ಹಿಮಾಚಲ ಪ್ರದೇಶ, ಪ. ಬಂಗಾಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ, ತೆಲಂಗಾಣ ರಾಜ್ಯಗಳ ಸಂಸ್ಥಾಪನಾ ದಿನಾಚರಣೆ

ಬೆಂಗಳೂರು 22.06.2025: ರಾಜಭವನದಲ್ಲಿ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಮತ್ತು ತೆಲಂಗಾಣ ರಾಜ್ಯಗಳ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ, ತೆಲಂಗಾಣ ರಾಜ್ಯಗಳ ಕಲೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ವರ್ಣರಂಜಿತ ಮತ್ತು ಆಕರ್ಷಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಯಿತು.


ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ, ತೆಲಂಗಾಣ ರಾಜ್ಯಗಳ ಕಲೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ವಿವಿಧ ವರ್ಣರಂಜಿತ ಮತ್ತು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಅದ್ಭುತವಾಗಿ ಪ್ರದರ್ಶನ ನೀಡಿದ ಎಲ್ಲಾ ಕಲಾವಿದರಿಗೆ ಅಭಿನಂದಿಸಿದರು. “ಈ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಸಾಂಸ್ಕೃತಿಕ ತಂಡಗಳು ನೀಡಿದ ಪ್ರದರ್ಶನಗಳು ಅತ್ಯಂತ ಶ್ಲಾಘನೀಯ. ಈ ಪ್ರದರ್ಶನಗಳು ಭಾಷೆ ಬೇರೆಯಾಗಿರಬಹುದು, ನೃತ್ಯ ಮತ್ತು ಸಂಗೀತದ ಶೈಲಿ ಬೇರೆಯಾಗಿರಬಹುದು, ಆದರೆ ಭಾವನೆ ಒಂದೇ, ಸಮರ್ಪಣೆ, ಸಾಮರಸ್ಯ ಮತ್ತು ದೇಶಭಕ್ತಿ ಎಂಬ ಭಾವನೆಯನ್ನು ನಮಗೆ ಮೂಡಿಸಿದವು” ಎಂದರು.

“ಭಾರತದ ಪ್ರತಿಯೊಂದು ರಾಜ್ಯವು ಅದರ ಗುಣಲಕ್ಷಣಗಳು ಮತ್ತು ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯಿಂದಾಗಿ ವಿಶಿಷ್ಟವಾಗಿದೆ. ರಾಜ್ಯಗಳ ಈ ಗುಣಲಕ್ಷಣಗಳು ಭಾರತೀಯ ಸಂಸ್ಕೃತಿಯ ವೈವಿಧ್ಯತೆ ಮತ್ತು ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತವೆ. ಭಾರತದ ವಿವಿಧ ರಾಜ್ಯಗಳಲ್ಲಿ ಆಚರಿಸಲಾಗುವ ಹಬ್ಬಗಳು ಮತ್ತು ಆಚರಣೆಗಳ ಪರಿಕಲ್ಪನೆ ಮತ್ತು ಉದ್ದೇಶಗಳಲ್ಲಿ ಸಮಾನತೆ ಮತ್ತು ಸಾಮರಸ್ಯವು ಗೋಚರಿಸುತ್ತದೆ. ಏಕ್ ಭಾರತ್ ಶ್ರೇಷ್ಠ ಭಾರತ್ ಸಿದ್ಧಾಂತದಿಂದ ಪ್ರೇರಿತವಾದ ಇಂತಹ ಕಾರ್ಯಕ್ರಮಗಳು ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೆಚ್ಚಿಸುವುದರ ಜೊತೆಗೆ ರಾಷ್ಟ್ರೀಯ ಏಕತೆ ಮತ್ತು ಪರಸ್ಪರ ತಿಳುವಳಿಕೆಯ ಭಾವನೆಯನ್ನು ಹೆಚ್ಚಿಸುತ್ತಿವೆ” ಎಂದು ಹೇಳಿದರು.

“ನಮ್ಮ ದೇಶದ ಸಾಂಸ್ಕೃತಿಕ ವೈವಿಧ್ಯತೆಯೇ ನಮ್ಮನ್ನು ಅನನ್ಯರನ್ನಾಗಿಸುತ್ತದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಮತ್ತು ಕಚ್‌ನಿಂದ ಕಾಮರೂಪದವರೆಗೆ ವೈವಿಧ್ಯಮಯ ಬಣ್ಣಗಳ ಸಂಸ್ಕೃತಿಗಳು ಒಂದೇ ಧ್ವಜದಡಿಯಲ್ಲಿ ಒಗ್ಗೂಡಿ ನಿಂತಿರುವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂಬ ಹೆಮ್ಮೆ ನಮಗಿದೆ. ದೇಶದ ಎಲ್ಲಾ ರಾಜ್ಯಗಳ ಸಂಸ್ಥಾಪನ ದಿನಾಚರಣೆಯನ್ನು ಎಲ್ಲಾ ರಾಜಭವನಗಳಲ್ಲಿ ಆಚರಿಸುವಂತಹ ಪರಿಕಲ್ಪನೆಯನ್ನು ಜಾರಿಗೆ ತಂದಿರುವ ಗೌರವಾನ್ವಿತ ಪ್ರಧಾನ ಮಂತ್ರಿಗಳು ಮತ್ತು ಗೌರವಾನ್ವಿತ ಕೇಂದ್ರ ಗೃಹ ಸಚಿವರು ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅವರ ಸ್ಫೂರ್ತಿಯೊಂದಿಗೆ, ಪ್ರತಿ ರಾಜ್ಯದ ಸಂಸ್ಥಾಪನಾ ದಿನವನ್ನು ಇತರ ರಾಜ್ಯಗಳಲ್ಲಿಯೂ ಆಚರಿಸಲಾಗುತ್ತಿದೆ, ಇದರಿಂದಾಗಿ ಸಾಮಾಜಿಕ ಏಕೀಕರಣ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುತ್ತದೆ” ಎಂದು ತಿಳಿಸಿದರು.

“ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಶಿಷ್ಟ ಸಂಪ್ರದಾಯ, ಭಾಷೆ, ವೇಷಭೂಷಣಗಳು, ಸಂಗೀತ, ಕಲೆ, ಆಹಾರ ಮತ್ತು ಜೀವನಶೈಲಿಯನ್ನು ಹೊಂದಿದೆ ಮತ್ತು ಇವೆಲ್ಲವೂ ಒಟ್ಟಾಗಿ ಭಾರತವನ್ನು ಶ್ರೀಮಂತ ರಾಷ್ಟ್ರವನ್ನಾಗಿ ಮಾಡಿದೆ. ರಾಜ್ಯ ಸಂಸ್ಥಾಪನಾ ದಿನವು ನಮ್ಮ ರಾಜ್ಯವು ಇಂದು ಉತ್ತಮ ಆಡಳಿತ ಮತ್ತು ಪ್ರಗತಿಪರವಾಗಲು ಕಾರಣವಾದ ಹೋರಾಟ, ದೃಢನಿಶ್ಚಯ ಮತ್ತು ನಾಯಕತ್ವವನ್ನು ನೆನಪಿಸುತ್ತದೆ. ಈ ದಿನವು ನಮ್ಮ ಪೂರ್ವಜರ ಕೊಡುಗೆಯನ್ನು ನೆನಪಿಸುತ್ತದೆ, ಅವರು ರಾಜ್ಯದ ಸೃಷ್ಟಿ ಮತ್ತು ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸಿದರು. ಇಂದು, ನಾವು ವಿವಿಧ ರಾಜ್ಯಗಳ ಸಂಸ್ಥಾಪನಾ ದಿನವನ್ನು ಒಟ್ಟಾಗಿ ಆಚರಿಸುತ್ತಿರುವಾಗ, ಅದು ಭಾರತೀಯ ಒಕ್ಕೂಟದ ಶಕ್ತಿ ಮತ್ತು ನಮ್ಮ ಪ್ರಜಾಪ್ರಭುತ್ವದ ಸೌಂದರ್ಯವನ್ನು ಸಂಕೇತಿಸುತ್ತದೆ, ಅಲ್ಲಿ ವಿವಿಧತೆಯಲ್ಲಿ ಏಕತೆ ಒಂದು ಆದರ್ಶ ಮಾತ್ರವಲ್ಲದೆ ಪ್ರಾಯೋಗಿಕ ವಾಸ್ತವವೂ ಆಗಿದೆ” ಎಂದು ಹೇಳಿದರು.

“ಪ್ರತಿಯೊಂದು ರಾಜ್ಯವು ಭಾರತದ ಪ್ರಗತಿಗೆ ವಿಶೇಷ ಕೊಡುಗೆ ನೀಡಿದೆ, ಕೆಲವು ಕೃಷಿಯಲ್ಲಿ, ಕೆಲವು ಕೈಗಾರಿಕಾ ಅಭಿವೃದ್ಧಿಯಲ್ಲಿ, ಕೆಲವು ಶಿಕ್ಷಣ ಮತ್ತು ತಾಂತ್ರಿಕ ಸಂಶೋಧನೆಯಲ್ಲಿ, ಮತ್ತು ಕೆಲವು ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಮೂಲಕ ದೇಶಕ್ಕೆ ಜಾಗತಿಕ ಗುರುತನ್ನು ನೀಡಿವೆ. ನಮ್ಮ ರಾಜ್ಯಗಳನ್ನು ಆರ್ಥಿಕವಾಗಿ ಬಲಿಷ್ಠಗೊಳಿಸಲು ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆ, ಸಾಮಾಜಿಕ ನ್ಯಾಯ, ಪರಿಸರ ಸಮತೋಲನ ಮತ್ತು ತಾಂತ್ರಿಕ ನಾವೀನ್ಯತೆಗಳ ಮೂಲಕ ಆದರ್ಶ ರಾಜ್ಯವನ್ನು ಸೃಷ್ಟಿಸಲು ನಾವು ಪ್ರತಿಜ್ಞೆ ಮಾಡಬೇಕು. ಈ ಸಂದರ್ಭವು ನಮ್ಮ ಹೊಸ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಬೇಕು. ನಮ್ಮ ಯುವಕರು ತಮ್ಮ ರಾಜ್ಯದ ಇತಿಹಾಸ ಮತ್ತು ಅದರ ಸಾಧನೆಗಳನ್ನು ತಿಳಿದುಕೊಂಡಾಗ ಮಾತ್ರ ಅವರು ಅದರ ಅಭಿವೃದ್ಧಿಯಲ್ಲಿ ಪಾಲುದಾರರಾಗುತ್ತಾರೆ. ಅಭಿವೃದ್ಧಿ ಹೊಂದಿದ ಭಾರತದ ನಿರ್ಣಯಕ್ಕೆ ಬದ್ಧರಾಗುವುದು ಮತ್ತು ಕೊಡುಗೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ರಾಜ್ಯಪಾಲರು ಕರೆ ನೀಡಿದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles