ಜೂ. 9ರಂದು ಪ್ರಕಾಶನಗರ ರಾಯರ ಮಠದ 67ನೇ ಪ್ರತಿಷ್ಠಾಪನಾ ವರ್ಧಂತಿ

ಶ್ರೀ ಸುವಿದ್ಯೇಂದ್ರತೀರ್ಥರ ಸಾನ್ನಿಧ್ಯದಲ್ಲಿ ವಿವಿಧ ಕಾರ್ಯಕ್ರಮ

ಪವನ ಪರಿಮಳ ಪ್ರಸಾರಿಣೀ ಸಮಿತಿಯ 40ನೇ ವಾರ್ಷಿಕೋತ್ಸವ

ಬೆಂಗಳೂರು: ಪ್ರಕಾಶನಗರದ 10ನೇ ಮುಖ್ಯರಸ್ತೆ ಆರನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಾನದ
67ನೇ ಪ್ರತಿಷ್ಠಾಪನಾ
ವರ್ಧಂತಿ ಮಹೋತ್ಸವ ಜೂನ್ 9ರಂದು ಆಯೋಜನೆಗೊಂಡಿದೆ.
ಇದೇ ಸಂದರ್ಭದಲ್ಲಿ ಶ್ರೀ ಮಠದ ಪವನ ಪರಿಮಳ ಪ್ರಸಾರಿಣಿ ಸಮಿತಿಯ 40ನೇ ವಾರ್ಷಿಕೋತ್ಸವವೂ ನೆರವೇರಲಿದೆ.
ಶ್ರೀ ಸುವಿದ್ಯೇಂದ್ರತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿವೆ.

ಅಂದು ಬೆಳಗ್ಗೆ 6 ಗಂಟೆಗೆ ರಾಯರ ಬೃಂದಾವನಕ್ಕೆ ಮಧು ಅಭಿಷೇಕ, ವಿಶೇಷ ಫಲ ಪಂಚಾಮೃತ ಅಭಿಷೇಕ ನಂತರ ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ ನೆರವೇರಲಿದೆ.

ಬೆಳಗ್ಗೆ 10 ಗಂಟೆಗೆ ಶ್ರೀ ಸುವಿದ್ಯೇಂದ್ರತೀರ್ಥ ಸ್ವಾಮೀಜಿ ಅವರಿಂದ ಸಂಸ್ಥಾನ ಪೂಜೆ 12-30ಕ್ಕೆ ಶ್ರೀಗಳಿಂದ ಶ್ರೀ ಗುರುರಾಯರಿಗೆ ಕನಕ ಅಭಿಷೇಕ ನೆರವೇರಲಿದೆ.

ವಿವಿಧ ಕ್ಷೇತ್ರದ ಗಣ್ಯರಿಗೆ ಗೌರವಾರ್ಪಣೆ:
ಶ್ರೀ ಮಠದ ಆವರಣದಲ್ಲಿ ಸಂಜೆ ಆರು ಮೂವತ್ತಕ್ಕೆ ವರ್ಧಂತಿ ಉತ್ಸವದ ಅಂಗವಾಗಿ ವಿವಿಧ ರಂಗದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತತ್ವಜ್ಞಾನ ಕ್ಷೇತ್ರದ ಪಂಡಿತ ಆರ್. ವೆಂಕಟೇಶ ಆಚಾರ್ಯ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರದ ಡಾ. ಅರಳುಮಲ್ಲಿಗೆ
ಪಾರ್ಥಸಾರಥಿ, ವೈದ್ಯಕೀಯ ಕ್ಷೇತ್ರದ ಡಾ.ಕೆ .ಎಂ . ಸೋಮಶೇಖರಮೂರ್ತಿ, ಶಿಕ್ಷಣ ಕ್ಷೇತ್ರದ ಸಾಧಕ ಬಿ. ಕೆ. ಜಯಸಿಂಹ ಅವರನ್ನು ಗೌರವಿಸಲಾಗುವುದು.

ನಂತರ ವಿದ್ಯಾರ್ಥಿ ಮತ್ತು ಆರೋಗ್ಯನಿಧಿ ವಿತರಣೆ, ಶ್ರೀ ಸುವಿದ್ಯೇಂದ್ರತೀರ್ಥರಿಂದ ಅನುಗ್ರಹ ಸಂದೇಶವಿದೆ. ಭಕ್ತಾದಿಗಳು ಆಗಮಿಸಬೇಕು ಎಂದು ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿ ಅಧ್ಯಕ್ಷ ಎನ್. ಜಿ. ವೆಂಕಟೇಶಮೂರ್ತಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

 

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

Related Articles