GBA:  ಮುಖ್ಯ ಆರೋಗ್ಯಾಧಿಕಾರಿಯಾಗಿ ಡಾ||ನಿರ್ಮಲ ಬುಗ್ಗಿರವರ ನೇಮಕಕ್ಕೆ ಹೆಚ್ಚಿದ ಒತ್ತಾಯ

BENGALURU : ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority)-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಮುಖ್ಯ ಆಯುಕ್ತರಿಗೆ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಡಾ|| ನಿರ್ಮಲ ಬುಗ್ಗಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಹುದ್ದೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೇಂದ್ರ ಕಛೇರಿಯಲ್ಲಿ ಮುಂದುವರಿಸಲು ಮನವಿ ಸಲ್ಲಿಸಿದರು.
ಡಾ|| ನಿರ್ಮಲ ಬುಗ್ಗಿ (DR.NIRMALA BUGGI)  ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ರವರ ಹುದ್ದೆಯು 1976ರ ವೃಂದ ಮತ್ತು ನೇಮಕಾತಿ ನಿಯಮಾವಳಿ ಮತ್ತು 2020 ರ ವೃಂದ ಮತ್ತು ನೇಮಕಾತಿ ನಿಯಮಾವಳಿಯಲ್ಲಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಹುದ್ದೆಯನ್ನು ಮಂಜೂರಾತಿ ಆಗಿರುತ್ತದೆ. ಆದರೆ ಗ್ರೇಟರ್ ಬೆಂಗಳೂರು (GBA) ಆಡಳಿತ ಅಧಿನಿಯಮ 2024ರಲ್ಲಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಹುದ್ದೆಯನ್ನು ರದ್ದುಪಡಿಸಲಾಗಿರುತ್ತದೆ.
ಆದ್ದರಿಂದ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024 ರಂತೆ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಹುದ್ದೆಯನ್ನು ಮಂಜೂರು ಮಾಡುವುದು ಅತ್ಯಂತ ಅವಶ್ಯಕತೆವಿರುತ್ತದೆ. ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್‌) ವ್ಯಾಪ್ತಿಯಲ್ಲಿ ಬೆಂಗಳೂರು ನಗರದಲ್ಲಿರುವ ಹೆರಿಗೆ ಆಸ್ಪತ್ರೆಗಳು, ರೆಫರಲ್ ಆಸ್ಪತ್ರೆಗಳು, ಹಾಗೂ ನಮ್ಮ ಕ್ಲಿನಿಕ್‌ಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇರುತ್ತದೆ.
ಅತ್ಯಂತ ಗಂಭೀರವಾಗಿ ಪರಿಗಣಿಸ ಬೇಕಾದ ಪ್ರಮುಖ ಅಂಶಗಳು :- ಡಾ|| ನಿರ್ಮಲ ಬುಗ್ಗಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ರವರ ಅಧಿನದಲ್ಲಿ ಮ್ಯಾನೇಜಡ್ ಹೆಲ್‌ಕೇರ್ ಕಛೇರಿಯು ಇದ್ದು, ಪಾಲಿಕೆ ಅಧಿಕಾರಿ ನೌಕರರು ಮತ್ತು ಅರ್ಹ ಕುಟುಂಬ ಸದಸ್ಯರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ದಾಖಲಾಗಿ ಕಾಯಿಲೆ/ಮಾರಣಾಂತಿಕ ಕಾಯಿಲೆ ಬಂದಂತಹ ಸಂದರ್ಭದಲ್ಲಿ ಅಧಿಕಾರಿ ನೌಕರರು ಮ್ಯಾನೇಜಡ್ ಹೆಲ್ತ್ ಕೇರ್ ರವರ ಮಾರ್ಗದರ್ಶನದಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯಲಾಗುತ್ತಿರುತ್ತದೆ..
ಮುಂದುವರೆದಂತೆ ಪಾಲಿಕೆ ಅಧಿಕಾರಿ ನೌಕರರು 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಾಗಿರುತ್ತಾರೆ. ಆದರೆ ಕೆಲಸವನ್ನು ಪೂರ್ವ ಮಹಾನಗರ ಪಾಲಿಕೆ, ದಕ್ಷಿಣ ಮಹಾನಗರ ಪಾಲಿಕೆ, ಪಶ್ಚಿಮ ಮಹಾನಗರ ಪಾಲಿಕೆ, ಉತ್ತರ ಮಹಾನಗರ ಪಾಲಿಕೆ, ಕೇಂದ್ರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುತ್ತಾರೆ. ತುರ್ತಾಗಿ ಆರೋಗ್ಯ ಸಮಸ್ಯೆ ಉಂಟಾದ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯ ಬೇಕಾಗಿರುತ್ತದೆ. ಪಾಲಿಕೆ ಅಧಿಕಾರಿ/ನೌಕರರು ಮತ್ತು ಅರ್ಹ ಕುಟುಂಬ ಸದಸ್ಯರು ಕಾಯಿಲೆ/ಮಾರಣಾಂತಿಕ ಕಾಯಿಲೆ ಬಂದಂತಹ ಸಂದರ್ಭದಲ್ಲಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) / ಮ್ಯಾನೇಜಡ್ ಹೆಲ್ತ್‌ಕೇರ್ ರವರ ಮಾರ್ಗದರ್ಶನ ಪಡೆದು ಚಿಕಿತ್ಸೆಯನ್ನು ಪಡೆಯುವುದು ಅತ್ಯಂತ ಅವಶ್ಯಕತೆ ಇರುತ್ತದೆ.
ಆದ್ದರಿಂದ ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ) ಹುದ್ದೆಗಿಂತ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ಹುದ್ದೆಯು ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಕ್ಕೆ ಅತ್ಯಂತ ಅವಶ್ಯಕತೆ ಇರುವುದರಿಂದ, ಹಾಗೂ ಡಾ|| ನಿರ್ಮಲ ಬುಗ್ಗಿ ಮುಖ್ಯ ಆರೋಗ್ಯಾಧಿಕಾರಿ (ಕ್ಲಿನಿಕಲ್) ರವರು ಹಿರಿಯ/ಅನುಭವಿ ಅಧಿಕಾರಿಯಾಗಿದ್ದು ಸೇವಾ ಹಿರಿತನವನ್ನು ಹೊಂದಿರುವುದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕೇಂದ್ರ ಕಛೇರಿಯಲ್ಲಿ ಬೆಂಗಳೂರಿನ ನಾಗರೀಕರು/ಪಾಲಿಕೆ ಅಧಿಕಾರಿ ನೌಕರರ ಆರೋಗ್ಯದ ಹಿತ ದೃಷ್ಟಿಯಿಂದ ಮುಂದುವರಿಸಿಕೊಂಡು ಹೋಗಲು ಈ ಮೂಲಕ ಕೋರಲಾಗಿದೆ. ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ವೃಂದ ಮತ್ತು ನೇಮಕಾತಿ ನಿಯಮಾವಳಿಯನ್ನು ಕೂಡಲೇ ತಿದ್ದುಪಡಿಮಾಡಿ ನಂತರ ಅಧಿಕಾರಿ/ನೌಕರರನ್ನು ನಿಯಮಾನುಸಾರ ವರ್ಗಾವಣೆ / ನಿಯೋಜಿಸಲು ಕ್ರಮವಹಿಸಲು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಾ, ಹಾಗೂ ಈಗಾಗಲೇ ಅಧಿಕಾರಿ ನೌಕರರು ಗೊಂದಲ/ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವುದರಿಂದ ಕೂಡಲೇ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಅಧಿಕಾರಿ/ನೌಕರರ ಹಿತ ಕಾಯ್ದುಕೊಳ್ಳಲು ಈ ಮೂಲಕ ಕೋರಲಾಯಿತು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles