ರಾಜ್ಯ ಬಿಜೆಪಿ ಕಚೇರಿ ‘ಜಗನ್ನಾಥ ಭವನ’ ಸ್ಫೋಟ ಪ್ರಕರಣ: ಶಂಕಿತ ಉಗ್ರನ ಬಂಧನ!

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನ ಮುಂಭಾಗ 2013 ರಲ್ಲಿ ನಡೆದ ಬಾಂ*ಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಶಂಕಿತ ಉಗ್ರ ನಗೂರ್ ಅಬೂಬಕರ್ ಸಿದ್ದಿಕ್‌ನನ್ನು ತಮಿಳುನಾಡು ಪೊಲೀಸರು ಬಂಧಿಸಿರುವುದಾಗಿ ವರದಿಗಳು ತಿಳಿಸಿವೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ ಎನಲಾಗಿದ್ದು, ಈ ಬಂಧನವು 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನ ವಿರುದ್ಧದ ತನಿಖೆಯಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಿಕ್‌ನ ಜೊತೆಗೆ ಆತನ ಸಹಾಯಕ ತಿರುನಲ್ವೇಲಿ ಮೊಹಮ್ಮದ್ ಅಲಿ ಸಹಾ ಬಂಧನಕ್ಕೊಳಗಾಗಿದ್ದಾನೆ ಎನ್ನಲಾಗಿದೆ.
ಆಗ 2013 ರ ಏಪ್ರಿಲ್ 17 ರಂದು ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿ ಮುಂಭಾಗ ನಡೆದ ಸ್ಫೋಟದಲ್ಲಿ 16 ಜನರು ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ನಗೂರ್ ಅಬೂಬಕರ್ ಸಿದ್ದಿಕ್ ಪ್ರಮುಖ ಶಂಕಿತನಾಗಿದ್ದ.

2011 ರಲ್ಲಿ ಮದುರೈನಲ್ಲಿ ಬಿಜೆಪಿ ಮುತ್ಸದ್ದಿ ಎಲ್.ಕೆ.ಆಡ್ವಾಣಿಯವರ ರಥಯಾತ್ರೆಯ ಮಾರ್ಗದಲ್ಲಿ ಪೈಪ್ ಬಾಂಬ್ ಇರಿಸಿದ ಯತ್ನ, 1995 ರಲ್ಲಿ ಚೆನ್ನೆನ ಚಿಂತಾದ್ರಿಪೇಟ್‌ನ ಹಿಂದೂ ಮುನ್ನಾನಿ ಕಚೇರಿಯಲ್ಲಿ ನಡೆದ ಬಾಂಬ್ ಸ್ಫೋಟ, ಮತ್ತು ನಾಗೋರ್‌ನಲ್ಲಿ ಪಾರ್ಸೆಲ್ ಬಾಂಬ್ ದಾಳಿಯಲ್ಲಿ ಹಿಂದೂ ಕಾರ್ಯಕರ್ತ ಮುತ್ತುಕೃಷ್ಣನ್‌ನ ಕೊಲೆಯೂ ಸೇರಿದಂತೆ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿದ್ದಿಕ್ ಭಾಗಿಯಾಗಿದ್ದ ಎನ್ನಲಾಗಿದೆ.
1999 ರಲ್ಲಿ ಚೆನ್ನೆನ ಪೊಲೀಸ್ ಕಮಿಷನರ್ ಕಚೇರಿ ಸೇರಿದಂತೆ ಚೆನ್ನೆ, ತಿರುಚಿ, ಕೊಯಮತ್ತೂರು, ಮತ್ತು ಕೇರಳದ ಏಳು ಕಡೆಗಳಲ್ಲಿ ಬಾಂಬ್ ಇರಿಸಿದ ಪ್ರಕರಣದಲ್ಲಿಯೂ ಆತ ಪ್ರಮುಖ ಪಾತ್ರ ವಹಿಸಿದ್ದ. 2012 ರಲ್ಲಿ ವೆಲ್ಲೂರಿನಲ್ಲಿ ಡಾ. ಅರವಿಂದ್ ರೆಡ್ಡಿಯ ಕೊಲೆ ಪ್ರಕರಣದಲ್ಲೂ ಸಿದ್ದಿಕ್ ಶಂಕಿತನಾಗಿದ್ದ.
ತ.ನಾಡು ಪೊಲೀಸರ ವಿಶೇಷ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಬಂಧನ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.. ಸಿದ್ದಿಕ್ ಮತ್ತು ಆತನ ಸಹಾಯಕ ಮೊಹಮ್ಮದ್ ಅಲಿ 30 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ದಕ್ಷಿಣ ಭಾರತದ ವಿವಿಧ ಭಯೋತ್ಪಾದಕ ಘಟನೆಗಳ ತನಿಖೆಗೆ ಹೊಸ ಆಯಾಮ ನೀಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತ.ನಾಡು ಪೊಲೀಸರ ಹೇಳಿಕೆಯಂತೆ, `ನಗೂರ್ ಅಬೂಬಕರ್ ಸಿದ್ದಿಕ್ ಮತ್ತು ತಿರುನೆಲ್ವೇಲಿ ಮೊಹಮ್ಮದ್ ಅಲಿ 1995 ರಿಂದ ತಮಿಳುನಾಡಿನಲ್ಲಿ ವಿವಿಧ ಬಾಂಬ್ ಸ್ಫೋಟಗಳು, ಧಾರ್ಮಿಕ ಘರ್ಷಣೆ, ಕೊಲೆಗಳು, ಹಿಂದೂ ನಾಯಕರುಗಳ ಕೊಲೆ ಸಂಚಿನ ಯತ್ನಗಳು ಮತ್ತು ಭಯೋತ್ಪಾದನಾ ಚಟುವಟಿಕೆಗಳಿಗೆ ಜವಾಬ್ದಾರರು. ಈ ಬಂಧನವು ಭಯೋತ್ಪಾದಕ ಜಾಲದ ಒಡೆಯುವಿಕೆಗೆ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles