ಅಬಕಾರಿ ಇಲಾಖೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ

ಬೆಂಗಳೂರು, ಜುಲೈ 26, (ಕರ್ನಾಟಕ ವಾರ್ತೆ): 2025-26ರ ಬಜೆಟ್‍ನಲ್ಲಿ ಘೋಷಿಸಿದಂತೆ, ಇನ್ಸ್ಪೆಕ್ಟರ್‍ಗಳು, ಸಬ್ ಇನ್ಸ್‍ಪೆಕ್ಟರ್‍ಗಳು, ಹೆಡ್ ಕಾನ್ಸ್ ಟೇಬಲ್‍ಗಳು ಮತ್ತು ಕಾನ್ಸ್ ಟೇಬಲ್‍ಗಳ ಗ್ರೂಪ್-ಸಿ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮತ್ತು ನಿಯೋಜನೆ ವ್ಯವಸ್ಥೆಯನ್ನು ಅಬಕಾರಿ ಇಲಾಖೆಯಲ್ಲಿ ಪರಿಚಯಿಸಲಾಗಿದೆ. ಕರ್ನಾಟಕ ಸರ್ಕಾರವು ಕರ್ನಾಟಕ ನಾಗರಿಕ ಸೇವೆಗಳ (ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಅಧಿಕಾರಿಗೆ ವರ್ಗಾವಣೆ) ನಿಯಮಗಳನ್ನು 2025 ರಲ್ಲಿ ಜಾರಿಗೆ ತಂದಿದ್ದು, ಅದನ್ನು 14-05-2025 ರಂದು ಪ್ರಕಟಿಸಲಾಯಿತು.

ಈ ನಿಯಮಗಳ ಪ್ರಕಾರ, ಕರ್ನಾಟಕ ಸರ್ಕಾರವು 08-07-2025 ರಂದು ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಯಿತು. ಇದರಲ್ಲಿ ವರ್ಗಾವಣೆ, ಕೌನ್ಸೆಲಿಂಗ್ ಪ್ರಕ್ರಿಯೆ, ಆದ್ಯತೆಯ ಪಟ್ಟಿ ಸಿದ್ಧಪಡಿಸಿ, ಕೌನ್ಸೆಲಿಂಗ್ ಮೂಲಕ ನ ವರ್ಗಾವಣೆಯ ಉದ್ದೇಶಕ್ಕಾಗಿ ಸಾಫ್ಟ್‍ವೇರ್ ಮಾಡ್ಯೂಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಅಬಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳ ಸೇವಾ ಪೆÇ್ರಫೈಲ್ಗಳನ್ನು ಮಾಡ್ಯೂಲ್‍ನಲ್ಲಿ ಸೆರೆಹಿಡಿಯಲಾಗಿದೆ. ಇನ್ಸ್ ಪೆಕ್ಟರ್‍ಗಳು, ಸಬ್ ಇನ್ಸ್ ಪೆಕ್ಟರ್‍ಗಳು ಕಾನ್ಸ್‍ಟೇಬಲ್‍ಗಳು ಮತ್ತು ಕಾನ್ಸ್ ಟೇಬಲ್‍ಗಳನ್ನು ಆನ್‍ಲೈನ್ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು, ವರ್ಗಾವಣೆಗೆ ನೌಕರರ ಕರಡು ಪಟ್ಟಿಯನ್ನು 17-07-2025 ರಂದು ಪ್ರಕಟಿಸಲಾಯಿತು ಮತ್ತು ಅನ್‍ಲೈನ್‍ನಲ್ಲಿ ಆಕ್ಷೇಪಣೆಗೆ ಆಹ್ವಾನಿಸಲಾಯಿತು.

ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, ಅರ್ಹ ನೌಕರರ ಅಂತಿಮ ಪಟ್ಟಿಯನ್ನು 23-07-2025 ಪ್ರಕಟಿಸಲಾಯಿತು. ನಂತರ ವೇಳಾಪಟ್ಟಿಯ ಪ್ರಕಾರ, 24-07-2025 ರಂದು ಅಬಕಾರಿ ಇನ್ಸ್‍ಪೆಕ್ಟರ್ ಗಳು ಮತ್ತು ಸಬ್-ಇನ್ಸ್ ಪೆಕ್ಟರ್ ಗಳಿಗೆ ಮತ್ತು 25-07-2025 ರಂದು ಅಬಕಾರಿ ಹೆಡ್ ಕಾನ್ಸ್‍ಟೇಬಲ್‍ಗಳು ಮತ್ತು ಅಬಕಾರಿ ಕಾನ್ಸ್ ಟೇಬಲ್‍ಗಳಿಗೆ ಅನ್ ಕೌನ್ಸೆಲಿಂಗ್ ನಡೆಸಲಾಯಿತು. ಕೌನ್ಸೆಲಿಂಗ್‍ನಲ್ಲಿ ಅವರ ಆಯ್ಕೆಯ ಸ್ಥಳದ ಪ್ರಕಾರ ಅಬಕಾರಿ ನಿರೀಕ್ಷಕರು – 151, ಅಬಕಾರಿ ಉಪ ನಿರೀಕ್ಷಕರು – 114, ಹೆಡ್ ಕಾನ್ಸ್‍ಟೇಬಲ್‍ಗಳು – 07 ಮತ್ತು ಕಾನ್ಸ್‍ಟೇಬಲ್‍ಗಳು – 415 ಒಟ್ಟು – 687 ನೌಕರರನ್ನು ವರ್ಗಾಯಿಸಲಾಗುತ್ತದೆ.

ಕರ್ನಾಟಕದ ಗೌರವಾನ್ವಿತ ಹೈಕೋರ್ಟ್, ಬೆಂಗಳೂರು ಪೀಠ ಮತ್ತು ಗೌರವಾನ್ವಿತ ಕರ್ನಾಟಕ ಆಡಳಿತ ನ್ಯಾಯಮಂಡಳಿ, ಬೆಂಗಳೂರು ಮತ್ತು ಬೆಳಗಾವಿ ಪೀಠದ ಮುಂದೆ ವರ್ಗಾವಣೆ ನಿಯಮಗಳನ್ನು ಪ್ರಶ್ನಿಸಲಾಗಿರುವುದರಿಂದ, ಅಬಕಾರಿ ನಿರೀಕ್ಷಕರು ಮತ್ತು ಸಬ್-ಇನ್‍ಸ್ಪೆಕ್ಟರ್‍ಗಳ ವರ್ಗಾವಣೆ ಪಟ್ಟಿಯನ್ನು ಅಂತಿಮ ತೀರ್ಪಿಗೆ ಒಳಪಟ್ಟು ಹೊರಡಿಸಲಾಗುವುದು. ಉಳಿದಂತೆ ಅಬಕಾರಿ ಹೆಡ್ ಕಾನ್ಸ್ ಟೇಬಲ್‍ಗಳು ಮತ್ತು ಅಬಕಾರಿ ಕಾನ್ಸ್‍ಟೇಬಲ್‍ಗಳ ವರ್ಗಾವಣೆ ಆದೇಶವನ್ನು ಈ ದಿನ ಅಂದರೆ ದಿನಾಂಕ: 25-07-2025 ರಂದೇ ಹೊರಡಿಸಲಾಗಿರುತ್ತದೆ ಎಂದು ಅಬಕಾರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles