‘ಕುವೆಂಪು ವಿಚಾರ ಕ್ರಾಂತಿ’ ಪುಸ್ತಕ ಜನಾರ್ಪಣೆ

ರಾಷ್ಟಕವಿ ಕುವೆಂಪು ಅವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳ ಕೇಂದ್ರ ಪ್ರಜ್ಞೆಯನ್ನು ಪ್ರಸಾರ ಮಾಡುವ ಅಗತ್ಯವಿದೆ. ಕುವೆಂಪು ಅವರು ಅಂದಿನ ದಿನಗಳಲ್ಲೇ ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯಪರತೆ, ಒಕ್ಕೂಟ ಪದ್ಧತಿ ಪರವಾದ ಚಿಂತನಶೀಲತೆ, ಜಾತಿ ಮತ್ತು ಧರ್ಮ ತಾರತಮ್ಯ ವಿರೋಧಿ ವೈಚಾರಿಕತೆ, ಮೂಢನಂಬಿಕೆ ವಿರೋಧಿ ವೈಜ್ಞಾನಿಕತೆಯೇ ಮುಂತಾದ ಬರಹಗಳು ಇಂದಿನ ಸನ್ನಿವೇಶದಲ್ಲಿ ಜನರಿಗೆ ತಲುಪಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪನವರು ಕುವೆಂಪು ಅವರ ಕೆಲವು ಆಯ್ದ ಲೇಖನಗಳು ಮತ್ತು ಲೇಖನಗಳ ಆಯ್ದ ಭಾಗಗಳನ್ನು ಸಂಕಲಿಸಿ ‘ಕುವೆಂಪು ವಿಚಾರ ಕ್ರಾಂತಿ’ ಎಂಬ ಪುಸ್ತಕವನ್ನು ಸಿದ್ಧಪಡಿಸಿದ್ದಾರೆ.
ಈ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಅವರು ಜುಲೈ,5ರಂದು ಶನಿವಾರ ಸಾಯಂಕಾಲ 5:00 ಗಂಟೆಗೆ ಜನಾರ್ಪಣೆ ಮಾಡಲಿದ್ದಾರೆ. ಈ ಜನಾರ್ಪಣೆ ಕಾರ್ಯಕ್ರಮವು ಓಉಔ, ಸಭಾಂಗಣ, ಸರ್ಕಾರಿ ನೌಕರರ ಸಂಘ, ಕಬ್ಬನ್ ಪಾರ್ಕ್, ಬೆಂಗಳೂರಿನಲ್ಲಿ ನಡೆಯಲಿದ್ದು, ನಾಡೋಜಾ ಡಾ. ಹಂ. ಪ. ನಾಗರಾಜಯ್ಯ, ಜಸ್ಟಿಸ್ ನಾಗಮೋಹನದಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಕುವೆಂಪು ಅವರ ಪುತ್ರಿ ಶ್ರೀಮತಿ ತಾರಿಣಿ ಚಿದಾನಂದಗೌಡ, ಅಳಿಯ ಡಾ. ಚಿದಾನಂದಗೌಡ ಮತ್ತು ಲೇಖಕ ಬರಗೂರು ರಾಮಚಂದ್ರಪ್ಪ ಉಪಸ್ಥಿತರಿರುತ್ತಾರೆ. ಸಭಾ ಕಾರ್ಯಕ್ರಮಕ್ಕೆ ಮುಂಚೆ 4 ಗಂಟೆಗೆ ಡಾ. ಶಮಿತಾ ಮಲ್ನಾಡ್ ತಂಡದಿ0ದ ಕುವೆಂಪು ಗೀತೆ ಗಾಯನವಿದೆ.

ಕಾರ್ಯಕ್ರಮದ ವಿವರ
ದಿನಾಂಕ : ಜುಲೈ 05, 2025 ಶನಿವಾರ
ಸಮಯ : ಸಂಜೆ 5ಗಂಟೆ
ಸ್ಥಳ : NGO ಸಭಾಂಗಣ, ಸರ್ಕಾರಿ ನೌಕರರ ಸಂಘ, ಕಬ್ಬನ್ ಪಾರ್ಕ್, ಬೆಂಗಳೂರು
ಸ0ಪರ್ಕಕ್ಕಾಗಿ : 7483950580, 9448324727

 

TODAY’S NEWS HEADLINES

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles