯ್ಯನವರಿಗೇ ಇಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದರು. ಅವರ ಕುರ್ಚಿ ಬಗ್ಗೆ ಗ್ಯಾರಂಟಿ ಇಲ್ಲದ ಅವರು, ಇನ್ಯಾವ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ ಎಂದು ಕೇಳಿದರು.

ಹೆಮ್ಮೆ ಪಟ್ಟುಕೊಳ್ಳುವ ಸಾಧನೆ ಏನಿದೆ?
ಕರ್ನಾಟಕ ರಾಜ್ಯದ ಸಮಗ್ರ ಸಾಲ 10 ಲಕ್ಷ ಕೋಟಿ ರೂಪಾಯಿ. ಸಾಲ ಮಾಡದೇ ಗ್ಯಾರಂಟಿ ಯೋಜನೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಸಾಧನೆ ಯಾವುದು ಎಂದು ಪ್ರಶ್ನೆ ಮಾಡಿದರು. ಹೆಮ್ಮೆ ಪಟ್ಟುಕೊಳ್ಳುವ ಸಾಧನೆ ಏನಿದೆ ಎಂದು ಕೇಳಿದರು.
ಪೆಟ್ರೋಲ್- ಡೀಸೆಲ್ ಮೇಲೆ ಕರ್ನಾಟಕ ಸರಕಾರ ಹಾಕಿದ ಸೆಸ್ ಜಾಸ್ತಿಯೇ ಅಥವಾ ಕೇಂದ್ರ ಸರಕಾರ ಹಾಕಿದ ಸೆಸ್ ಹೆಚ್ಚೇ ಎಂದು ಪ್ರಶ್ನಿಸಿದರು. ಕರ್ನಾಟಕ ಸರಕಾರ ಪೆಟ್ರೋಲ್- ಡೀಸೆಲ್ ಮೇಲೆ ಮೂರು ಬಾರಿ ಸೆಸ್ ಹಾಕಿದೆ ಎಂದು ಟೀಕಿಸಿದರು. ಕೇಂದ್ರ ಸರಕಾರ ಬೆಲೆ ಇಳಿಸಿದ ಮೇಲೂ ಸೆಸ್ ಹಾಕಿದ್ದು ಯಾಕೆ ಎಂದು ಕೇಳಿದರು. ಸೆಸ್ ಇಳಿಸಿ; ನಿಮ್ಮ ತೆರಿಗೆ ಹೆಚ್ಚೇ ಕೇಂದ್ರ ಸರಕಾರದ್ದು ಹೆಚ್ಚು ತೆರಿಗೆಯೇ ಎಂಬ ಚರ್ಚೆ ಆಗಲಿ ಎಂದು ಒತ್ತಾಯಿಸಿದರು.

ಉಪ ಚುನಾವಣೆಯಲ್ಲಿ ಜನಾದೇಶ ಖರೀದಿ
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಉಪ ಚುನಾವಣೆಯ ಗೆಲುವಿನ ಮರ್ಮ ಏನೆಂದು ಖಾಸಗಿಯಾಗಿ ಕೇಳಿದರೆ ಕಾಂಗ್ರೆಸ್ಸಿನವರೇ ಹೇಳುತ್ತಾರೆ. ಉಪ ಚುನಾವಣೆಯಲ್ಲಿ ಆಡಳಿತ ಪಕ್ಷವು ತನ್ನೆಲ್ಲ ಸಂಪತ್ತು, ಸಂಪನ್ಮೂಲ ಬಳಸಿ ಜನಾದೇಶವನ್ನು ಖರೀದಿ ಮಾಡುತ್ತದೆ. ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯಲ್ಲಿ ಗೆದ್ದಿದ್ದರು. 5ನೇ ತಿಂಗಳಿಗೆ ಸಾರ್ವತ್ರಿಕ ಚುನಾವಣೆ ಆಗಿ ಸೋತರು. ಇದಕ್ಕೇನು ಹೇಳುತ್ತೀರಿ? ಗುಂಡ್ಲುಪೇಟೆ, ನಂಜನಗೂಡು ಮಾತ್ರವಲ್ಲ; ಪಕ್ಕದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳೂ ಸೋತರು. ಇದಕ್ಕೆ ಏನು ಹೇಳುವಿರಿ ಎಂದು ಕೇಳಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles