ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿ ಜನರಿಗೆ ಹೊರರಾಜ್ಯಗಳಲ್ಲಿ, ಕೌಶಲ್ಯ ಉನ್ನತೀಕರಣ ತರಬೇತಿ

ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕರ್) ಬೆಂಗಳೂರು ವತಿಯಿಂದ ರಾಜ್ಯದ ಪರಿಶಿಷ್ಟ ಜಾತಿಯ ಮಾದಿಗ, ಸಮಗಾರ, ಡೋರ, ಆದಿಜಾಂಬವ, ಮಚಗಾರ ಮತ್ತು ಮೋಚಿ ಜಾತಿಗೆ ಸೇರಿದ ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿಗಳ ಕುಟುಂಬಗಳ 81 ಯುವ ಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮಂಚೂಣಿಯಲ್ಲಿರುವ ರಾಜ್ಯಗಳಾದ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ / ಪಿ.ಯು.ಸಿ ಉತ್ತೀರ್ಣ ಹಾಗೂ ಯಾವುದೇ ಸಾಮಾನ್ಯ ಪದವಿಗಳನ್ನು ಪಡೆದ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಸೇರಿದ ನಿರುದ್ಯೋಗಿ ಯುವಕ / ಯುವತಿಯರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ತರಬೇತಿಗೆ ನಿಯೋಜಿಸಲಾಗುವ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಶಿಷ್ಯ ವೇತನವನ್ನು ನೀಡಲಾಗುವುದು.

ತರಬೇತಿ ಪಡೆಯುವ ಕೋರ್ಸ್‍ಗಳು:
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಆಗ್ರಾದ ಸಿಎಫ್ ಟಿಐ ನಲ್ಲಿ ಎರಡು ತಿಂಗಳ Footwear Designing and Production, ಗೆ 11 ಅಭ್ಯರ್ಥಿಗಳು,  ಸಿಎಲ್ ಆರ್ ಐ  ಚೆನ್ನೈ / ಕೊಲ್ಕತ್ತದಲ್ಲಿ  ಎರಡು ತಿಂಗಳ  Leather Goods Design (Manual & Cad) ಗೆ 20 ಅಭ್ಯರ್ಥಿಗಳು, ಎಫ್.ಡಿ.ಡಿ.ಐ ನೋಯ್ಡಾ / ಕೊಲ್ಕತ್ತ, ಮೂರು ತಿಂಗಳ Certified Program in Footwear Design ಗೆ 20 ಅಭ್ಯರ್ಥಿಗಳು, ಆಗ್ರಾದ ಸಿಎಫ್ ಟಿಐ ನಲ್ಲಿ 06 ತಿಂಗಳ Footwear Design and Production ಗೆ 20 ಅಭ್ಯರ್ಥಿಗಳು, ಯಾವುದೇ ಪದವಿ ಪಡೆದಿರುವ 10 ಅಭ್ಯರ್ಥಿಗಳಿಗೆ ಆಗ್ರಾದ ಸಿಎಫ್ ಟಿಐ ನಲ್ಲಿ P.G.Diploma in Footwear Technology 18 ತಿಂಗಳ ತರಬೇತಿ ನೀಡಲಾಗುವುದು.

ರಾಜ್ಯದಲ್ಲಿ ಕುಶಲಕರ್ಮಿಗಳ ಸಂಖ್ಯೆಗಳನ್ನು ವೃದ್ಧಿಸಲು ಹಾಗೂ ಚರ್ಮ ಕೈಗಾರಿಕೆಗಳ ಇಂದಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳನ್ನು ಪರಿಚಯಿಸಲು ನಿರುದ್ಯೋಗಿ ಯುವಕ/ಯುವತಿಯರಿಗೆ ಚರ್ಮೋದ್ಯಮದಲ್ಲಿ ಆಸಕ್ತಿಯನ್ನು ಹುಟ್ಟಿಸಿ ಅವರ ಮುಂದಿನ ಆರ್ಥಿಕ ಜೀವನವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಭ್ಯರ್ಥಿಗಳು ತಮಗೆ ಸಂಬಂಧಪಟ್ಟ ಜಿಲ್ಲೆಯ ಸ್ಥಳಿಯ ಜಿಲ್ಲಾ ಸಂಯೋಜಕರ ಕಛೇರಿ ಅಥವಾ ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕರ್) ಇಲ್ಲಿಗೆ ಭೇಟಿ ನೀಡಿ ದಾಖಲಾತಿಗಳೊಂದಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವುದರ ಮೂಲಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು  ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles