Banjara Film Board: ಬಂಜಾರ ಚಲನಚಿತ್ರ ಮಂಡಳಿ ಉದ್ಘಾಟನೆ, ಸೂಕ್ತ ಪ್ರೋತ್ಸಾಹ ನೀಡಲು ಸಿಎಂ ಸಿದ್ದರಾಮಯ್ಯಗೆ ಮನವಿ

ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಯು (Karnataka Banjara Film Board) ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿತು. ಬೆಂಗಳೂರಿನಲ್ಲಿ ಭಾನುವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಮಂಡಳಿಯು ಉದ್ಘಾಟನೆಗೊಂಡಿತು. ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ (Karnataka Banjara Cultural & Language Academy) ಅಧ್ಯಕ್ಷರಾದ ಡಾ. ಎ. ಆರ್. ಗೋವಿಂದಸ್ವಾಮಿ (Dr. Govinda Swamy AR) ಅವರು ಮಂಡಳಿಯನ್ನು ಉದ್ಘಾಟಿಸಿದರು. ಮಂಡಳಿಯ ಉದ್ಘಾಟನಾ ಸಮಾರಂಭದ ಅಂಗವಾಗಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಮಾತನಾಡಿದ ಗೋವಿಂದಸ್ವಾಮಿ ಅವರು ಹೊಸದಾಗಿ ಜಾರಿಗೆ ಬಂದಿರುವ ಕರ್ನಾಟಕ ಬಂಜಾರ ಚಲನಚಿತ್ರ ಮಂಡಳಿಗೆ ಶುಭ ಕೋರಿದರು. ಭಾರತೀಯ ಕರ್ನಾಟಕ ಬಂಜಾರ ಸಿನಿಮಾ ಆರಂಭವಾಗಿ ರಜತ ಮಹೋತ್ಸವ ಕಾಣುತ್ತಿದೆ. ಬಂಜಾರ ಸಾಹಿತ್ಯ ಹಾಗೂ ಸಂಸ್ಕೃತಿ ಬೆಳವಣಿಗೆಗೆ ಅದ್ಭುತವಾದ ಅವಕಾಶವಿದ್ದು ಎಲ್ಲಾ ಕಲಾವಿದರು, ತಂತರಜ್ಞರು ಈ ಅವಕಾಶ ಉಪಯೋಗಿಸಿಕೊಂಡು ಸಾಂಸ್ಕೃತಿಕ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.

ಇಂದಿನ ಡಿಜಿಟಲ್‌ ಯುಗದಲ್ಲಿ ಹಾಗೂ ಕೃತಿಕ ಬುದ್ಧಿಮತ್ತೆ ಸಮ್ಮುಖದಲ್ಲಿ ನಾವಿದ್ದು, ಇದನ್ನು ನಾವು ಸಾಮಾಜಿಕ ಹಾಗೂ ಜನಪರ ಮಾಧ್ಯಮದ ಯುಗವಾಗಿಸಬೇಕಾದ ಅನಿವಾರ್ಯವಿದೆ. ಬಂಜಾರ ಅಕಾಡೆಮಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಾಗಾರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಮುಂದೆ ಆಯೋಜಿಸಲಿದೆ. ಬಂಜಾರ ಸಮುದಾಯದವರು (Banjara community) ಈ ಅವಕಾಶವನ್ನು ಬಳಸಿಕೊಂಡು ಸಾಂಸ್ಕೃತಿಕವಾಗಿ ಹಾಗೂ ಆರ್ಥಿಕವಾಗಿ ಪ್ರಬಲವಾಗಿ ಬೆಳೆಯಬೇಕು ಎಂದು ಗೋವಿಂದಸ್ವಾಮಿ ಆಶಿಸಿದರು.

ಬಂಜಾರ ಸಿನಿಮಾ ಹಾಗೂ ತಂತ್ರಜ್ಞರಿಗೆ ಪ್ರತ್ಯೇಕ ಸಬ್ಸಿಡಿ, ರಾಜ್ಯ ಪ್ರಶಸ್ತಿ ಹಾಗು ಬಂಜಾರ ಚಲನಚಿತ್ರಗಳ ಉತ್ಸವಕ್ಕೆ ಸೂಕ್ತ ಪ್ರಮಾಣದಲ್ಲಿ ಬಜೆಟ್ ಒದಗಿಸಿ, ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋರುವುದಾಗಿ ಗೋವಿಂದಸ್ವಾಮಿ ತಿಳಿಸಿದರು.

ಮಂಡಳಿಯ ಅಧ್ಯಕ್ಷರಾದ ಜೆ ಮಂಜುನಾಥ್, ಎನ್ ಅನಂತ ನಾಯ್ಕ್ ಪದಾಧಿಕಾರಿಗಳಾದ ಡಿ ಆರ್ ಗಿರೀಶ್, ವಿ ಚಂದ್ರಕಾಂತ್, ಆರ್ ಎನ್ ಶಶಿಕುಮಾರ್, ಎಸ್ ರಂಗನಾಥ್ ನಾಯ್ಕ್, ಶಶಿಕುಮಾರ್, ಬಂಜಾರ ನಟಿ ಅನು, ಕರಿಷ್ಮಾ, ಭೈರವಿ ಮತ್ತಿತತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles