ಪ್ರವಾಹ ಸಂತ್ರಸ್ತರಿಗೆ ನೀಡಲು ಹಣವಿಲ್ಲ, ನಾನು ಕ್ಯಾಬಿನೇಟ್‌ ಸಚಿವೆ ಅಲ್ಲ; ಮತ್ತೆ ವಿವಾದ ಸೃಷ್ಟಿಸಿದ ಕಂಗನಾ

ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಭಾರೀ ಮಳೆಯಿಂದಾಗಿ ಪ್ರವಾಹ  ಉಂಟಾಗಿದೆ. ಪ್ರವಾಹದಿಂದಾಗಿ ಈ ವರೆಗೆ 78 ಜನರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ಹಾನಿಯಾಗಿವೆ. ಭಾನುವಾರ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪ್ರವಾಹ   ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ್ದ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್, ತಮ್ಮ ಬಳಿ ಸಂಪುಟ ಹುದ್ದೆಯೂ ಇಲ್ಲ, ವಿಪತ್ತು ಪರಿಹಾರಕ್ಕಾಗಿ ಹಣವೂ ಇಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿ ಮಾಡಿದ್ದಾರೆ. ಆದಾಗ್ಯೂ, ಕೇಂದ್ರದಿಂದ ಆರ್ಥಿಕ ನೆರವು ಪಡೆಯಲು ತಾವು ಪ್ರಯತ್ನಿಸುತ್ತಿರುವುದಾಗಿ ಅವರು ಒತ್ತಿ ಹೇಳಿದರು.

ನನ್ನ ಬಳಿ ವಿಪತ್ತು ಪರಿಹಾರಕ್ಕಾಗಿ ಯಾವುದೇ ಹಣವಿಲ್ಲ ಅಥವಾ ಯಾವುದೇ ಸಂಪುಟ ಹುದ್ದೆಯನ್ನು ಹೊಂದಿಲ್ಲ. ಸಂಸದರಿಗೆ ಸಂಸತ್ತಿಗೆ ಸೀಮಿತವಾದ ಕೆಲಸವಿದೆ. ನಾವು ಬಹಳ ಸಣ್ಣವರು. ಆದರೆ, ಕೇಂದ್ರದಿಂದ ವಿಪತ್ತು ನಿಧಿಯನ್ನು ಪಡೆಯಲು ನಾನು ಸಹಾಯ ಮಾಡಬಹುದು” ಎಂದು ಮಂಡಿಯ ಸಂಸದೆ ಹೇಳಿದ್ದಾರೆ. ಕಂಗನಾ ಅವರ ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸ್ವಪಕ್ಷದವರೇ ಕಂಗನಾ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದರು. ಮಂಡಿಯಲ್ಲಿ ಪ್ರವಾಹ ಬಂದು ಜನರು ಸಂಕಷ್ಟದಲ್ಲಿದ್ದರೂ ಸಂಸದೆ ಅದರ ಕುರಿತು ಎಲ್ಲಿಯೂ ಮಾತನಾಡಿರಲಿಲ್ಲ.‌ ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಜೈರಾಮ್ ಠಾಕೂರ್ ಕಂಗನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಕಂಗನಾ ಮಂಡಿಯ ಪರಿಸ್ಥಿತಿಯ ಬಗ್ಗೆ ಏಕೆ ಪ್ರತಿಕ್ರಿಯಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಠಾಕೂರ್‌, “ನನಗೆ ಗೊತ್ತಿಲ್ಲ, ಮತ್ತು ನಾನು ಅದರ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಕಾಳಜಿ ವಹಿಸುವವರಿಗಾಗಿ ನೆರವು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಕಾಳಜಿ ವಹಿಸದವರ ಬಗ್ಗೆ ನಾನು ಕಾಮೆಂಟ್ ಮಾಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಠಾಕೂರ್ ಅವರ ಹೇಳಿಕೆಗಳ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, “ಸಂಸದ ಕಂಗನಾ ರನೌತ್ ಅವರಿಗೆ ಮಂಡಿಯ ಜನರ ಬಗ್ಗೆ ಕಾಳಜಿ ಇಲ್ಲ. ಇವು ನಮ್ಮ ಮಾತುಗಳಲ್ಲ, ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳೇ ಇದನ್ನು ಹೇಳಿದ್ದಾರೆ ಎಂದು ಹೇಳಿದೆ. ಮಂಡಿಯಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದ್ದು, ಇದು ನಿವಾಸಿಗಳ ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles