ಶ್ರೀ ವಾಸವಿ ಯುವಜನ ಸಂಘದಿಂದ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳ ವಿತರಣೆ

ಬೆಂಗಳೂರು,ಆ.24; ಪರಿಸರ ಸ್ನೇಹಿ ಹಬ್ಬ ಆಚರಿಸುವ ರಾಜ್ಯ ಸರ್ಕಾರದ ಕೆರೆಗೆ ಓಗೊಟ್ಟಿರುವ ಶ್ರೀ ವಾಸವಿ ಯುವಜನ ಸಂಘ ಜನ ಸಾಮಾನ್ಯರಿಗೆ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ವಿತರಿಸಿತು. “ಪ್ರಕೃತಿಯನ್ನು ಉಳಿಸಿ – ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಿ” ಎಂಬ ಘೋಷವಾಕ್ಯ ಮೊಳಗಿಸಿದೆ. ನಗರದ ಸಸ್ಯಕಾಶಿ ಲಾಲ್ಬಾಗ್ ಪಶ್ಚಿಮ ದ್ವಾರದ ಮುಂದೆ ಶ್ರೀ ವಾಸವಿ ಯುವಜನ ಸಂಘ ಸದಸ್ಯರು 9ನೇ ವರ್ಷವೂ ಮಣ್ಣಿನ ಮೂರ್ತಿಗಳನ್ನು ಗಣಪತಿಯನ್ನು ವಿತರಿಸಿದರು.

ಬೆಳ್ಳಂಬೆಳಿಗ್ಗೆ ವಾಯು ವಿಹಾರಕ್ಕೆ ಬಂದವರಿಗೆ 500 ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿತರಿಸಿದರು. ಪ್ರಕೃತಿಗೆ ಹಾನಿಕಾರಕವಾದ ರಾಸಾಯನಿಕ ಬಣ್ಣಗಳಿಂದ ಮಾಡಿದ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಖರೀದಿಯನ್ನು ನಿಲ್ಲಿಸಬೇಕು. ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿ ಮಣ್ಣಿನಿಂದ ಮಾಡಿದ ದೀಪಗಳನ್ನೇ ಬಳಸಬೇಕು ಎಂದು ಜನ ಸಾಮಾನ್ಯರಿಗೆ ತಿಳಿವಳಿಕೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಅವರು ರಚಿಸಿರುವ (ಅವರ 50ನೇ ಪುಸ್ತಕ) “ಮೋಸ್ಟ್ ಅಡೋರಬಲ್ ಮೋದಿಜಿ” ಎಂಬ ಶೀರ್ಷಿಕೆಯ ಪುಸ್ತಕವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ನಂತರ ಮಾತನಾಡಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ, ಪರಿಸರ ಸಂರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ನಾವೆಲ್ಲರೂ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿಸಬೇಕು ವಿವರಿಸಿದರು

ಈ ಸಂದರ್ಭದಲ್ಲಿ ಶ್ರೀ ವಾಸವಿ ಯುವಜನ ಸಂಘದ ಪದಾಧಿಕಾರಿಗಳಾದ ದ್ವಾರಕನಾಥ್, ಶಂಕರ್, ಶ್ರೀಧರ್, ಸಂಘದ ಅಧ್ಯಕ್ಷ ಗುರುಪ್ರಸಾದ್, ಮಾಜಿ ಅಧ್ಯಕ್ಷ ಮುರಳಿ ಕೃಷ್ಣ, ಪದಾಧಿಕಾರಿಗಳಾದ ಮಹೇಂದ್ರ ಕುಮಾರ್, ಬಾಲಾಜಿ ಸೇರಿ 40 ಕ್ಕೂ ಅಧಿಕ ಮಂದಿ ಜನ ಜಾಗೃತಿಯಲ್ಲಿ ಪಾಲ್ಗೊಂಡರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles