ನಗರ ಹಸಿರಾಗಿರಿಸಲು ಇವಿ ಬೈಕ್ ರ್ಯಾಲಿ ಜೊತೆಗೆ ಸಸಿ ನೆಡುವ ಮೂಲಕ ಜಾಗೃತಿ

ಬೆಂಗಳೂರು, ಜೂ. 29: ನಗರವು ಹಸಿರುಮಯವಾಗಿರಬೇಕು, ಶುದ್ಧ ಗಾಳಿ ಸಿಗುವಂತೆ ಹಾಗೂ ನಗರವನ್ನು ಸುಸ್ಥಿರವಾಗಿಟ್ಟುಕೊಳ್ಳುವಲ್ಲಿ ನಾವೆಲ್ಲರೂ ಪಣ ತೊಡಬೇಕು ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಸತೀಶ್‌ ರೆಡ್ಡಿ ಹೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ನಗರದಲ್ಲಿ ಹಸಿರೋತ್ಸವ ಫೋರಂ,  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸುರಕ್ಷಾ ಎನ್ವಿರೋ ಸೊಲ್ಯೂಷನ್ ಮತ್ತು ಸುದಯಾ ಫೌಂಡೇಶನ್ ಸಹಯೋಗದೊಂದಿಗೆ “ಗೋ ಗ್ರೀನ್, ಗೋ ಇವಿ” (Go Green, Go EV) ಎಂಬ ವಿಷಯದಡಿಯಲ್ಲಿ ಎಲೆಕ್ಟ್ರಿಕ್ ವಾಹನ (EV) ಬೈಕ್ ರ್ಯಾಲಿ  ಹಾಗೂ 500ಕ್ಕೂ ಹೆಚ್ಚು ಸಸಿಗಳನ್ನು ನೆಡುವ  ʼಹಸಿರು ಸಂಕಲ್ಪ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅತ್ಯಂತ ಪುರಾತನ ಗ್ರಾಮವೆಂದೇ ಹೆಸರಾಗಿರುವ ಹುಳಿಮಾವು ಕೆರೆ ಅನೇಕ ಕೆರೆಗಳಿಗೆ ಸಂಪರ್ಕ ಹೊಂದಿದೆ. ಕೆಂಪೇಗೌಡರ ಆಲೋಚನೆ ತುಂಬಾ ಚೆನ್ನಾಗಿತ್ತು, ಹಾಗಾಗಿ ಕೆರೆಗಳೇ ಬೆಂಗಳೂರಿಗೆ ಜೀವನಾಡಿಯಾಗಿ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕೆರೆಗಳೇ ಇಲ್ಲದಿದ್ದರೆ ಬೆಂಗಳೂರಿನಲ್ಲಿ ನಾವಿಷ್ಟು ಸುಂದರ ಬದುಕನ್ನು ಕಾಣಲು ಸಾಧ್ಯವಿರಲಿಲ್ಲ. ಗಲ್ಫ್‌ ರಾಷ್ಟ್ರಗಳಲ್ಲಿ ಬರೀ ಮರಳುಗಾಡು ವಾತಾವರಣ ಇದೆ. ಈಗ ಅವರಿಗೆ ಪರಿಸರದ ಮಹತ್ವ ಅರ್ಥವಾಗಿದೆ.  ಆದ್ರೆ ನಾವು ಪರಿಸರದ ಮಧ್ಯೆಯೇ ಇರುವುದರಿಂದ ಪರಿಸರದ ಬಗೆಗೆ ಕೆಲವು ನಿರ್ಲಕ್ಷ್ಯ ತೋರುತ್ತಿದ್ದೇವೆ. ಹಾಗಾಗಿ ನಾವೆಲ್ಲ ಗಿಡ ಮರಗಳನ್ನು ಬೆಳೆಸೋಣ, ಕೆರೆ ಕಾಲುವೆಗಳನ್ನು ಉಳಿಸೋಣ. ಈ ನಿಟ್ಟಿನಲ್ಲಿ ಹುಳಿಮಾವು ಕೆರೆಗೆ 14 ಕೋಟಿ ಮೀಸಲಿಟ್ಟಿದ್ದೇವೆ ಹಾಗೆ ಉಳಿಮಾವು ಕೆರೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಸತೀಶ್‌ ರೆಡ್ಡಿ ಅವರು ತಿಳಿಸಿದರು.

ಎಲೆಕ್ಟ್ರಿಕ್ ವಾಹನ (EV) ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಚೇರ್‌ಮೆನ್‌ ಎಸ್‌.ಇ ಸುಧೀಂದ್ರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಇಂದು ಅನೇಕ ರಾಜ್ಯದ ಜನರು ಬೆಂಗಳೂರಿನತ್ತ ವಲಸೆ ಬರುತ್ತಿದ್ದಾರೆ, ಅದಕ್ಕೆ ಮುಖ್ಯ ಕಾರಣ ಬೆಂಗಳೂರಿನ ಈ ಸುಂದರ ವಾತಾವರಣ. ಮುಂದಿನ ದಿನಗಳಲ್ಲಿಯೂ ಕೂಡ ಉತ್ತಮ ಪರಿಸರ ನಮ್ಮದಾಗಬೇಕು, ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡುವ ಅಗತ್ಯ ನಮ್ಮ ಮುಂದಿದೆ ಅದಕ್ಕಾಗಿ ನಾವೆಲ್ಲರೂ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿವೃತ್ತ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ. ಬಿ.ಆರ್.‌ ಬಾಲಗಂಗಾಧರ್‌ ಮಾತನಾಡಿ,
ವಾಹನಗಳ ಬಳಕೆ ಹೆಚ್ಚಾಗಿದೆ ಇದ್ರಿಂದ ವಾಯು ಮಾಲಿನ್ಯಗೊಳ್ಳುತ್ತಿದ್ದು, ಶ್ವಾಸಕೋಶ ಸಂಬಂಧಿತ ಆರೋಗ್ಯ ಸಮಸ್ಯೆಗಳು ಹೆಚ್ಚಾಗ್ತಿವೆ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇವಿ ಚಾಲಿತ ವಾಹನಗಳನ್ನು ನಾವು ಬಳಕೆ ಮಾಡುವುದು ಒಳಿತು. ಇದರಿಂದ ನಗರದಲ್ಲಿ ಆಮ್ಲಜನಕವು ಹೆಚ್ಚಾಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಇಂತಹ ಅಭಿಯಾನಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು  ಹೇಳಿದರು.

ಬೆಂಗಳೂರು ನಗರದಲ್ಲಿ ಎಲ್ಲಿಯಾದರೂ ಸಸಿ ನೆಡಲು ಸಹಾಯ ಬೇಕಿದ್ದಲ್ಲಿ 9916596396 ಗೆ ಕರೆ ಮಾಡಬಹುದು. ಹಸಿರೋತ್ಸವ ಫೋರಂ ನವರು ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಸಸಿಗಳನ್ನು ನೆಡುವ ಕೆಲಸವನ್ನು ಮಾಡಲು ಸಿದ್ಧರಿದ್ದೇವೆ ಎಂದು ಹಸಿರೋತ್ಸವ ಫೋರಂ ನ ನಿರ್ದೇಶಕರಾದ ಆರತಿ ಆರ್‌ ಹೇಳಿದರು.

ಇವಿ ಬೈಕ್‌ ರ್ಯಾಲಿಯಲ್ಲಿ 40ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ಪಾಲ್ಗೊಂಡಿದ್ದವು, ಜೊತೆಗೆ ಹುಳಿಮಾವು ಕೆರೆಯಲ್ಲಿ 500ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಹಸಿರು ಫೋರಂ ನ‌ ನಿರ್ದೇಶಕರಾದ ನೀತು ರೈನಾ, ಮಾಜಿ ಕಾರ್ಪೋರೇಟರ್‌ ಭಾಗ್ಯಲಕ್ಷ್ಮಿ ಮುರಳಿ, ಮಾಜಿ ಕಾರ್ಪೊರೇಟರ್‌ ಮುರಳಿ (ಅರಕೆರೆ ವಾರ್ಡ್‌), ಬೊಮ್ಮನಹಳ್ಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಯಾದ ಅಶೋಕ್‌ ಕುಮಾರ್‌ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಬಿಬಿಎಂಪಿ, ಸ್ಪರ್ಶ್ ಫೌಂಡೇಶನ್, ಮೀಡಿಯಾ ಕನೆಕ್ಟ್, ಬಯೋಕಾನ್ ಬಯೋಲಾಜಿಕ್ಸ್, ನೆಕ್ಸಸ್ ವೇಗಾ ಸಿಟಿ ಮಾಲ್, ಫೋರಮ್ ಮಾಲ್, ಅಪೊಲೊ ಕ್ರೇಡಲ್ & ಚಿಲ್ಡ್ರನ್ ಹಾಸ್ಪಿಟಲ್ಸ್‌, ಈಜೋನ್ ಇವಿ ಬೈಕ್‌ಗಳು, ರೆಂಟೆಲೊ ಇವಿ ಬೈಕ್‌ಗಳು, ನೇಚರ್ ಕ್ರಾಫ್ಟ್ಸ್ ಎಸ್ಟೇಟ್ ಸ್ಟೇ ಮತ್ತು ಇತರರು ಕೈಜೋಡಿಸಿದ್ದರು

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles