ರೀಲ್ಸ್ ಹುಚ್ಚು ಹೃದಯಕ್ಕೆ ತರ್ತಿದ್ಯಾ ಕುತ್ತು: ಮೊಬೈಲ್ ವಿಕಿರಣದಿಂದ ಹೃದಯಕ್ಕೆ ಆಪತ್ತು?

ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ ಭಾಗವಾಗಿರುವ ಮೊಬೈಲ್ ಬಳಕೆಯೂ (Mobile Addiction) ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ತಜ್ಞರ ವರದಿಯ ಮುಖ್ಯ ಅಂಶವಾಗಿದೆ.

ಕೊವಿಡ್-19 ಸಾಂಕ್ರಾಮಿಕದ ನಂತರ ಜನರಲ್ಲಿ ಮೊಬೈಲ್ ಬಳಕೆಯ ಗೀಳು ಗಣನೀಯವಾಗಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಾದ ರೀಲ್ಸ್, ವ್ಲಾಗ್‌ಗಳು ಮತ್ತು ಇತರ ಡಿಜಿಟಲ್ ವಿಷಯಗಳ ವೀಕ್ಷಣೆಯು ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಬದಲಾಗಿದೆ. ಆದರೆ, ಈ ಚಟುವಟಿಕೆಯಿಂದ ದೈಹಿಕ ಚಟುವಟಿಕೆಗಳು ಕಡಿಮೆಯಾಗಿ, ಹೃದಯದ ಕಾರ್ಯಕ್ಷಮತೆಯ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ತಜ್ಞರ ಪ್ರಕಾರ, ದೀರ್ಘಕಾಲ ಮೊಬೈಲ್‌ಗೆ ಅಂಟಿಕೊಂಡಿರುವುದರಿಂದ ಹೃದಯದ ಸ್ಪಂದನ ದರದಲ್ಲಿ (Heart Rate Variability) ಏರಿಳಿತವಾಗುತ್ತಿದ್ದು, ಇದು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ಜನರು ದಿನನಿತ್ಯದ ಬೇಸರದಿಂದ ತಪ್ಪಿಸಿಕೊಳ್ಳಲು ಮೊಬೈಲ್‌ನಲ್ಲಿ ಗಂಟೆಗಟ್ಟಲೆ ಕಳೆಯುತ್ತಿದ್ದಾರೆ. ಇದರಿಂದ ಊಟ, ನಿದ್ರೆ ಮತ್ತು ದೈಹಿಕ ಚಟುವಟಿಕೆಗಳಿಗೆ ಸಮಯವಿಲ್ಲದಂತಾಗಿ, ಒತ್ತಡದ ಜೀವನಶೈಲಿಯನ್ನು ಅನುಸರಿಸುತ್ತಿದ್ದಾರೆ. ಇದರಿಂದ ತಲೆನೋವು, ಸುಸ್ತು, ಮತ್ತು ಹೃದಯದಲ್ಲಿ ಭಾರದ ಭಾವನೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದಲ್ಲದೆ, ಮೊಬೈಲ್‌ನಿಂದ ಹೊರಸೂಸುವ ವಿಕಿರಣವು (Radiation) ಹೃದಯದ ಮೇಲೆ ದೀರ್ಘಕಾಲಿಕ ಒತ್ತಡವನ್ನುಂಟುಮಾಡಿ, ಹೃದಯಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ವರದಿಯು ಎಚ್ಚರಿಸಿದೆ,

ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದು, ಮೊಬೈಲ್ ಬಳಕೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ. ರಾತ್ರಿಯ ವೇಳೆಯಲ್ಲಿ ಮೊಬೈಲ್‌ನಿಂದ ದೂರವಿರುವುದು, ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡುವುದು, ಮತ್ತು ನಿಯಮಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಇದಕ್ಕೆ ಪರಿಹಾರವಾಗಿದೆ. ಸಾಮಾಜಿಕ ಜಾಲತಾಣದ ರೀಲ್ಸ್‌ಗೆ ಒಡ್ಡಿಕೊಂಡು ಹೃದಯದ ಆರೋಗ್ಯವನ್ನು ಕಳೆದುಕೊಳ್ಳಬೇಡಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles