ಸೋಲಿನ ಭಯದಿಂದ GBA ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಗ್ರೇಟರ್ ಬೆಂಗಳೂರು (ಜಿಬಿಎ) GBA ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲ್ಲುವ ಭರವಸೆ ಇಲ್ಲದ ಕಾರಣ ಪದೇ ಪದೇ ಚುನಾವಣೆಯನ್ನು ಮುಂದಕ್ಕೆ ಹಾಕುವ ನಾಟಕವಾಡುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Naryanaswamy) ಅವರು ಟೀಕಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ಚುನಾವಣೆಗೆ 2 ತಿಂಗಳು ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ (Supreme Court) ನೀಡಿದೆ.

ಮೂರು ತಿಂಗಳು ಕಾಲಾವಕಾಶವನ್ನು ಸರ್ಕಾರ ಕೇಳಿತ್ತು. ಆದರೆ ಎರಡು ತಿಂಗಳು ಮಾತ್ರ ನೀಡಿದೆ. ಚುನಾವಣೆಯ ಬಗ್ಗೆ ಸಮೀಕ್ಷೆ ಮಾಡಿಸಿದ್ದಾರೆ. ಆದರೆ ಅವರಿಗೆ ಗೆಲುವಿನ ವರದಿ ಸಿಕ್ಕಿಲ್ಲ. ಆದ್ದರಿಂದ ಹೇಗಾದರೂ ಮಾಡಿ ಚುನಾವಣೆಯನ್ನು ಮುಂದಕ್ಕೆ ಹಾಕಲು ನೋಡಿದ್ದರು ಎಂದು ದೂರಿದರು.
ಈಗಾಗಲೇ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚನೆ ಇತ್ತು. ಆದರೂ ಇವರು ಕೋರ್ಟ್ ಮೊರೆ ಹೋಗಿದ್ದರು. ಮತ್ತೆ ಮತ್ತೆ ಮನವಿ ಸಲ್ಲಿಸಿ ಮುಂದಕ್ಕೆ ಹಾಕಲು ನೋಡಿದ್ದರು ಎಂದು ಟೀಕಿಸಿದರು.
ಸೋಲು- ಗೆಲುವು ರಾಜಕೀಯದಲ್ಲಿ ಇದ್ದಿದ್ದೇ. ಒಂದು ಸಾರಿ ನಾವು ಗೆಲ್ಲಬಹುದು. ಇನ್ನೊಂದು ಬಾರಿ ಬೇರೆಯವರು ಗೆಲ್ಲಬಹುದು. ಆದರೆ ಯಾರೂ ವ್ಯವಸ್ಥೆಯನ್ನು ಕೆಡಿಸುವ ಕೆಲಸವನ್ನು ಮಾಡಬಾರದು. ಆದ್ದರಿಂದ ಕೋರ್ಟ್ ಆದೇಶವನ್ನು ಗೌರವಿಸಬೇಕು. ಇಲ್ಲದೇ ಹೋದರೆ ಮತ್ತಷ್ಟು ಸೋಲು ಕಾಂಗ್ರೆಸ್‍ಗೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ಕರ್ನಾಟಕವನ್ನೇ ತೆಗೆದು ಬೆಂಗಳೂರು ಮಾಡಿ…
ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡಿದರು. ಕೋಲಾರ ಮತ್ತು ಚಿಕ್ಕಬಳ್ಳಾಪುರವನ್ನೂ ಬೆಂಗಳೂರಿಗೆ ಸೇರಿಸುವ ಮಾತು ನಡೆಯುತ್ತಿದೆ. ಈಗ ತುಮಕೂರನ್ನು ಬೆಂಗಳೂರಿಗೆ ಸೇರಿಸಲು ಸರ್ಕಾರ ಹುನ್ನಾರ ನಡೆಸಿದೆ. ನಾಡಪ್ರಭು ಕೆಂಪೇಗೌಡ ಅವರ ನಿರ್ಮಿಸಿದ ಬೆಂಗಳೂರನ್ನು ಐದು ತುಂಡು ಮಾಡಿದ್ದೀರಿ. ಈ ರೀತಿ ಎಲ್ಲವನ್ನೂ ಬದಲಾಯಿಸುವ ಬದಲು ಇಡೀ ಕರ್ನಾಟಕವನ್ನೇ ತೆಗೆದು ಬೆಂಗಳೂರು ಅಂತ ಮಾಡಿದರೆ ಒಳ್ಳೆಯದು. ಆಗ ಯಾವುದನ್ನೂ ಯಾವುದಕ್ಕೆ ಸೇರಿಸುವ ಪ್ರಮೇಯವೇ ಇರುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಖಂಡ ಕರ್ನಾಟಕ ಎಂಬುದು ನಮ್ಮ ಅಸ್ಮಿತೆ. ಅದರಲ್ಲಿ ಜಿಲ್ಲೆಯ ಹೆಸರುಗಳು, ತಾಲೂಕುಗಳು ಸಹಜವಾಗಿ ಇರುತ್ತವೆ. ಅದನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಅದನ್ನು ಇದನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಲ್ಲಾ ಯಾಕೆ. ಇದೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಕೇಳಿದರು.
ಬೆಂಗಳೂರನ್ನು ವಿಸ್ತಾರವಾಗಿ ಬೆಳೆಸುವ ಬದಲು ತುಮಕೂರು, ಕೋಲಾರ ಮೈಸೂರನ್ನು ಬೆಳೆಸಲು ಮೂಲಸೌಕರ್ಯ ಮತ್ತು ಸೌಲಭ್ಯ ನೀಡಿ. ಆನೇಕಲ್‍ನಲ್ಲಿ ರೈತರ ಫಲವತ್ತಾದ ಜಮೀನನ್ನು ಗೃಹ ಮಂಡಳಿ ಹೆಸರಲ್ಲಿ ಕ್ರಿಕೆಟ್ ಸ್ಟೇಡಿಯಂ ಮಾಡ್ತಾ ಇದ್ದಾರೆ. ಮನೆಗಳನ್ನು ನಿರ್ಮಿಸಲು ರೈತರಿಂದ ಜಮೀನು ಪಡೆದು ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಇದು ಲೂಟಿಗಾಗಿ ಮಾಡುತ್ತಿರುವುದೇ ಹೊರತು ಬೆಂಗಳೂರಿನ ಅಭಿವೃದ್ಧಿಗಾಗಿ ಅಲ್ಲ. ದೂರ ಇರುವ ತುಮಕೂರು ಬೆಳೆಸುವ ಬದಲು ಹತ್ತಿರದ ಪಟ್ಟಣಗಳನ್ನು ಬೆಳೆಸಿ. ಎಲ್ಲಕ್ಕೂ ಬೆಂಗಳೂರು ಹೆಸರು ಕೊಡುವುದು ಹಾಸ್ಯಾಸ್ಪದ ಎಂದು ಗೇಲಿ ಮಾಡಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles