ಲೀಡ್ಸ್​ನಲ್ಲಿ ಭಾರತ​ ಗೆದ್ದಿದ್ದೆಷ್ಟು? ಇಲ್ಲಿ ಯಾರು ಬಲಿಷ್ಠ​?

ಭಾರತ-ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯ ಇಂದು ಶುರುವಾಗಲಿದೆ. ಇದರೊಂದಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ 2025-2027ರ ಋತು ಕೂಡಾ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ ಮಹತ್ವದ ಹಣಾಹಣಿಗೆ ಲೀಡ್ಸ್‌ನ ಹೆಡಿಂಗ್ಲಿ ಮೈದಾನ ಆತಿಥ್ಯ ವಹಿಸಿದೆ.

ಭಾರತ ಕೊನೆಯ ಬಾರಿಗೆ 2007ರಲ್ಲಿ ರಾಹುಲ್​ ದ್ರಾವಿಡ್​ ನಾಯಕತ್ವದಲ್ಲಿ ಇಂಗ್ಲೆಂಡ್​ ನೆಲದಲ್ಲಿ ಟೆಸ್ಟ್​ ಸರಣಿ ಜಯಿಸಿತ್ತು. ಆ ಬಳಿಕ ಒಮ್ಮೆಯೂ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ ಗಿಲ್​ ನಾಯಕತ್ವದಲ್ಲಿ ಟೆಸ್ಟ್ ಸರಣಿ ಗೆಲ್ಲಲು ತವಕಿಸುತ್ತಿದೆ.

ಲೀಡ್ಸ್​ ಮೈದಾನದಲ್ಲಿ ಉಭಯ​ ತಂಡಗಳ ದಾಖಲೆ ಹೇಗಿದೆ?. ಇಲ್ಲಿ ಇದುವರೆಗೂ ಆಡಿರುವ ​ಪಂದ್ಯಗಳೆಷ್ಟು? ಯಾರು ಹೆಚ್ಚು ಗೆಲುವು ಸಾಧಿಸಿದ್ದಾರೆ? ಎಂಬುದನ್ನು ಈಗ ತಿಳಿಯೋಣ.

ಹೆಡಿಂಗ್ಲೆ ಮೈದಾನದ ಇತಿಹಾಸ: ಹೆಡಿಂಗ್ಲೆ ಮೈದಾನದಲ್ಲಿ ಇದುವರೆಗೂ 81 ಟೆಸ್ಟ್​ ಪಂದ್ಯಗಳು ನಡೆದಿವೆ. ಮೊಟ್ಟಮೊದಲ ಪಂದ್ಯ 1899ರಲ್ಲಿ ನಡೆದಿತ್ತು. ಅಂದಿನಿಂದಲೂ ಈ ಮೈದಾನ ಕೆಲವು ಅದ್ಭುತ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ

, ಇಲ್ಲಿ ಇಂಗ್ಲೆಂಡ್ 37 ಪಂದ್ಯಗಳನ್ನು ಗೆದ್ದರೆ, ಪ್ರವಾಸಿ ತಂಡಗಳು ಕೇವಲ 25 ಪಂದ್ಯಗಳನ್ನು ಗೆದ್ದಿವೆ. ಟಾಸ್ ಗೆದ್ದಿರುವ ತಂಡಗಳೇ ಹೆಚ್ಚು ಗೆಲುವು ಸಾಧಿಸಿರುವ ದಾಖಲೆಗಳಿವೆ. ಹಾಗಾಗಿ, ಟಾಸ್​ ನಿರ್ಣಾಯಕ ಪಾತ್ರ ವಹಿಸುತ್ತದೆ. ಇಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ತಂಡಗಳು 29 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಚೇಸಿಂಗ್​ ತಂಡಗಳು 37 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.

ಲೀಡ್ಸ್‌ನಲ್ಲಿ ಭಾರತದ ಸೋಲು-ಗೆಲುವg: ಭಾರತ 1952ರಲ್ಲಿ ಲೀಡ್ಸ್‌ನಲ್ಲಿ​ ಮೊದಲ ಟೆಸ್ಟ್​ ಪಂದ್ಯ ಆಡಿತ್ತು. ಆದರೆ ಈ ಪಂದ್ಯದಲ್ಲಿ 7 ವಿಕೆಟ್​ಗಳ ಸೋಲು ಕಂಡಿತ್ತು. 1986ರಲ್ಲಿ ಕಪಿಲ್​ ದೇವ್​ ಮತ್ತು 2002ರಲ್ಲಿ ಸೌರವ್​ ಗಂಗೂಲಿ ನಾಯಕತ್ವದಲ್ಲಿ ಮಾತ್ರ ಗೆದ್ದಿದೆ. ಕೊನೆಯದಾಗಿ ವಿರಾಟ್​ ಕೊಹ್ಲಿ ನಾಯಕತ್ವದಲ್ಲಿ 2021ರಲ್ಲಿ ಟೆಸ್ಟ್​ ಪಂದ್ಯವನ್ನಾಡಿ 76 ರನ್​ಗಳಿಂದ ಸೋಲುಂಡಿತ್ತು.

ಇಂಗ್ಲೆಂಡ್​ ದಾಖಲೆ: ಇಂಗ್ಲೆಂಡ್​ ಇಲ್ಲಿ ಭಾರತದ ವಿರುದ್ಧ ಒಟ್ಟು 4 ಬಾರಿ (1952, 1959, 1967 ಮತ್ತು 2021) ಗೆದ್ದಿದೆ. ಉಭಯ ತಂಡಗಳ ನಡುವೆ 1979ರಲ್ಲಿ ನಡೆದ ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿತ್ತು

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles