ರಾಜ್ಯ ಸರ್ಕಾರ ಕೂಡಲೇ ಬಾಂಗ್ಲಾ ಹಾಗೂ ಪಾಕ್‌ ಪ್ರಜೆಗಳನ್ನು ಹೊರಕ್ಕೆ ಕಳಿಸಬೇಕು

ಬೆಂಗಳೂರು, ಜುಲೈ 9 : ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳ ಸ್ಥಗಿತದ ಬಗ್ಗೆ ಹೈಕೋರ್ಟ್‌ ಮಧ್ಯಂತರ ತಡೆ ಆದೇಶ ನೀಡಿದೆ. ಈ ಕುರಿತು ಬಿಜೆಪಿಯಿಂದ ಹೋರಾಟ ಮಾಡಲಾಗಿತ್ತು. ಖಾಸಗಿ ಮೆಡಿಕಲ್‌ ಫಾರ್ಮಾಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿತ್ತು. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ. ಇನ್ನಾದರೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಜನರಿಗೆ ಏನು ಬೇಕೆಂದು ಅರಿತು ಕೆಲಸ ಮಾಡಬೇಕಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ 260-270 ಔಷಧಿಗಳನ್ನು ನೀಡಬೇಕಾಗುತ್ತದೆ. ಆದರೆ ಅಷ್ಟೊಂದು ಔಷಧಿ ಇಲ್ಲ. ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇತ್ತೀಚೆಗೆ ಹಾಸನ ಆಸ್ಪತ್ರೆಗೆ ಹೋದಾಗ ಒಬ್ಬರೇ ಹೃದ್ರೋಗ ತಜ್ಞ ವೈದ್ಯರು ಇರುವುದು ಕಂಡುಬಂತು. ಹೃದಯ ಸಂಬಂಧಿ ರೋಗದ ತುರ್ತು ಪರಿಸ್ಥಿತಿಯಲ್ಲಿ ಅವರು ಇಂಜೆಕ್ಷನ್‌ ಕೊಟ್ಟು ಬೆಂಗಳೂರಿಗೆ ಕಳಿಸುತ್ತಾರೆ. ಇಂತಹ ಸ್ಥಿತಿಯಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಿದರೆ ಬಹಳ ಸಮಸ್ಯೆಯಾಗುತ್ತದೆ ಎಂದರು.

ಜೈಲಿನಲ್ಲೇ ಭಯೋತ್ಪಾದಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಗೃಹ ಇಲಾಖೆ ಸತ್ತೇಹೋಗಿದೆ. ರಾಜ್ಯ ಸರ್ಕಾರ ಕೂಡಲೇ ಬಾಂಗ್ಲಾ ಹಾಗೂ ಪಾಕ್‌ ಪ್ರಜೆಗಳನ್ನು ಹೊರಕ್ಕೆ ಕಳಿಸಬೇಕು. ಇದಕ್ಕಾಗಿ ವಿಶೇಷ ಪಡೆ ರಚಿಸಬೇಕು. ಇಲ್ಲೂ ವೋಟ್‌‌ ಬ್ಯಾಂಕ್‌ ರಾಜಕೀಯ ಮಾಡಬಾರದು. ಕೈದಿಗಳ ಚಲನವಲನಗಳ ಬಗ್ಗೆ ನಿಗಾ ಇರಿಸಲು ಕ್ರಮ ವಹಿಸಬೇಕು. ಜೈಲಿನಲ್ಲಿ ಮೊಬೈಲ್‌ ಬಳಕೆ ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ರಂಭಾಪುರಿ ಜಗದ್ಗುರುಗಳು ಅವರ ಅಭಿಪ್ರಾಯವನ್ನು ಹೇಳಿದ್ದಾರೆ. ಲಕ್ಷಾಂತರ ಭಕ್ತರು ಬರುವಾಗ ಅವರ ಅಭಿಪ್ರಾಯವನ್ನು ಹೇಳಿರುತ್ತಾರೆ. ಅದನ್ನೇ ಸ್ವಾಮೀಜಿ ಹೇಳಿರುತ್ತಾರೆ. ಸರ್ಕಾರ ಗ್ಯಾರಂಟಿಗಳನ್ನು ಪ್ರತಿ ದಿನ ಕೊಡುತ್ತಿದೆ. ಆದರೆ ಅಕ್ಕಿ ಸಾಗಣೆಗೆ ಹಣವಿಲ್ಲದೆ, ಲಾರಿ ಮುಷ್ಕರ ನಡೆದಿದೆ. ಎಲ್ಲ ಬಾಕಿ ಬಿಲ್‌ ಇಟ್ಟುಕೊಂಡು ಗ್ಯಾರಂಟಿ ಕೊಟ್ಟರೆ ಪ್ರಯೋಜನವಿಲ್ಲ. ಉಚಿತ ಬಸ್‌ ನೀಡಿದ್ದರೂ, ಶಾಲಾ ಮಕ್ಕಳು ನಡೆದುಕೊಂಡು ಹೋಗಬೇಕಾಗಿದೆ. ಜನರಿಗೆ ಸ್ವಾವಲಂಬಿ ಜೀವನ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ ಎಂದರು.

ಬಿಕೆ.ಹರಿಪ್ರಸಾದ್‌ ತುಳಿತಕ್ಕೊಳಗಾದ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ. ಬಿಜೆಪಿಯಲ್ಲಿ ವಂಶಪಾರಂಪರ್ಯವಾಗಿ ಅಧ್ಯಕ್ಷರನ್ನು ಘೋಷಣೆ ಮಾಡುವ ಕ್ರಮವಿಲ್ಲ. ಕಾಂಗ್ರೆಸ್‌ನಲ್ಲಿ ಚುನಾವಣೆ ನಡೆಯುವುದಿಲ್ಲ. ಆದರೆ ಬಿಜೆಪಿಯಲ್ಲಿ ಪ್ರಜಾಪ್ರಭುತ್ವವಿದೆ ಎಂದರು.

 

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles