ರೀಲ್ಸ್ ಹುಚ್ಚು ಹೃದಯಕ್ಕೆ ತರ್ತಿದ್ಯಾ ಕುತ್ತು: ಮೊಬೈಲ್ ವಿಕಿರಣದಿಂದ ಹೃದಯಕ್ಕೆ ಆಪತ್ತು?

ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ ಭಾಗವಾಗಿರುವ ಮೊಬೈಲ್ ಬಳಕೆಯೂ (Mobile Addiction) ಹೃದಯದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ತಜ್ಞರ ವರದಿಯ ಮುಖ್ಯ ಅಂಶವಾಗಿದೆ.

ಕೊವಿಡ್-19 ಸಾಂಕ್ರಾಮಿಕದ ನಂತರ ಜನರಲ್ಲಿ ಮೊಬೈಲ್ ಬಳಕೆಯ ಗೀಳು ಗಣನೀಯವಾಗಿ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳಾದ ರೀಲ್ಸ್, ವ್ಲಾಗ್‌ಗಳು ಮತ್ತು ಇತರ ಡಿಜಿಟಲ್ ವಿಷಯಗಳ ವೀಕ್ಷಣೆಯು ಜನರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಬದಲಾಗಿದೆ. ಆದರೆ, ಈ ಚಟುವಟಿಕೆಯಿಂದ ದೈಹಿಕ ಚಟುವಟಿಕೆಗಳು ಕಡಿಮೆಯಾಗಿ, ಹೃದಯದ ಕಾರ್ಯಕ್ಷಮತೆಯ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ತಜ್ಞರ ಪ್ರಕಾರ, ದೀರ್ಘಕಾಲ ಮೊಬೈಲ್‌ಗೆ ಅಂಟಿಕೊಂಡಿರುವುದರಿಂದ ಹೃದಯದ ಸ್ಪಂದನ ದರದಲ್ಲಿ (Heart Rate Variability) ಏರಿಳಿತವಾಗುತ್ತಿದ್ದು, ಇದು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ಜನರು ದಿನನಿತ್ಯದ ಬೇಸರದಿಂದ ತಪ್ಪಿಸಿಕೊಳ್ಳಲು ಮೊಬೈಲ್‌ನಲ್ಲಿ ಗಂಟೆಗಟ್ಟಲೆ ಕಳೆಯುತ್ತಿದ್ದಾರೆ. ಇದರಿಂದ ಊಟ, ನಿದ್ರೆ ಮತ್ತು ದೈಹಿಕ ಚಟುವಟಿಕೆಗಳಿಗೆ ಸಮಯವಿಲ್ಲದಂತಾಗಿ, ಒತ್ತಡದ ಜೀವನಶೈಲಿಯನ್ನು ಅನುಸರಿಸುತ್ತಿದ್ದಾರೆ. ಇದರಿಂದ ತಲೆನೋವು, ಸುಸ್ತು, ಮತ್ತು ಹೃದಯದಲ್ಲಿ ಭಾರದ ಭಾವನೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇದಲ್ಲದೆ, ಮೊಬೈಲ್‌ನಿಂದ ಹೊರಸೂಸುವ ವಿಕಿರಣವು (Radiation) ಹೃದಯದ ಮೇಲೆ ದೀರ್ಘಕಾಲಿಕ ಒತ್ತಡವನ್ನುಂಟುಮಾಡಿ, ಹೃದಯಘಾತದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ವರದಿಯು ಎಚ್ಚರಿಸಿದೆ,

ತಜ್ಞರು ಎಚ್ಚರಿಕೆಯ ಸಂದೇಶವನ್ನು ನೀಡಿದ್ದು, ಮೊಬೈಲ್ ಬಳಕೆಯನ್ನು ಸೀಮಿತಗೊಳಿಸುವಂತೆ ಸೂಚಿಸಿದ್ದಾರೆ. ರಾತ್ರಿಯ ವೇಳೆಯಲ್ಲಿ ಮೊಬೈಲ್‌ನಿಂದ ದೂರವಿರುವುದು, ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡುವುದು, ಮತ್ತು ನಿಯಮಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಇದಕ್ಕೆ ಪರಿಹಾರವಾಗಿದೆ. ಸಾಮಾಜಿಕ ಜಾಲತಾಣದ ರೀಲ್ಸ್‌ಗೆ ಒಡ್ಡಿಕೊಂಡು ಹೃದಯದ ಆರೋಗ್ಯವನ್ನು ಕಳೆದುಕೊಳ್ಳಬೇಡಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles