ಚಿಕ್ಕಬಳ್ಳಾಪುರ ನಂದಿ ಗಿರಿಧಾಮದ ಮಯೂರ ಸಭಾಂಗಣದ ಸಂಪುಟ ಸಭೆ: ಮಾಧ್ಯಮ ಪ್ರತಿನಿಧಿಗಳು ನೋಂದಾಯಿಸಿಕೊಳ್ಳಲು ಮನವಿ

ಚಿಕ್ಕಬಳ್ಳಾಪುರ ಜಿಲ್ಲೆಯ, ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ದಿನಾಂಕ: 02-07- 2025 ರಂದು 14ನೇ ಸಂಪುಟ ಸಭೆಯನ್ನು ಕರೆಯಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು, ಈಗಾಗಲೇ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ಕರೆಯಲಾಗಿದ್ದ 13ನೇ ಸಚಿವ ಸಂಪುಟ ಸಭೆಯ ಪತ್ರಿಕಾ ಗೋಷ್ಠಿಗೆ ನೋಂದಾಯಿಸಿಕೊಂಡಿರುವ ಮಾಧ್ಯಮ ಪ್ರತಿನಿಧಿಗಳನ್ನೇ 14ನೇ ಪತ್ರಿಕಾ ಗೋಷ್ಠಿಗೆ ಪರಿಗಣಿಸಲಾಗಿದೆ ಹಾಗೂ ಸದರಿ ಮಾಧ್ಯಮ ಪ್ರತಿನಿಧಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ವತಿಯಿಂದ ಅಗತ್ಯ ಪಾಸುಗಳನ್ನು ನೀಡಲಾಗುವುದು.

ಈಗಾಗಲೇ ನೋಂದಾಯಿಸಿ ಕೊಂಡಿರುವವರನ್ನು ಹೊರತುಪಡಿಸಿ ಬೇರೆ ಯಾರಾದರೂ ಮಾಧ್ಯಮ ಪ್ರತಿನಿಧಿಗಳು ನೋಂದಾಯಿಸಿಕೊಳ್ಳಲು ಬಯಸಿದಲ್ಲಿ ಮಾತ್ರ:

ಬೆಂಗಳೂರು ಜಿಲ್ಲೆಯ ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯ ಮಟ್ಟದ ಪತ್ರಿಕೆಗಳ (ಇಬ್ಬರು ವರದಿಗಾರ ಹಾಗೂ ಓರ್ವ ಛಾಯಾಗ್ರಾಹಕ ಮಾತ್ರ) ಮತ್ತು ವಿದ್ಯುನ್ಮಾನ ಮಾಧ್ಯಮದ (ಇಬ್ಬರು ವರದಿಗಾರರು ಹಾಗೂ ಇಬ್ಬರು ವಿಡಿಯೋಗ್ರಾಹಕರು ಮಾತ್ರ) ಮಾಧ್ಯಮ ಪ್ರತಿನಿಧಿಗಳ ಹೆಸರು, ಪದನಾಮ, ಮೊಬೈಲ್ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸದೊಂದಿಗೆ ಇತ್ತೀಚಿನ 2 ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ತಮ್ಮ ಸಂಸ್ಥೆಯ ಮಾಧ್ಯಮ ಪ್ರತಿನಿಧಿಗಳ ಮೂಲಕ, ಶ್ರೀ ಎಂ. ಜುಂಜಣ್ಣ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಇವರಿಗೆ ದಿನಾಂಕ: 26-06-2025ರ ಮಧ್ಯಾಹ್ನ 3.00 ಗಂಟೆಗೆ ಒಳಗಾಗಿ ತಲುಪಿಸುವುದು.

ಪತ್ರಿಕಾಗೋಷ್ಠಿಯ ಹಾಲ್ ಗೆ ರಾಜ್ಯಮಟ್ಟದ ಪತ್ರಿಕೆಗಳಿಗೆ ಓರ್ವ ವರದಿಗಾರ ಮತ್ತು ಛಾಯಾಗ್ರಾಹಕ, ಸುದ್ದಿವಾಹಿನಿಗಳಿಗೆ ಓರ್ವ ವರದಿಗಾರ ಮತ್ತು ಕ್ಯಾಮೆರಾಮ್ಯಾನ್ ಗೆ ಮಾತ್ರ ಅವಕಾಶವಿರುವುದರಿಂದ ಶಿಫಾರಸ್ಸು ಪತ್ರದಲ್ಲಿ ಯಾರನ್ನು ಪತ್ರಿಕಾಗೋಷ್ಠಿ ವರದಿಗಾರಿಕೆಗೆ ನಿಯೋಜಿಸಲಾಗಿದೆ ಎಂಬುದನ್ನು ನಮೂದಿಸುವುದು.

ಉಳಿದಂತೆ ರಾಷ್ಟ್ರ ಮಟ್ಟದ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮ ಪ್ರತಿನಿಧಿಗಳು ಮಾತ್ರ ಹೆಸರು, ಪದನಾಮ, ಮೊಬೈಲ್ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸದೊಂದಿಗೆ ಇತ್ತೀಚಿನ 2 ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿರುವ ಸುದ್ದಿ ಮತ್ತು ಪತ್ರಿಕಾ ಶಾಖೆಗೆ ದಿನಾಂಕ 26-06-2025 ರ ಮಧ್ಯಾಹ್ನ 3.00 ಗಂಟೆಯ ಒಳಗಾಗಿ ತಲುಪಿಸುವುದು.

ವಿಶೇಷ ಸೂಚನೆ :

1. ಮಾಧ್ಯಮ ಪಟ್ಟಿಯಲ್ಲಿ ಇರುವ ಮಾಧ್ಯಮ ಪ್ರತಿನಿಧಿಗಳು ಅಗತ್ಯ ದಾಖಲೆ ಮತ್ತು ಮಾಹಿತಿಯೊಂದಿಗೆ ನೇರವಾಗಿ ಶ್ರೀ ಎಂ. ಜುಂಜಣ್ಣ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಇವರಿಗೆ ಸಲ್ಲಿಸುವುದು. ಶ್ರೀಯುತರ ಮೊಬೈಲ್ ದೂರವಾಣಿ ಸಂಖ್ಯೆ: 094808 41224
2. ಅಪೂರ್ಣ ಮಾಹಿತಿ, ಶಿಫಾರಸ್ಸು ಪತ್ರ ಸಲ್ಲಿಸದಿದ್ದಲ್ಲಿ ಪರಿಗಣಿಸಲು ಸಾಧ್ಯವಿಲ್ಲ.
3. ನಿಗದಿತ ದಿನಾಂಕ ಹಾಗೂ ಅವಧಿಯ ನಂತರ ಸಲ್ಲಿಸುವ ಮಾಹಿತಿಯನ್ನು ಪರಿಗಣಿಸಲಾಗುವುದಿಲ್ಲ.
4.ಪಾಸುಗಳನ್ನು ಸಹಾಯಕ ನಿರ್ದೇಶಕರು, ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಕಛೇರಿಯಲ್ಲಿ ನೀಡಲಾಗುವುದು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles