ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ 2025-26 ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,  ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಹಾಗು ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://www.sevasindu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಹಾಗೂ  ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು  https://www.kaushalkar.com ಜಾಲತಾಣದಲ್ಲಿ   ಜೂನ್ 30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://www.dbcdc.karnataka.gov.in  ಅಥವಾ ಸಹಾಯವಾಣಿ: 080-23539601 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿವಾಳ ಮಾಚಿದೇವ ಸಮುದಾಯದವರಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿ. ವತಿಯಿಂದ 2025-26 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು  ಕರ್ನಾಟಕ ಮಡಿವಾಳ ಮಾಚಿದೇವ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

   ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://www.sevasindu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಹಾಗೂ  ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು  https://www.kaushalkar.com ಜಾಲತಾಣದಲ್ಲಿ   ಜೂನ್ 30 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: https://www.kmmd.karnataka.gov.in  ಅಥವಾ ನಿಗಮದ ಸಹಾಯವಾಣಿ: 080-23539601 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿ. ವತಿಯಿಂದ 2025-26 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ (ಬ್ಯಾಂಕ್‍ ಗಳ ಸಹಯೋಗದೊಂದಿಗೆ) ಹಾಗೂ ವಿದೇಶಿ ವ್ಯಾಸಂಗ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ – ಜಿ ಜನ ಸ್ನೇಹಿ ಕೇಂದ್ರ ಮತ್ತು ನಾಗರೀಕರ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ನಲ್ಲಿ ಜುಲೈ 2 ರೊಳಗೆ ಸಲ್ಲಿಸಬಹುದು.

2023-24 ಹಾಗೂ 2024-25ನೇ ಸಾಲಿನಲ್ಲಿ ಯೋಜನೆಗೆ ಅರ್ಜಿಸಲ್ಲಿಸಿರುವ ರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ: 080-223539601 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ  ಸೇರಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ಹಾಗೂ ವಕೀಲ ವೃತ್ತಿಯ ತರಬೇತಿ ಭತ್ಯೆ ಮಂಜೂರಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2 ವರ್ಷದೊಳಗೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಆಸಕ್ತ ಕಾನೂನು ಪದವೀಧರ ಅಭ್ಯರ್ಥಿಗಳು, ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು ಇಲ್ಲಿ  ನಿಗದಿತ ಅರ್ಜಿ ನಮೂನೆಗಳನ್ನು ಕಚೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಿ  ಜುಲೈ 10 ರ ಸಂಜೆ 4.30ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22867628 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಶಿಶು ಅಭಿವೃದ್ಧಿ ಯೋಜಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ರಾಜ್ಯ ಯೋಜನೆಯ ಅಂಗವಾಡಿ ಕಾರ್ಯಕರ್ತೆಯರ 18 ಹುದ್ದೆ ಹಾಗೂ ಸಹಾಯಕಿಯರ 92 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ,  ಬೆಂಗಳೂರು ರಾಜ್ಯ ಯೋಜನೆ, 1ನೇ ಮಹಡಿ, ಬಿಬಿಎಂಪಿ ಕಟ್ಟಡ, ಎನ್.ಆರ್.ಕಾಲೋನಿ,  ಬೆಂಗಳೂರು ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್ 30 ರ ಸಂಜೆ 5.30 ರೊಳಗೆ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂರವಾಣಿ: 080-26601917 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ರಾಜ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾಗ್ಯಲಕ್ಷ್ಮೀ  ಯೋಜನೆಯ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಮಂಜೂರು

ಬೆಂಗಳೂರು ನಗರ ಜಿಲ್ಲೆಜೂ.13 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು  1520 ಫಲಾನುಭವಿಗಳು ನೋಂದಣಿಯಾಗಿದ್ದು, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಎಲ್.ಐ.ಸಿ ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದ್ದು ಎಲ್ಲಾ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ರಾಜ್ಯ ಯೋಜನೆ ಕಚೇರಿ, 1ನೇ ಮಹಡಿ, ಬಿಬಿಎಂಪಿ ಕಟ್ಟಡ, ಎನ್.ಆರ್.ಕಾಲೋನಿ,  ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ರಾಜ್ಯ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles