ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಮುರುಡೇಶ್ವರ : ವಿಶ್ವ ಪ್ರಸಿದ್ಧ ಮ್ಹಾತೋಬಾರ ಶ್ರೀ ಮುರುಡೇಶ್ವರ ದೇವಸ್ಥಾನದಲ್ಲಿ 22 ಜೂನ್ ರಿಂದ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಹಿಂದೂ ಜನಜಾಗೃತಿ ಸಮಿತಿ, ಕರ್ನಾಟಕ ಮಂದಿರ ಮಹಾಸಂಘ ಮತ್ತು ಅನೇಕ ಹಿಂದೂ ಸಂಘಟನೆಗಳು ಸೇರಿ ಡಿಸೆಂಬರ್ 2022 ರಲ್ಲಿ ದೇವಸ್ಥಾನ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ನೀಡಲಾಗಿತ್ತು, ಇದಕ್ಕೆ ಸ್ಪಂದಿಸಿ ಆಡಳಿತ ಮಂಡಳಿಯು ಇದೀಗ ವಸ್ತ್ರಸಂಹಿತೆ ಜಾರಿಗೆ ತಂದಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ಇದರಿಂದ ಪ್ರೇರಣೆ ಪಡೆದು ರಾಜ್ಯದ ಎಲ್ಲ ದೇವಾಲಯಗಲ್ಲಿಯೂ ವಸ್ತ್ರ ಸಂಹಿತೆ ಜಾರಿಗೊಳಿಸಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಮೋಹನ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಹಿಂದೂ ಜನಜಾಗೃತಿ ಸಮಿತಿಯು ಆಡಳಿತ ಮಂಡಳಿಗೆ ನೀಡಿದ ಮನವಿಯಲ್ಲಿ ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಾಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ದೇವಸ್ಥಾನದಲ್ಲಿ ಭಕ್ತರು ದೇವರ ದರ್ಶನ ಪಡೆಯಲು ಬರುವಾಗ ದೇವಾಲಯದ ವಾತಾವರಣವೂ ಅಷ್ಟೇ ಪವಿತ್ರ ಮತ್ತು ಸೂಕ್ತವಾಗಿರಬೇಕು. ಪಾಶ್ಚಾತ್ಯ ಉಡುಪು ಅಥವಾ ತುಂಡು ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು, ವಸ್ತ್ರ ಸಂಹಿತೆಗೆ ಜಾರಿಗೆ ಬಂದ ನಂತರ ದೇವಾಲಯದ ಅಂಗಳದಲ್ಲಿ ಇದರ ಬಗ್ಗೆ ಮಾಹಿತಿ ನೀಡುವ ಫಲಕವನ್ನೂ ಅಳವಡಿಸಬೇಕು ಎಂದು ಆಗ್ರಹಿಸಲಾಗಿತ್ತು. ಎಲ್ಲ ಸಂಘಟನೆಗಳು ಒಟ್ಟಾಗಿ ಪ್ರಯತ್ನಿಸಿದರ ಫಲವಾಗಿ ಇಂದು ಈ ವಿಜಯ ಸಿಕ್ಕಿದೆ.
 ಈ  ಹಿಂದೆ ಸಮಿತಿಯು ಮಾಡಿದ ಮನವಿಯ ನಂತರ ವಿಶ್ವ ಪ್ರಸಿದ್ಧ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಶೃಂಗೇರಿ ಶಾರದಾಂಬೆ ದೇವಸ್ಥಾನ ಸೇರಿದಂತೆ ರಾಜ್ಯದ 250ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles