“ ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ ”

ಮುಂಬರುವ “ಅಂತಾರಾಷ್ಟಿಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳಸಾಗಣಿಕೆ ವಿರೋಧಿ ದಿನಾಚರಣೆ” ಯನ್ನು ದಿನಾಂಕ:26/06/2025 ರಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯವರಿಂದ ಆಯೋಜಿಸಲಾಗಿದ್ದು, ಇದು ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಮಾದಕ ವಸ್ತು ವ್ಯಾಪಾರದ ವಿರುದ್ಧದ ಹೋರಾಟವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಾಗತಿಕ ಉಪಕ್ರಮವಾಗಿದೆ. ಈ ವರ್ಷದ ಘೋಷವಾಕ್ಯವು “ಸರಪಳಿಗಳನ್ನು ಮುರಿಯುವುದು: ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಎಲ್ಲರಿಗೂ ಪುನಶ್ಚೇತನಗೊಳಿಸುವಿಕೆ” ಮಾದಕ ವಸ್ತು ತಡೆಗಟ್ಟುವಿಕೆಯು, ಸುಲಭವಾಗಿ ಲಭ್ಯವಿರುವ ಚಿಕಿತ್ಸೆ ಮತ್ತು ಸುಸ್ಥಿರ ಚೇತರಿಕೆಯ ಮೂಲಕ ಮಾದಕ ವಸ್ತು ಅವಲಂಬನೆಯನ್ನು ನಿರ್ಮೂಲನೆ ಮಾಡಲು ಸಮಗ್ರ ಪ್ರಯತ್ನಗಳ ಮಹತ್ವವನ್ನು ಒತ್ತಿಹೇಳುತ್ತದೆ.

ಈ ಮಹತ್ವದ ದಿನವು ಯುವ ಜನತೆ, ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಕಾರ್ಮಿಕ ವರ್ಗ, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಎಲ್ಲಾ ಹಂತದ ನಾಗರಿಕರು ಒಟ್ಟಾಗಿ ಸೇರಿ, ಜಾಗೃತಿ ಮೂಡಿಸುವಲ್ಲಿ, ಜ್ಞಾನವನ್ನು ಹಂಚಿಕೊಳ್ಳುವಲ್ಲಿ ಮತ್ತು ಮಾದಕ ವಸ್ತು ಮುಕ್ತ ಸಮಾಜವನ್ನು ಉತ್ತೇಜಿಸುವ ಉಪಕ್ರಮಗಳನ್ನು ಬೆಂಬಲಿಸುವಲ್ಲಿ, ಸಕ್ರಿಯವಾಗಿ ಭಾಗವಹಿಸಲು ಕರೆ ನೀಡುತ್ತದೆ.

ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು:
ಜಾಗೃತಿ ಮೆರವಣಿಗೆಗಳು ಮತ್ತು ರಸ್ತೆ ನಡಿಗೆ.
ತಜ್ಞರು ಮತ್ತು ಮಾದಕ ವಸ್ತು ವಿಮುಕ್ತ ವ್ಯಕ್ತಿಗಳೊಂದಿಗೆ ಚರ್ಚೆಗಳು.
ತಡೆಗಟ್ಟುವಿಕೆ ಮತ್ತು ಆರಂಭಿಕ ಹಸ್ತಕ್ಷೇಪದ ಕುರಿತು ಕಾರ್ಯಾಗಾರಗಳು.
ಸಮುದಾಯ ಸಂಪರ್ಕ ಕಾರ್ಯಕ್ರಮಗಳು ಮತ್ತು ಸಮಾಲೋಚನೆ.
ಮಾದಕ ವಸ್ತುಮುಕ್ತ ಜೀವನದ ಮಹತ್ವವನ್ನು ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು.

ವ್ಯಸನದ ಸರಪಳಿಗಳನ್ನು ಮುರಿದು ಆರೋಗ್ಯಕರ, ಸುರಕ್ಷಿತ ಸಮಾಜವನ್ನು ಬೆಳೆಸುವ ಈ ಸಾಮೂಹಿಕ ಪ್ರಯತ್ನದಲ್ಲಿ, ಎಲ್ಲರೂ ಕೈಜೋಡಿಸಬೇಕೆಂದು ಬೆಂಗಳೂರು ನಗರ ಪೊಲೀಸರು ಕೋರುತ್ತಾರೆ. ನಿಮ್ಮ ಭಾಗವಹಿಸುವಿಕೆಯು ಬದುಕನ್ನು ಪರಿವರ್ತಿಸುವಲ್ಲಿ ಮತ್ತು ಮಾದಕ ವ್ಯಸನದ ಪಿಡುಗಿನಿಂದ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ನಾವೆಲ್ಲರು, ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ಪುನಶ್ಚೇತನ, ಈ ಮೂರು ಅಂಶಗಳತ್ತ ಒಟ್ಟಾಗಿ ಕೈಜೋಡಿಸಿದರೆ ಮಾತ್ರ ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ, ಎಂದು ಪ್ರತಿಜ್ಞೆ ಮಾಡೋಣ.

ನಾವೆಲ್ಲರೂ ಒಟ್ಟಾಗಿ ಮುಂಬರುವ ಜೂನ್-26 ರಂದು ಭರವಸೆ, ಅರಿವು ಮತ್ತು ಕ್ರಿಯಾಶೀಲ ದಿನವನ್ನಾಗಿ ರೂಪಿಸೋಣ.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles