ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾಕತ್ವದ ‘ಕುವೆಂಪು ವಿಚಾರ ಕ್ರಾಂತಿ’ ಪುಸ್ತಕ ಜನಾರ್ಪಣೆ

ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಸಂಪಾಕತ್ವದ
‘ಕುವೆಂಪು ವಿಚಾರ ಕ್ರಾಂತಿ’ ಪುಸ್ತಕ ಜನಾರ್ಪಣೆ
‘ಜನರ ಕಡೆಗೆ ವೈಚಾರಿಕ ನಡಿಗೆ’ ಮೂಲಕ ಕುವೆಂಪು ವಿಚಾರಾಂದೋಲನ

ರಾಷ್ಟಕವಿ ಕುವೆಂಪು ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳ ಕೇಂದ್ರ ಪ್ರಜ್ಞೆಯನ್ನು ಪ್ರಸಾರ ಮಾಡುವ ಅಗತ್ಯವಿದೆ. ಕುವೆಂಪು ಅವರು ಅಂದಿನ ದಿನಗಳಲ್ಲೇ ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯಪರತೆ, ಒಕ್ಕೂಟ ಪದ್ಧತಿ ಪರವಾದ ಚಿಂತನಶೀಲತೆ, ಜಾತಿ ಮತ್ತು ಧರ್ಮ ತಾರತಮ್ಯ ವಿರೋಧಿ ವೈಚಾರಿಕತೆ, ಮೂಢನಂಬಿಕೆ ವಿರೋಧಿ ವೈಜ್ಞಾನಿಕತೆಯೇ ಮುಂತಾದ ಬರಹಗಳು ಇಂದಿನ ಸನ್ನಿವೇಶದಲ್ಲಿ ಜನರಿಗೆ ತಲುಪಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪನವರು ಕುವೆಂಪು ಅವರ ಕೆಲವು ಆಯ್ದ ಲೇಖನಗಳು ಮತ್ತು ಲೇಖನಗಳು ಮತ್ತು ಲೇಖನಗಳ ಆಯ್ದ ಭಾಗಗಳನ್ನು ಸಂಕಲಿಸಿ ‘ಕುವೆಂಪು ವಿಚಾರ ಕ್ರಾಂತಿ’ ಎಂಬ ಪುಸ್ತಕವನ್ನು ಸಿದ್ಧಪಡಿಸಿದ್ದಾರೆ. ಸಂಪಾದಕರಾಗಿ 25 ಪುಟಗಳ ಪ್ರಸ್ತಾವನೆ ಬರೆದು ಕುವೆಂಪು ಅವರ ಲೇಖನಗಳನ್ನು ವಿಶ್ಲೇಷಿಸಿದ್ದಾರೆ. ಈ ಪುಸ್ತಕವನ್ನು ‘ಜನ ಪ್ರಕಾಶನ’ವು ಪ್ರಕಟಿಸುತ್ತಿದ್ದು, ‘ಜನರ ಕಡೆಗೆ ವೈಚಾರಿಕ ನಡಿಗೆ’ ಎಂಬ ಘೋಷಣೆಯಡಿ 1 ಲಕ್ಷ ಪ್ರತಿಗಳನ್ನು ಮುದ್ರಿಸಿ ಮೊದಲಿಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಗುವುದು.
ನಂತರ ರಾಜ್ಯದಾದ್ಯಂತ ಬೇರೆ-ಬೇರೆ ಜಿಲ್ಲೆಗಳಲ್ಲೂ ಬಿಡುಗಡೆ ಮಾಡುವ ಮುಖಾಂತರ ವಿದ್ಯಾರ್ಥಿ-ಯುವಜನರನ್ನು ಒಳಗೊಂಡು ‘ಕುವೆಂಪು ವಿಚಾರಾಂದೋಲನ’ದ ಮೂಲಕ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಅತ್ಯಂತ ಕಡಿಮೆ ಬೆಲೆಗೆ ಓದುಗರ ಕೈ ಸೇರುವಂತೆ ಯೋಜನೆ ರೂಪಿಸಲಾಗುತ್ತಿದೆ.
‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರು ಇದೇ ತಿಂಗಳ 25ರಂದು ಬುಧವಾರ ಸಾಯಂಕಾಲ 5:00 ಗಂಟೆಗೆ ಜನಾರ್ಪಣೆ ಮಾಡಲಿದ್ದಾರೆ. ಈ ಜನಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಅರಮನೆ ರಸ್ತೆಯ ಭಾರತ ಸ್ಕೌಟ್ ಅಂಡ್ ಗೈಡ್ಸ್ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯಲಿದ್ದು ನಾಡೋಜಾ ಡಾ. ಹಂಪನಾ, ಜಸ್ಟಿಸ್ ನಾಗಮೋಹನದಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಕುವೆಂಪು ಅವರ ಪುತ್ರಿ ಶ್ರೀಮತಿ ತಾರಿಣಿಚಿದಾನಂದಗೌಡ, ಅಳಿಯ ಡಾ. ಚಿದಾನಂದಗೌಡ ಮತ್ತು ಲೇಖಕ ಬರಗೂರು ರಾಮಚಂದ್ರಪ್ಪ ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮಕ್ಕೆ ಮುಂಚೆ 4 ಗಂಟೆಗೆ ಉಪಹಾರ ಮತ್ತು ಡಾ. ಶಮಿತಾ ಮಲ್ನಾಡ್ ತಂಡದಿ0ದ ಕುವೆಂಪು ಗೀತೆ ಗಾಯನವಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles