ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾಕತ್ವದ ‘ಕುವೆಂಪು ವಿಚಾರ ಕ್ರಾಂತಿ’ ಪುಸ್ತಕ ಜನಾರ್ಪಣೆ

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾಕತ್ವದ
‘ಕುವೆಂಪು ವಿಚಾರ ಕ್ರಾಂತಿ’ ಪುಸ್ತಕ ಜನಾರ್ಪಣೆ
‘ಜನರ ಕಡೆಗೆ ವೈಚಾರಿಕ ನಡಿಗೆ’ ಮೂಲಕ ಕುವೆಂಪು ವಿಚಾರಾಂದೋಲನ

ರಾಷ್ಟಕವಿ ಕುವೆಂಪು ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳ ಕೇಂದ್ರ ಪ್ರಜ್ಞೆಯನ್ನು ಪ್ರಸಾರ ಮಾಡುವ ಅಗತ್ಯವಿದೆ. ಕುವೆಂಪು ಅವರು ಅಂದಿನ ದಿನಗಳಲ್ಲೇ ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯಪರತೆ, ಒಕ್ಕೂಟ ಪದ್ಧತಿ ಪರವಾದ ಚಿಂತನಶೀಲತೆ, ಜಾತಿ ಮತ್ತು ಧರ್ಮ ತಾರತಮ್ಯ ವಿರೋಧಿ ವೈಚಾರಿಕತೆ, ಮೂಢನಂಬಿಕೆ ವಿರೋಧಿ ವೈಜ್ಞಾನಿಕತೆಯೇ ಮುಂತಾದ ಬರಹಗಳು ಇಂದಿನ ಸನ್ನಿವೇಶದಲ್ಲಿ ಜನರಿಗೆ ತಲುಪಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪನವರು ಕುವೆಂಪು ಅವರ ಕೆಲವು ಆಯ್ದ ಲೇಖನಗಳು ಮತ್ತು ಲೇಖನಗಳು ಮತ್ತು ಲೇಖನಗಳ ಆಯ್ದ ಭಾಗಗಳನ್ನು ಸಂಕಲಿಸಿ ‘ಕುವೆಂಪು ವಿಚಾರ ಕ್ರಾಂತಿ’ ಎಂಬ ಪುಸ್ತಕವನ್ನು ಸಿದ್ಧಪಡಿಸಿದ್ದಾರೆ. ಸಂಪಾದಕರಾಗಿ 25 ಪುಟಗಳ ಪ್ರಸ್ತಾವನೆ ಬರೆದು ಕುವೆಂಪು ಅವರ ಲೇಖನಗಳನ್ನು ವಿಶ್ಲೇಷಿಸಿದ್ದಾರೆ. ಈ ಪುಸ್ತಕವನ್ನು ‘ಜನ ಪ್ರಕಾಶನ’ವು ಪ್ರಕಟಿಸುತ್ತಿದ್ದು, ‘ಜನರ ಕಡೆಗೆ ವೈಚಾರಿಕ ನಡಿಗೆ’ ಎಂಬ ಘೋಷಣೆಯಡಿ 1 ಲಕ್ಷ ಪ್ರತಿಗಳನ್ನು ಮುದ್ರಿಸಿ ಮೊದಲಿಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು.
ನಂತರ ರಾಜ್ಯದಾದ್ಯಂತ ಬೇರೆ-ಬೇರೆ ಜಿಲ್ಲೆಗಳಲ್ಲೂ ಬಿಡುಗಡೆ ಮಾಡುವ ಮುಖಾಂತರ ವಿದ್ಯಾರ್ಥಿ-ಯುವಜನರನ್ನು ಒಳಗೊಂಡು ‘ಕುವೆಂಪು ವಿಚಾರಾಂದೋಲನ’ದ ಮೂಲಕ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಅತ್ಯಂತ ಕಡಿಮೆ ಬೆಲೆಗೆ ಓದುಗರ ಕೈ ಸೇರುವಂತೆ ಯೋಜನೆ ರೂಪಿಸಲಾಗುತ್ತಿದೆ.
‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರು ಇದೇ ತಿಂಗಳ 25ರಂದು ಬುಧವಾರ ಸಾಯಂಕಾಲ 5:00 ಗಂಟೆಗೆ ಜನಾರ್ಪಣೆ ಮಾಡಲಿದ್ದಾರೆ. ಈ ಜನಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಅರಮನೆ ರಸ್ತೆಯ ಭಾರತ ಸ್ಕೌಟ್ ಅಂಡ್ ಗೈಡ್ಸ್ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಲಿದ್ದು ನಾಡೋಜಾ ಡಾ. ಹಂಪನಾ, ಜಸ್ಟಿಸ್ ನಾಗಮೋಹನದಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಕುವೆಂಪು ಅವರ ಪುತ್ರಿ ಶ್ರೀಮತಿ ತಾರಿಣಿಚಿದಾನಂದಗೌಡ, ಅಳಿಯ ಡಾ. ಚಿದಾನಂದಗೌಡ ಮತ್ತು ಲೇಖಕ ಬರಗೂರು ರಾಮಚಂದ್ರಪ್ಪ ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮಕ್ಕೆ ಮುಂಚೆ 4 ಗಂಟೆಗೆ ಉಪಹಾರ ಮತ್ತು ಡಾ. ಶಮಿತಾ ಮಲ್ನಾಡ್ ತಂಡದಿ0ದ ಕುವೆಂಪು ಗೀತೆ ಗಾಯನವಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles