ಭಾರತೀಯರ ಕೆಲಸದ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ ಜಾಗತಿಕ ಕಾರ್ಮಿಕ ಮಾರುಕಟ್ಟೆಯಲ್ಲಿ ಭಾರೀ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಭಾರತ, ಪಾಕ್, ಬಾಂಗ್ಲಾದೇಶ, ನೈಜೀರಿಯಾ ಸೇರಿದಂತೆ ೧೪ ದೇಶಗಳ ನಾಗರಿಕರಿಗೆ ಕೆಲಸದ ವೀಸಾ (ಬ್ಲಾಕ್ ವರ್ಕ್ ವೀಸಾ) ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ. ೨೦೨೫ರ ಜೂನ್‌ವರೆಗೆ ಈ ನಿರ್ಧಾರವು ಜಾರಿಯಲ್ಲಿರಲಿದೆ ಎಂದು ವರದಿಗಳು ತಿಳಿಸಿದ್ದು, ಹೊರ ದೇಶದ ಕಾರ್ಮಿಕರಲ್ಲಿ ಗೊಂದಲ ಮತ್ತು ಆತಂಕವನ್ನು ಉಂಟುಮಾಡಿದೆ.


ಸೌದಿ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಈ ನಿರ್ಧಾರವನ್ನು ಘೋಷಿಸಿರುವುದು. ಕಾರ್ಮಿಕ ನಿರ್ವಹಣಾ ವೇದಿಕೆಯಾದ `ಕಿವಾ’ದಿಂದ ಬ್ಲಾಕ್ ವೀಸಾ ಅರ್ಜಿ ಸೌಲಭ್ಯವನ್ನು ತೆಗೆದುಹಾಕಲಾಗಿದೆ. ಈ ವೀಸಾಗಳು ಕಂಪನಿಗಳಿಗೆ ಬೃಹತ್ ಪ್ರಮಾಣದಲ್ಲಿ ಉದ್ಯೋಗಿಗಳ ನೇಮಿಸಿಕೊಳ್ಳಲು ಸಹಾಯಕವಾಗಿದ್ದವು ಎನ್ನಲಾಗಿದೆ. ಆದರೆ, ಈಗ ೧೪ ದೇಶಗಳಿಂದ ಕಾರ್ಮಿಕರನ್ನು ತರಲು ಕಂಪನಿಗಳಿಗೆ ಸಾಧ್ಯವಾಗದಿರುವುದರಿಂದ, ವಿಶೇಷವಾಗಿ ನಿರ್ಮಾಣ, ಆತಿಥ್ಯ ಮತ್ತು ಸೇವಾ ಕ್ಷೇತ್ರಗಳು ಗಂಭೀರ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ.
ವಿದೇಶಿ ಕಾರ್ಮಿಕರನ್ನು ಅವಲಂಬಿಸಿರುವ ಕಂಪನಿಗಳಿಗೆ ತಕ್ಕಮಟ್ಟಿನ ಸಮಸ್ಯೆಗಳು ಎದುರಾಗಿವೆ. ವಿಶೇಷವಾಗಿ, ಸೌದಿಯ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ನಿರ್ಮಾಣ ವಲಯಕ್ಕೆ ಈ ನಿರ್ಬಂಧವು ಕೂಡಾ ದೊಡ್ಡ ಹಿನ್ನಡೆಯಾಗಿದೆ ಎನ್ನಬಹುದು. ಈ ಕ್ರಮದ ಹಿಂದಿನ ನಿಖರ ಕಾರಣವನ್ನು ಸೌದಿ ಅರೇಬಿಯಾದ ಸ್ಪಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ, ಇದು `ವಿಷನ್ ೨೦೩೦’ ಯೋಜನೆಯ ಭಾಗವಾಗಿ ಸ್ಥಳೀಯ ನಾಗರಿಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೈಗೊಂಡಿರಬಹುದು ಎಂದು ಕೆಲವರ ಅಭಿಪ್ರಾಯ. ಪ್ರವಾಸೋದ್ಯಮ, ಚಿಲ್ಲರೆ ವ್ಯಾಪಾರ, ಇತರ ಕ್ಷೇತ್ರಗಳಲ್ಲಿ ಸೌದಿ ನಾಗರಿಕರ ಭಾಗವಹಿಸುವಿಕೆ ಉತ್ತೇಜಿಸುವ ಗುರಿ ಈ ಯೋಜನೆ ಹೊಂದಿರಲಿದೆ. ಭಾರತೀಯ ಕಾರ್ಮಿಕರಿಗೆ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಗಲ್ಫ್ ರಾಷ್ಟçಗಳಲ್ಲಿ ಉದ್ಯೋಗಕ್ಕಾಗಿ ಸೌದಿಯನ್ನೇ ಅವಲಂಬಿಸಿರುವ ಹಲವು ಭಾರತೀಯರಿಗೆ ಈ ನಿರ್ಬಂಧವು ಆರ್ಥಿಕ ಸಂಕಷ್ಟ ಉಂಟುಮಾಡಬಹುದು. ಭಾರತವು ಈ ನಿಟ್ಟಿನಲ್ಲಿ ಸೌದಿ ಅಧಿಕಾರಿಗಳೊಂದಿಗೆ ಸೂಕ್ತ ಚರ್ಚೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ನಡೆಯುತ್ತಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles