ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ 60ನೇ ಹುಟ್ಟು ಹಬ್ಬ

ಶಿಡ್ಲಘಟ್ಟ : ಎಂ ಆರ್ ಪಿ ಎಸ್ ಸಂಸ್ಥಾಪಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಂದಕೃಷ್ಣ ಮಾದಿಗ ಅವರ 60 ನೇಯ ಹುಟ್ಟು ಹಬ್ಬವನ್ನು ತಾಲೂಕಿನ ಮಾದಿಗ ದಂಡೋರ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ, ನಂತರ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಲಾಯಿತು.

ಎಂ ಆರ್ ಪಿ ಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಜೆಎಂ ದೇವರಾಜ್ ಮಾತನಾಡಿ, ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಚಳುವಳಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವ ಮಹಾನ್ ವ್ಯಕ್ತಿ ಮಂದಕೃಷ್ಣ ಮಾದಿಗ ಅವರು ನಮಗೆ ಸದಾ ಪ್ರೇರಣೆ. ಅವರು ಸಾರ್ವಜನಿಕ ಪ್ರದರ್ಶನಗಳ ಮೂಲಕ ಮಾದಿಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಜಾಗೃತಿ ಮೂಡಿಸಿ ಮಾದಿಗ ಸಮುದಾಯ ಎದುರಿಸುತ್ತಿರುವ ಅನ್ಯಾಯಗಳನ್ನು ನಿರಂತರವಾಗಿ ಎದುರಿಸುತ್ತಾ ಬಂದಿದ್ದಾರೆ. ಆರ್ಥಿಕ ಮತ್ತು ಶೈಕ್ಷಣಿಕ ಉದ್ಯೋಗಾವಕಾಶಗಳಿಗೆ ಮಂದ ಕೃಷ್ಣ ಮಾದಿಗ ಅವರ ಸಮರ್ಪಣೆ ಮತ್ತು ನಾಯಕತ್ವವು ಅನೇಕರಿಗೆ ಸ್ಫೂರ್ತಿ ನೀಡುತ್ತಿದೆ ಎಂದು ತಿಳಿಸಿದರು.

ದಲಿತ ಮುಖಂಡ ನಾಗಸರಸಿಂಹ ಮಾತನಾಡಿ,ಮಂದಕೃಷ್ಣ ಮಾದಿಗ ಅವರ ಪ್ರಮುಖವಾಗಿ ದಲಿತ ಜಾತಿಯ ಅಂಚಿನಲ್ಲಿರುವ ಮಾದಿಗ ಸಮುದಾಯದ ಹಕ್ಕುಗಳಿಗಾಗಿ ಕಳೆದ 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಹಾಗೆಯೇ ಮಕ್ಕಳ ಮತ್ತು ಅಂಗ ವಿಕಲರ ಪರ ಅವರ ಹಕ್ಕುಗಳಿಗಾಗಿ ಹೋರಾಟ ಮಾಡಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಮೀಸಲಾತಿ ಸವಲತ್ತುಗಳ ಸಮಾನ ವಿತರಣೆಗಾಗಿ ಹೋರಾಡಲು ಮೀಸಲಾಗಿರುವ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ ಆರ್ ಪಿ ಎಸ್) ಸ್ಥಾಪನೆ ಅವರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸಹ ಇತ್ತೀಚಿಗೆ ಪಡೆದಿದ್ದಾರೆ ಎಂದು ಅವರಿಗೆ 60ನೇ ವರ್ಷದ ಶುಭಾಶಯಗಳು ಕೋರಿದರು.

ಮಾದಿಗ ದಂಡೋರ ಕೃಷ್ಣಪ್ಪ ಮಾತನಾಡಿ ಮಾದಿಗ ಸಮುದಾಯದೊಳಗಿನ ಉದ್ದೇಶಿತ ಫಲಾನುಭವಿಗಳಿಗೆ ಮೀಸಲಾತಿ ನೀತಿಗಳ ಪ್ರಯೋಜನಗಳನ್ನು ನ್ಯಾಯಯುತವಾಗಿ ಒದಗಿಸಲು ಹಗಲಿರುಳು ಹೋರಾಟ ಎಲ್ಲಾ ಮಾದಿಗ ಸಮಾಜದವರಿಗೆ ಫಲ ನೀಡಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಗವಂತಪ್ಪ,ಡಿ ಕೃಷ್ಣಪ್ಪ, ತಾತಹಳ್ಳಿ ಚಲಪತಿ, ಕೆ ನಾರಾಯಣಸ್ವಾಮಿ, ಮಂಜುನಾಥ್ ಅಲಸೂರು,ಭಕ್ತರಹಳ್ಳಿ ಡಾ. ವಿಶ್ವನಾಥ್, ಹಲಸೂರುದಿನ್ನೆ ಆಂಜಿ,ಚನ್ನಹಳ್ಳಿ ದೇವರಾಜ್, ಲೋಕೇಶ್, ವೇಣುಗೋಪಾಲ್, ಗೋಕುಲ್, ನರಸಿಂಹಪ್ಪ, ನಾರಾಯಣಸ್ವಾಮಿ, ಪ್ರಕಾಶ್, ಅಶೋಕ್, ರಾಮರಾಜ್, ಗುರುಮೂರ್ತಿ, ರವಿಶಂಕರ್, ಚನ್ನಕೃಷ್ಣ, ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.

8-7-2025 Today’s Headlines :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles