ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ; 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕೆಂಗೇರಿ ಪೊಲೀಸ್ ಠಾಣಾ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ಪರ‍್ಯಾದುದಾರರು ದಿನಾಂಕ:08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪರ‍್ಯಾದುದಾರರು ವರಮಹಾಲಕ್ಷಿ ಹಬ್ಬದ ಪ್ರಯುಕ್ತ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು, ಮನೆಯ ಮುಂಭಾಗಿಲಿಗೆ ಬೀಗವನ್ನು ಹಾಕಿಕೊಂಡು ಅಂಗಡಿಗೆ ಹೋಗಿರುತ್ತಾರೆ. ಅಂಗಡಿಯಿAದ ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಅಪರಿಚಿತ ವ್ಯಕ್ತಿಗಳು ಮನೆಯ ಡೋರ್ ಲಾಕ್ ಮುರಿದು, ಒಳ ಪ್ರವೇಶಿಸಿ ಕೊಠಡಿಯಲ್ಲಿದ್ದ ಬೀರುವಿನ ಲಾಕ್ ಮುರಿದು ಬೀರುವಿನಲ್ಲಿಟ್ಟಿದ್ದ 55 ಗ್ರಾಂ ಚಿನ್ನಾಭರಣಗಳನ್ನು ಹಾಗೂ ₹ 6,000/- ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:18/08/2025 ರಂದು ತಮಿಳುನಾಡಿದ ಉಕ್ಕಡಂನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.

ದಿನಾಂಕ:19/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣವಲ್ಲದೆ ಬಂಡೆಪಾಳ್ಯ ಮತ್ತು ರಾಜಾಜಿನಗರದ ಮತ್ತೆರಡು ಮನೆಗಳಲ್ಲಿ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಹಾಗೂ ಕಳವು ಮಾಡಿದ ಚಿನ್ನಾಭರಣಗಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ದಿನಾಂಕ:23/08/2025 ರಂದು 100 ಗ್ರಾಂ ಚಿನ್ನಾಭರಣವನ್ನು ಜ್ಯೂವೆಲರಿ ಅಂಗಡಿಯಿAದ ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ ₹ 10,00,000/-(ಹತ್ತು ಲಕ್ಷ ರೂಪಾಯಿ).

ಈ ಆರೋಪಿಯ ಬಂಧನದಿ0ದ, 1) ಕೆಂಗೇರಿ ಪೊಲೀಸ್ ಠಾಣೆಯ-02 ಮನೆ ಕನ್ನ ಕಳವು ಪ್ರಕರಣಗಳು, 2) ರಾಜಾಜಿನಗರ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ, 3) ಬಂಡೇಪಾಳ್ಯ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ ಸೇರಿದಂತೆ ಒಟ್ಟು 4 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:25/08/2025 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಈ ಪ್ರಕರಣವನ್ನು ಬೆಂಗಳೂರು ನಗರ, ನೈಋತ್ಯ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀಮತಿ ಅನಿತಾ ಬಿ ಹದ್ದಣವರ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಹಾಗೂ ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಬಸವರಾಜ ಎ ತೇಲಿ ರವರ ನೇತೃತ್ವದಲ್ಲಿ, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಗದೀಶ್ ಎನ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles