ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ?

ಸಿಎಂ, ಡಿಸಿಎಂ ತಲೆದಂಡ ಆಗದೆ ವಿರಮಿಸೆವು:
ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕÀ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ.ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಆದ ಕಾರ್ಯಕ್ರಮ ನಾನು ನೋಡಿಕೊಂಡೆ. ನನಗೆ ಬೇರೆ ಯಾವುದೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗಮನ ಸೆಳೆದರು. ಹಾಗಿದ್ದರೆ ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ? ಈ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಡಿ.ಕೆ.ಶಿವಕುಮಾರ್? ಪರಮೇಶ್ವರ್ ಅವರೇ? ಅಥವಾ ಮುಖ್ಯ ಕಾರ್ಯದರ್ಶಿಗಳೇ? ಎಂದು ಕೇಳಿದರು.
ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ‘ಯು ಮಸ್ಟ್ ರಿಸೈನ್’ ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. 11 ಜನರ ಸಾವಿನ ಪ್ರಕರಣದಲ್ಲಿ ನೀವೇ ಆರೋಪಿ. ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಯವರ ಕ್ರೆಡಿಟ್ ವಾರ್‍ನಲ್ಲಿ ರಾಜ್ಯ ಇವತ್ತು ಕಪ್ಪು ಛಾಯೆಯಲ್ಲಿದೆ ಎಂದು ನುಡಿದರು.
ಮಾನ್ಯ ರಾಜ್ಯಪಾಲರು ಬರುವ ವೇಳೆ ಶಿಷ್ಟಾಚಾರ ಪಾಲಿಸಿಲ್ಲ. ಸರಕಾರವು ಶಿಷ್ಟಾಚಾರಗಳನ್ನು ಉಲ್ಲಂಘಿಸಿದೆ ಎಂದು ಅವರು ಆಕ್ಷೇಪಿಸಿದರು. ಸಾಂವಿಧಾನಿಕ ಶಿಷ್ಟಾಚಾರ ಉಲ್ಲಂಘನೆಗೆ ಸಿಎಂ, ಡಿಸಿಎಂ ಕಾರಣರಾಗಿದ್ದಾರೆ ಎಂದು ಟೀಕಿಸಿದರು. ಡಿಪಿಆರ್ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಇಂಚಿಂಚು ಮಾಹಿತಿ ಇರಬೇಕಿತ್ತು. ಅವರಿಗೆ ಏನು ಆದೇಶ ಇತ್ತೆಂಬ ತನಿಖೆ ಆಗಲಿ ಎಂದು ಒತ್ತಾಯಿಸಿದರು.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles