ಆ.23 ರಂದು ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್

ಬೆಂಗಳೂರು,ಆ.20; ನಗರ ಪೊಲೀಸರು ಮತ್ತು ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್  ಸಹಯೋಗದಲ್ಲಿ ಆ,23 ರಂದು ನಗರದ ಶಂಕರ್‌ ನಾಗ್‌ ವೃತ್ತದ ಡೋಂಕಾಳ ಮೈದಾನದಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ಅಧಿಕೃತ ಪೋಸ್ಟರ್ ಹಾಗೂ ಟಿ-ಶರ್ಟ್ ಬಿಡುಗಡೆ ಮಾಡಿ ಮಾತನಾಡಿ, ವಿಶೇಷವಾಗಿ ಯುವಜನತೆಯಲ್ಲಿ ಮಾದಕವಸ್ತು ದುರ್ಬಳಕೆಯ ಅಪಾಯಗಳು ಮತ್ತು ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಮಾದಕವಸ್ತುಗಳ ದಾಸರಾಗಿರುವ  ವ್ಯಕ್ತಿಗಳು, ಕುಟುಂಬಗಳು ಮತ್ತು ಸಮುದಾಯಗಳ ಮೇಲೆ ಬೀರುವ ಹಾನಿಕಾರಕ ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಬಲವಾದ ಮತ್ತು ಏಕಮತದ ಸಂದೇಶ ಹರಡುವ ಉದ್ದೇಶ ಹೊಂದಲಾಗಿದೆ ಎಂದರು.
ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಾಣದತ್ತ ಬದ್ಧತೆಯನ್ನು ಉತ್ತೇಜಿಸುವತ್ತ ಗುರಿಯಿಟ್ಟಿದೆ. ಮಹತ್ತರವಾದ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ವಾಕಥಾನ್‌ ಗೆ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ. ಜಗಲಸರ್,  ಸಂಸದರಾದ ಡಾ. ಸಿ. ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಶಾಸಕರಾದ ಎಲ್. ಎ. ರವಿ ಸುಬ್ರಮಣ್ಯ, ಟಿ.ತಿಮ್ಮೇಗೌಡ ರವರು ಅಧ್ಯಕ್ಷರು ಜೆಡಿಎಸ್ ಬಸವನಗುಡಿ ವಿಧಾನಸಭಾ ಕ್ಷೇತ್ರ, ಸಂಗಾತಿ ವೆಂಕಟೇಶ್ ಮಾಜಿ ಮಹಾನಗರ ಪಾಲಿಕೆ ಸದಸ್ಯರುಚಾಲನೆ ನೀಡಲಿದ್ದಾರೆ ಎಂದರು.
ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಬೆಂಗಳೂರು ಜಿಲ್ಲಾ ರಾಜ್ಯಪಾಲರಾದ ಸತ್ಯವತಿ ಬಸವರಾಜ್, ಅಲಯನ್ಸ್ ಕ್ಲಬ್ ಆಫ್ ಬೆಂಗಳೂರು ಕಿಂಗ್ಸ್ ಅಧ್ಯಕ್ಷ ವಿಜಯೇಂದ್ರ,  ಕಾರ್ಯದರ್ಶಿ ಧೀರಜ್, ಖಜಾಂಚಿ ನಿಶಾಂತ್ ಹಾಗೂ ವೃದ್ಧಿ ವೆಂಚರ್ಸ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಗೌಡ ನೇತೃತ್ವದಲ್ಲಿ ಅಭಿಯಾನ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಸೂರ್ಯಪ್ರಸಾದ್ ಎಸ್, ಹನುಮಂತನಗರ ಪೊಲೀಸ್ ಠಾಣೆಯ ಸತೀಶ್ ಕುಮಾರ್,  ಗಿರಿನಗರ ಪೊಲೀಸ್ ಠಾಣೆಯ ಗಿರೀಶ್ ನಾಯಕ್ ರವರು, ಚೆನ್ನಮ್ಮಕೆರೆ ಅಚುಕಟ್ಟು ಪೊಲೀಸ್ ಠಾಣೆಯ ವಿನಯ್ ಎಚ್.ಎನ್, ಕೆ.ಜಿ.ನಗರ ಪೊಲೀಸ್ ಠಾಣೆ, ಜಿ. ಉದಯ್ ರವಿ, ಶಂಕರಪುರ ಪೊಲೀಸ್ ಠಾಣೆಯ ಧರ್ಮೇಂದ್ರ ಟಿ.ಎಂ, ವಿ. ವಿ. ಪುರಂ ಪೊಲೀಸ್ ಠಾಣೆಯ ಲಿಂಗಣ್ಣ ಗೌಡ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles