ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ   ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ  ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ‌ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ   ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ. ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ‌ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ‌ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್​ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles