ಹರಿಹರ ವೀರಮಲ್ಲು ಸಿನಿಮಾ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ – ಕೇವಲ ತೆಲುಗು ಪೋಸ್ಟರ್‌ಗಳಿಗೆ ವಿರೋಧ

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಹೊಸ ಸಿನಿಮಾ ಹರಿಹರ ವೀರಮಲ್ಲು ತೆರೆಕಂಡಿದ್ದು, ಆಂಧ್ರ ಮತ್ತು ತೆಲಂಗಾಣದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ, ಪವನ್ ಕಲ್ಯಾಣ್ ರಾಜಕೀಯದಲ್ಲಿ ಸಂಪೂರ್ಣ ಸಕ್ರೀಯರಾದ ನಂತರ ಪವನ್ ಕಲ್ಯಾಣ್ ಅಭಿನಯದ ಯಾವ ಸಿನಿಮಾ ಕೂಡ ತೆರೆ ಕಂಡಿರಲಿಲ್ಲ, ಹೀಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆಗಾಗಿ ಕಾದು ಕುಳಿತಿದ್ದರು,
ಹೀಗಾಗಿ ಸಹಜವಾಗಿಯೇ ಹರಿಹರ ವೀರಮಲ್ಲು ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿತ್ತು ಈ ಕಾರಣಕ್ಕೆ ಅಭಿಮಾನಿಗಳು ಸಿನಿಮಾವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ, ಆದ್ರೆ ಈ ಬೆನ್ನಲ್ಲೇ ಹರಿಹರ ವೀರಮಲ್ಲು ಚಿತ್ರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಕರ್ನಾಟಕದಲ್ಲಿ ತೀವ್ರ ವಿರೋಧ ಎದುರಿಸಿದೆ,
ಹೌದು… ಪವನ್ ಕಲ್ಯಾಣ್ ಅಭಿನಯದ ಹರಿಹರ ವೀರಮಲ್ಲು ಸಿನಿಮಾ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ, ಕನ್ನಡಪರ ಹೋರಾಟಗಾರರು ಪವನ್ ನಟನೆಯ ಸಿನಿಮಾ ಪೋಸ್ಟರ್ ಗಳನ್ನು ಹರಿದು, ಫ್ಲೆಕ್ಸ್ ಗಳನ್ನು ತೆರವು ಮಾಡಿ ಸಿನಿಮಾ ತಂಡದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದಕ್ಕೆ ಕಾರಣ ಹರಿಹರ ವೀರಮಲ್ಲು ಸಿನಿಮಾ ತಂಡದ ಕನ್ನಡ ವಿರೋಧಿ ನೀತಿ,
ಯಾವುದೇ ಭಾಷೆಯ ಸಿನಿಮಾ ಕನ್ನಡದಲ್ಲಿ ಕರ್ನಾಟಕದಲ್ಲಿ ತೆರೆ ಕಾಣಬೇಕು ಎಂದಾದರೆ ಆ ಸಿನಿಮಾದ ಪೋಸ್ಟರ್ ಗಳು ಕನ್ನಡದಲ್ಲಿರಬೇಕು, ಈ ನಿಯಮವನ್ನು ಹರಿಹರ ವೀರಮಲ್ಲು ಚಿತ್ರ ತಂಡ ಧಿಕ್ಕರಿಸಿ ಕೇವಲ ತೆಲುಗಿನಲ್ಲಿ ಮಾತ್ರ ಪೋಸ್ಟರ್ ಗಳನ್ನು ಅಂಟಿಸಲಾಗಿದೆ, ಹೀಗಾಗಿ ಈ ದೋರಣೆಯ ವಿರುದ್ಧ ಕನ್ನಡಪರ ಹೋರಾಟಗಾರರು ರೊಚ್ಚಿಗೆದ್ದಿದ್ದಾರೆ,
ಹರಿಹರ ವೀರಮಲ್ಲು ಸಿನಿಮಾ ತೆರೆಕಂಡಿರುವ ಚಿತ್ರಮಂದಿರಗಳಿಗೆ ಲಗ್ಗೆಯಿಟ್ಟ ಕನ್ನಡಪರ ಹೋರಾಟಗಾರು ಪೋಸ್ಟರ್ ಗಳು ಮತ್ತು ಬ್ಯಾನರ್ ಗಳನ್ನು ಹರಿದು, ಕಟೌಟ್ ಗಳನ್ನು ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಈ ವೇಳೆ ಸ್ಧಳದಲ್ಲಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಇದನ್ನು ವಿರೋಧಿಸುವ ಪ್ರಯತ್ನ ಮಾಡಿದರಾದ್ರೂ, ಕನ್ನಡಿಗರ ಆಕ್ರೋಶ ಕಂಡು ಸುಮ್ಮನಾಗಿದ್ದಾರೆ,

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles