ಕಾಲಕಾಲಕ್ಕೆ ಸರಿಯಾಗಿ ತೆರಿಗೆ ಪಾವತಿಸಲು ವಾಣಿಜ್ಯ ತೆರಿಗೆ ಇಲಾಖೆಯಿಂದ ವರ್ತಕರಿಗೆ ಸೂಚನೆ

ಮಾಧ್ಯಮಗಳಲ್ಲಿ ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ವರದಿಯಾಗಿದ್ದು, ಈ ಕುರಿತು ವಾಣಿಜ್ಯ ತೆರಿಗೆ ಇಲಾಖೆಯು ಈ ಕೆಳಕಂಡ ಮಾಹಿತಿಯನ್ನು ನೀಡಿರುತ್ತದೆ.

ಜುಲೈ 1,  2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೂರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿ.ಎಸ್.ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು & ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾದ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ಧರಿಸಲ್ಪಡುತ್ತದೆ. (ಉದಾಹರಣೆಗೆ ಬ್ರೆಡ್ ಮಾರಾಟದ ಮೇಲೆ ತೆರಿಗೆ ಇರುವುದಿಲ್ಲ. ಕುರುಕುಲು ತಿಂಡಿಗಳ ಮೇಲೆ 5% ತೆರಿಗೆ ಬಾದ್ಯತೆ ಇರುತ್ತದೆ).

ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ (ಯೂ.ಪಿ.ಐ) ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ ಯೂ.ಪಿ.ಐ ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತದೆ. ವರ್ತಕರು ಮಾರಾಟದ ಹಣವನ್ನು (ಯೂ.ಪಿ.ಐ) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, ಯೂ.ಪಿ.ಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ – 2017 ರಡಿಯಲ್ಲಿ ನೋಂದಣಿಯನ್ನು ಮಾಡದ ಹಾಗೂ ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸನ್ನು ಜಾರಿಗೊಳಿಸಲಾಗಿರುತ್ತದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ.

ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕಾಗಿರುತ್ತದೆ. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ. ಇನ್ನು ಮುಂದೆ 1% ತೆರಿಗೆ ಪಾವತಿಸಬಹುದಾಗಿರುತ್ತದೆ. ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಮಾಹಿತಿಯನ್ನು ಇಲಾಖೆಯ ಜಾಲತಾಣ https://gst.kar.nic.in/ದಲ್ಲಿ ಪಡೆಯಬಹುದಾಗಿರುತ್ತದೆ ಎಂದು ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರೆ.

VK NEWS DIGITAL : HEADLINES

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles