ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ 6ನೇ ಚಾತುರ್ಮಾಸ್ಯ ಮಹೋತ್ಸವವು ಬೆಂಗಳೂರಿನ ಯಲಹಂಕ–ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ(Rajanukunte) ಸಮೀಪದ ಕಾಕೋಳು ಶ್ರೀ ವೇಣುಗೋಪಾಲ ಸ್ವಾಮಿ (Kaakola Sri Venugopala Swamy) ದೇವಸ್ಥಾನದಲ್ಲಿ ನಡೆಯುತ್ತಿದೆ.
ಶ್ರೀಪಾದರಾಜರಿಂದ ಪ್ರತಿಷ್ಠಿತ ಬೃಂದಾವನಾಂತರ್ಗತ ಚತುರ್ಭುಜ ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಶ್ರೀ ವ್ಯಾಸರಾಜರಿಂದ ಸ್ಥಾಪಿತ ಕಂಬದ ಆಂಜನೇಯಸ್ವಾಮಿಯ ದಿವ್ಯಸನ್ನಿಧಿಯಲ್ಲಿ ಪಾಂಚಜನ್ಯ ಪ್ರತಿಷ್ಠಾನ ಹಾಗೂ ತಿರುಮಲ ತಿರುಪತಿ ದೇವಸ್ಥಾನದ ಹಿಂದೂ ಧರ್ಮ ಪ್ರಚಾರ ಪರಿಷತ್ ಸಹಯೋಗದಲ್ಲಿ ಪುಣ್ಯತಮವಾದ ಚಾತುರ್ಮಾಸ್ಯ ಅವಧಿಯಲ್ಲಿ ಆ.16ರಂದು ಶ್ರೀಪಾದರ 85ನೇ ವರ್ಧಂತಿ: ಅಂಗವಾಗಿ ರೌದ್ರಿ ಶಾಂತಿ ,ಧನ್ವಂತರಿ ಹೋಮ ಹಾಗೂ ಮೃತ್ಯುಂಜಯ ಹೋಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಾಣೇಶ್ ಪಿ. ಭಾರದ್ವಾಜ್ ತಂಡದಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಾತುರ್ಮಾಸ್ಯ ಸ್ವಾಗತ ಸಮತಿ ಗೌರವಾಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಮತ್ತು ಶ್ರೀಮಠದ ಕಾರ್ಯದರ್ಶಿ ಭದ್ರಾವತಿ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಾತುರ್ಮಾಸ್ಯದ ಅವಧಿಯಲ್ಲಿ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳಲು ಆಸಕ್ತ ಭಕ್ತರು: 91418 26180/ 63642 59787 ಸಂಪರ್ಕಿಸಬಹುದು.


