ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

ಬೆಂಗಳೂರು, ಜೂನ್ 26: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ ಆರಂಭಿಸಲಾಯಿತು.  ಪುತ್ಥಳಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ನಂತರ ಮೆರವಣಿಗೆ ಕಾರ್ಯ ಆರಂಭಗೊಂಡಿತು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ರೈತಾಪಿ ವರ್ಗದವರನ್ನು ಪ್ರತಿನಿಧಿಸುವ ಬೆಂಗಳೂರಿನ ಸುತ್ತಮುತ್ತಲಿನಿಂದ ಸುಮಾರು 2೦ಕ್ಕೂ ಹೆಚ್ಚು ಅಲಂಕೃತವಾದ ಎತ್ತಿನಬಂಡಿಗಳು ಕಂಡುಬಂದಿತು. ಬಂಡಿಯಲ್ಲಿ ಕೆಂಪೇಗೌಡರ ಪೂರ್ವಿಕರಾದ ಕೆಂಪಣ್ಣಸ್ವಾಮಿ ಹಾಗೂ ಶ್ರೀ ವೀರಣ್ಣ ಸ್ವಾಮಿ ಉತ್ಸವ ಮೂರ್ತಿಗಳನ್ನಿಟ್ಟು ಪೂಜಿಸಿ, ನಂತರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮೆರವಣಿಗೆಯು ಆರಂಭಗೊಂಡಿತು. ಹಡ್ಸನ್ ಸರ್ಕಲ್, ಕಬ್ಬನ್ ಪಾರ್ಕ್ ಸೆಂಟ್ರಲ್ ಲೈಬ್ರರಿ, ಹೈಕೋರ್ಟ್ ಆವರಣ ಮತ್ತು ಗೋಪಾಲ್ ಗೌಡ ಸರ್ಕಲ್ ಮೂಲಕ ಸಾಗಿ, ವಿಧಾನಸೌಧದ ಬಳಿಯ ಕೆಂಪೇಗೌಡರ ಪ್ರತಿಮೆಯ ಬಳಿ ಮೆರವಣಿಗೆಯು ಸಾಗಿತು. ಸುಮಾರು 2000 ಜನ ಈ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿಧಾನಸೌಧದ ಆವರಣದ ಕೆಂಪೇಗೌಡರ ಪ್ರತಿಮೆಗೆ ನಮಸ್ಕರಿಸಿ ಬಳಿಕ  ದಿವ್ಯಸಾನಿಧ್ಯವಹಿಸಿದ್ದಂತಹ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಬಂಡಿದೇವರ ಉತ್ಸವವು ನಮ್ಮ ಬೇರುಗಳೊಂದಿಗೆ ನಮ್ಮನ್ನು ಸಂಪರ್ಕಿಸುವ ಆಚರಣೆ. ಮುಂಚೆ ಹಳ್ಳಿಗಳಲ್ಲಿ ಈ ಆಚರಣೆಯಿತ್ತು. ಈಗ ನಗರ ಭಾಗದಲ್ಲಿ ಈ ಆಚರಣೆ ಆರಂಭಗೊಂಡಿರುವುದು ನಿಜಕ್ಕೂ ಸಂತಸದ ವಿಷಯ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಜೃಂಭಣೆಯಿಂದ ಆಚರಿಸೋಣ ಎಂದರು.

ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಮಾತನಾಡಿ, ರೈತ ಬಾಂಧವರೆಲ್ಲರೂ ಅತ್ಯಂತ ಸಂಭ್ರಮದಿಂದ ಬಂಡಿ ಉತ್ಸವವನ್ನು ಮಾಡಿದ್ದೀರಿ. ಈ ರೀತಿಯಾಗಿ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವ ಪ್ರಯತ್ನವಾಗುತ್ತಿರುವುದು ನಿಜಕ್ಕೂ ಸಂತಸ. ನಾಳೆ ಸುಮ್ಮನಹಳ್ಳಿಯ ೫ ಎಕರೆ ಜಾಗದಲ್ಲಿ ಕೆಂಪೇಗೌಡರ ಭವನಕ್ಕೆ ಶಂಕುಸ್ಥಾಪನೆಯಾಗಲಿದೆ. ನಮ್ಮ ಕೆಂಪೇಗೌಡರ ಭವನಕ್ಕೆ ೧೦೦ ಕೋಟಿ ಮೀಸಲಿಟ್ಟಿದ್ದೇವೆ ಜೊತೆಗೆ ಅವರ ಹೆಸರಿನಲ್ಲಿ ಗ್ರಂಥಾಲಯಗಳನ್ನು ತೆರೆಯಲು ಯೋಜಿಸಿದ್ದೇವೆ ಎಂದರು.

ಬಳಿಕ ಗಣ್ಯರೆಲ್ಲರೂ ಸೇರಿ ಹಾಜರಿದ್ದವರೆಲ್ಲರಿಗೂ ಸಿಹಿ ವಿತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಮಹಾಲಕ್ಷ್ಮಿಪುರ ಶಾಸಕರಾದ ಗೋಪಾಲಯ್ಯ, ಹಿರಿಯ ಐಆರ್‌ಎಸ್‌ ಅಧಿಕಾರಿ ಹಾಗೂ ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಜಯರಾಮ್‌ ರಾಯಪುರ, ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಅ‍ಧ್ಯಕ್ಷರಾದ ತಲಕಾಡು ಚಿಕ್ಕರಂಗೇಗೌಡ, ಕಾರ್ಯದರ್ಶಿ ಎಂ. ಅಮರೇಶ್‌, ಸಮಿತಿಯ ಉಪಾಧ್ಯಕ್ಷರಾದ ನಾಗರಾಜ್‌ (ನಿವೃತ್ತ ಎಸ್‌ಪಿ), ಹಿರಿಯ ಉಪಾಧ್ಯಕ್ಷರಾದ ಗೋವಿಂದೇಗೌಡರು, ಕೆಂಪೇಗೌಡ ಸಂಶೋಧನಾ ಪರಿಷತ್‌ನ ಪ್ರಧಾನ ಕಾರ್ಯದರ್ಶಿಯಾದ ಜೆ. ನಾಗರಾಜ್‌, ಮುಖೇಶ್‌, ಮುನಿರಾಜು, ಎನ್.ನಾಗರಾಜು, ಮಧು ಹಾಗೂ ಕಾರ್ಯಕಾರಿ ಸಮಿತಿಯ ಡಾ.ಬಿ.ಎಸ್. ಪುಟ್ಟಸ್ವಾಮಿ, ದಿವ್ಯಾ ರಂಗೇನಹಳ್ಳಿ, ಜೆ.ನಾಗರಾಜ್, ಡಾ.ಸುನಿತಾ, ದಿವ್ಯಾ ಹರ್ಷ, ಡಾ.ಬಿ.ಪಾಂಡುಕುಮಾರ್, ಎನ್.ಆರ್. ಧನಂಜಯ, ಮ್ಯಾಗೇರಿ ನಾರಾಯಣಸ್ವಾಮಿ, ಶ್ರೀನಿವಾಸ್ ಜಿ.ಕಪ್ಪಣ್ಣ, ಪ್ರೊ.ಜಯಪ್ರಕಾಶಗೌಡ, ಎಸ್.ಎ.ಪುಟ್ಟರಾಜು, ಎಂ.ಎ.ಮದನ್ ಕುಮಾರ್, ಗೋವಿಂದೇಗೌಡ, ಹಳ್ಳಿಕಾರ್ ದೊಡ್ಡಗೌಡ, ಉಮಾ ಬಸವರಾಜ್‌,  ಭಾರತಿ ಜಯರಾಮ ಹಾಗೂ ಫಸ್ಟ್‌ ಸರ್ಕಲ್‌ ಸಂಘಟನೆಯವರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles