ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ: ಬಸವರಾಜ ಬೊಮ್ಮಾಯಿ

 

ಹಾವೇರಿ: ಧರ್ಮಸ್ಥಳ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆಯೋ ಅದನ್ನು ಸರ್ಕಾರ ಬಹಿರಂಗ ಪಡಿಸಲಿ, ಅದನ್ನು ಮುಚ್ಚಿಟ್ಟುಕೊಳ್ಳುವುದು ಸರಿ ಅಲ್ಲ. ಜನರಿಗೆ ಸತ್ಯ ತಿಳಿಯಲಿ ಎಂಬುದೇ ನಮ್ಮ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚಿಗೆ ಏನು ಗೊತ್ತಾಗಿದೆ ಅದನ್ನು ಬಹಿರಂಗ ಪಡಿಸಬೇಕು. ಒಂದು ಧಾರ್ಮಿಕ ಕ್ಷೇತ್ರವನ್ನು ಇಷ್ಟು ಅವಹೇಳನಕಾರಿಯಾಗಿ ಅಪಪ್ರಚಾರ ಮಾಡಿರುವುದು ಇತಿಹಾಸದಲ್ಲೇ ಇಲ್ಲ. ಸರ್ಕಾರ ಇದಕ್ಕೆಲ್ಲಾ ಅವಕಾಶ ಮಾಡಿ ಕೊಟ್ಟಿದೆ. ಹುಡುಗಾಟ ಆಗಿ ಬಿಟ್ಟಿದೆ. ನಾಳೆ ಇನ್ನೊಬ್ಬರು ಇನ್ನೊಂದು ಹೇಳುತ್ತಾರೆ. ಜವಾಬ್ದಾರಿಯುತ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಯಾರನ್ನೋ ಓಲೈಸಲು ಈ ರೀತಿ ಮಾಡ್ತಿದ್ದಾರೆ ಅಂತ ಆರೋಪ ಇದೆ ಎಂದು ದೂರಿದರು.

ಮುಸುಕುದಾರಿ ಯಾರು?
ಅನಾಮಿಕ ಮನುಷ್ಯ ಮುಸುಕುದಾರಿ ಯಾರು? ಏನು ಎಂಬುದನ್ನು ಬಹಿರಂಗ ಪಡಿಸಲಿ. ಕೂಡಲೇ ಸರ್ಕಾರ ಈ ಕೆಲಸ ಮಾಡಬೇಕು. ಇಲ್ಲದಿದ್ದರೆ ಧಾರ್ಮಿಕ ಕ್ಷೇತ್ರದ ಅಪಪ್ರಚಾರಕ್ಕೆ ಸರ್ಕಾರವೇ ಕುಮ್ಮಕ್ಕು ಕೊಟ್ಟಿದೆ ಅಂತ ಪುರಾವೆ ಆಗುತ್ತೆ ಎಂದ ಅವರು, ನಾನು ಮಂಪರು ಪರೀಕ್ಷೆಗೆ ಸಿದ್ಧನಿದ್ದೇನೆ ಅಂತ ಮುಸುಕುದಾರಿ ಮೊದಲೇ ಹೇಳಿದ್ದಾರೆ. ಅವನೇ ಸಿದ್ದ ಇದ್ದಾಗ ಮಂಪರು ಪರೀಕ್ಷೆ ಮಾಡಲು ಏನು ತೊಂದರೆ ಎಂದರು.

ಸೋನಿಯಾ ಗಾಂಧಿ ಉತ್ತರಿಸಲಿ
ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರ ಸರ್ಕಾರದ ವಿರುದ್ಧ ಹರ್ ಬೂತ್, ಮತ್ ಲೂಟ್ ಹೋರಾಟ ವಿಚಾರ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರು ಲೂಟಿ ಮಾಡಿದ್ದಾರೆ ಸ್ಪಷ್ಟವಾಗಿದೆ. ಮೊದಲು ಸೋನಿಯಾ ಗಾಂಧಿ ಈ ಬಗ್ಗೆ ಉತ್ತರ ಕೊಡಲಿ ಎಂದು ಚಾಟಿ ಬೀಸಿದರು.

ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳವು ಆರೋಪಕ್ಕೆ ಪ್ರತಿಕ್ರಿಯಿಸಿ, ಕೆ.ಎನ್.ರಾಜಣ್ಣ ಸತ್ಯ ಹೇಳಿ ಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸುಳ್ಳನ್ನು ನೂರ ಬಾರಿ ಹೇಳಿ ಸತ್ಯ ಅಂತ ಸಾಬೀತು ಮಾಡುವ ಅವರ ನಾಯಕ ರಾಹುಲ್ ಗಾಂಧಿ. ದ್ವಂದ್ವದಲ್ಲಿ ರಾಹುಲ್ ಗಾಂಧಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles