“ ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ ”

ಮುಂಬರುವ “ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ” ಯನ್ನು ದಿನಾಂಕ:26/06/2025 ರಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯವರಿಂದ ಆಯೋಜಿಸಲಾಗಿದ್ದು, ಇದು ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಮಾದಕ ವಸ್ತು ವ್ಯಾಪಾರದ ವಿರುದ್ಧದ ಹೋರಾಟವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಾಗತಿಕ ಉಪಕ್ರಮವಾಗಿದೆ. ಈ ವರ್ಷದ ಘೋಷವಾಕ್ಯವು “ಸರಪಳಿಗಳನ್ನು ಮುರಿಯುವುದು: ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಎಲ್ಲರಿಗೂ ಪುನಶ್ಚೇತನಗೊಳಿಸುವಿಕೆ” ಮಾದಕ ವಸ್ತು ತಡೆಗಟ್ಟುವಿಕೆಯು, ಸುಲಭವಾಗಿ ಲಭ್ಯವಿರುವ ಚಿಕಿತ್ಸೆ ಮತ್ತು ಸುಸ್ಥಿರ ಚೇತರಿಕೆಯ ಮೂಲಕ ಮಾದಕ ವಸ್ತು ಅವಲಂಬನೆಯನ್ನು ನಿರ್ಮೂಲನೆ ಮಾಡಲು ಸಮಗ್ರ ಪ್ರಯತ್ನಗಳ ಮಹತ್ವವನ್ನು ಒತ್ತಿಹೇಳುತ್ತದೆ.

ಈ ಮಹತ್ವದ ದಿನವು ಯುವ ಜನತೆ, ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಕಾರ್ಮಿಕ ವರ್ಗ, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಎಲ್ಲಾ ಹಂತದ ನಾಗರಿಕರು ಒಟ್ಟಾಗಿ ಸೇರಿ, ಜಾಗೃತಿ ಮೂಡಿಸುವಲ್ಲಿ, ಜ್ಞಾನವನ್ನು ಹಂಚಿಕೊಳ್ಳುವಲ್ಲಿ ಮತ್ತು ಮಾದಕ ವಸ್ತು ಮುಕ್ತ ಸಮಾಜವನ್ನು ಉತ್ತೇಜಿಸುವ ಉಪಕ್ರಮಗಳನ್ನು ಬೆಂಬಲಿಸುವಲ್ಲಿ, ಸಕ್ರಿಯವಾಗಿ ಭಾಗವಹಿಸಲು ಕರೆ ನೀಡುತ್ತದೆ.

ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು:
ಜಾಗೃತಿ ಮೆರವಣಿಗೆಗಳು ಮತ್ತು ರಸ್ತೆ ನಡಿಗೆ.
ತಜ್ಞರು ಮತ್ತು ಮಾದಕ ವಸ್ತು ವಿಮುಕ್ತ ವ್ಯಕ್ತಿಗಳೊಂದಿಗೆ ಚರ್ಚೆಗಳು.
ತಡೆಗಟ್ಟುವಿಕೆ ಮತ್ತು ಆರಂಭಿಕ ಹಸ್ತಕ್ಷೇಪದ ಕುರಿತು ಕಾರ್ಯಾಗಾರಗಳು.
ಸಮುದಾಯ ಸಂಪರ್ಕ ಕಾರ್ಯಕ್ರಮಗಳು ಮತ್ತು ಸಮಾಲೋಚನೆ.
ಮಾದಕ ವಸ್ತುಮುಕ್ತ ಜೀವನದ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು.

ವ್ಯಸನದ ಸರಪಳಿಗಳನ್ನು ಮುರಿದು ಆರೋಗ್ಯಕರ, ಸುರಕ್ಷಿತ ಸಮಾಜವನ್ನು ಬೆಳೆಸುವ ಈ ಸಾಮೂಹಿಕ ಪ್ರಯತ್ನದಲ್ಲಿ, ಎಲ್ಲರೂ ಕೈಜೋಡಿಸಬೇಕೆಂದು ಬೆಂಗಳೂರು ನಗರ ಪೊಲೀಸರು ಕೋರುತ್ತಾರೆ. ನಿಮ್ಮ ಭಾಗವಹಿಸುವಿಕೆಯು ಬದುಕನ್ನು ಪರಿವರ್ತಿಸುವಲ್ಲಿ ಮತ್ತು ಮಾದಕ ವ್ಯಸನದ ಪಿಡುಗಿನಿಂದ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ನಾವೆಲ್ಲರು, ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಪುನಶ್ಚೇತನ, ಈ ಮೂರು ಅಂಶಗಳತ್ತ ಒಟ್ಟಾಗಿ ಕೈಜೋಡಿಸಿದರೆ ಮಾತ್ರ ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ, ಎಂದು ಪ್ರತಿಜ್ಞೆ ಮಾಡೋಣ.

ನಾವೆಲ್ಲರೂ ಒಟ್ಟಾಗಿ ಮುಂಬರುವ ಜೂನ್-26 ರಂದು ಭರವಸೆ, ಅರಿವು ಮತ್ತು ಕ್ರಿಯಾಶೀಲ ದಿನವನ್ನಾಗಿ ರೂಪಿಸೋಣ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles