ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ ಆಕ್ಷೇಪ

ಬೆಂಗಳೂರು: ರಸ್ತೆ ಗುಂಡಿಗಳನ್ನು (Potholes) ಮುಚ್ಚುವ ವಿಷಯದಲ್ಲಿ ಸರಕಾರ ಹಲವಾರು ಡೆಡ್‍ಲೈನ್ ಕೊಟ್ಟಿದೆ. ಡೆಡ್‍ಲೈನ್ (Deadline) ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ (Shobha Karandlaje) ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬೆಂಗಳೂರಿನ ರಸ್ತೆಗಳಲ್ಲಿ ದ್ವಿಚಕ್ರ ವಾಹನದಿಂದ ಬಿದ್ದು ಆರಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವಿಗೆ ಯಾರು ಹೊಣೆ? ಮೃತರ ಕುಟುಂಬಕ್ಕೆ ಯಾರು ಜವಾಬ್ದಾರರು? ಎಂದ ಅವರು, ಇದರಲ್ಲಿ ಯಾರಿಗೂ ಜವಾಬ್ದಾರಿ ಇಲ್ಲ ಎಂದು ಟೀಕಿಸಿದರು.
ರಾಜ್ಯ ಸರಕಾರ, ಸಚಿವರು ಅತ್ಯಂತ ದುವ್ರ್ಯವಹಾರ ಮಾಡುತ್ತಿದ್ದಾರೆ. ಜನರ ಮೂಲಸೌಕರ್ಯಗಳ ವಿಚಾರದಲ್ಲಿ ಅವರಿಗೆ ಗೌರವ ಇಲ್ಲ; ಕೇವಲ ಹಣ ಮಾಡುವುದು, ಪ್ರಚಾರ ಪಡೆಯುವುದು, ಕುರ್ಚಿ ಹಿಡಿಯುವುದರ ಬಗ್ಗೆ ಚರ್ಚೆ ಆಗುತ್ತಿದೆ ಎಂದು ದೂರಿದರು.
ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ; ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿಲ್ಲ. ಬೆಂಗಳೂರಿನ ಗುಂಡಿಗಳಿಂದ ಇಲ್ಲಿನ ನಾಗರಿಕರು, ಉದ್ಯೋಗಿಗಳು, ಉದ್ಯಮಿಗಳು – ಇವರೆಲ್ಲ ಬೇಸತ್ತಿದ್ದಾರೆ. ಇಲ್ಲಿ ಇರಬೇಕೇ ಬೇಡವೇ ಎಂದು ಉದ್ಯಮಿಗಳು ಯೋಚಿಸುವಂತಾಗಿದೆ. ಉದ್ಯಾನಗಳ ನಗರ ಬೆಂಗಳೂರು ಈಗ ಗುಂಡಿಗಳ ಬೆಂಗಳೂರಾಗಿದೆ ಎಂದು ಟೀಕಿಸಿದರು.
ಎಲ್ಲಿ ಕಸ ಹಾಕುತ್ತಾರೋ ಅಂಥವರ ಮನೆ ಮುಂದೆ ಜಿಬಿಎ ವತಿಯಿಂದ ಕಸ ಸುರಿಯುವ, ದಂಡ ಹಾಕುವ ಕೆಲಸ ನಡೆದಿದೆ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಯಾರು ಪರಿಣಾಮಕಾರಿಯಾಗಿ ಕೆಲಸ ಮಾಡುವುದಿಲ್ಲವೋ ಅಂಥವರು ಇಂಥ ದುಷ್ಕøತ್ಯ ಮಾಡುತ್ತಾರೆ. ಕಸ ಎತ್ತುವುದು, ವಿಂಗಡಿಸುವುದು, ಅದನ್ನು ಸಂಸ್ಕರಿಸುವ ಕೆಲಸದ ವಿಚಾರದಲ್ಲಿ ಯಾವ ಲಾಬಿ ನಡೆಯುತ್ತಿದೆ ಎಂದು ಗೊತ್ತಿಲ್ಲ ಎಂದು ಆಕ್ಷೇಪಿಸಿದರು.
ಇದರಿಂದ ಬೆಂಗಳೂರಿನ ಎಲ್ಲ ರಸ್ತೆಗಳಲ್ಲಿ ಕಸ ಬೀಳುತ್ತಿದೆ. ಕಸ ಸುರಿಯುವುದು, ದಂಡ ಹಾಕುವುದು ಪರಿಹಾರವೇ? ಎಂದು ಕೇಳಿದರು. ಕಸದ ಸಮಸ್ಯೆ ಬಗೆಹರಿಸಲು ಬೆಂಗಳೂರಿನಲ್ಲಿ ಸಚಿವರು, ಅಧಿಕಾರಿಗಳು ಯೋಚಿಸುತ್ತಿಲ್ಲ ಎಂದು ನುಡಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆಂಬುದು ನಮ್ಮ ಪ್ರಶ್ನೆಯಲ್ಲ; ಕರ್ನಾಟಕದ ಅಭಿವೃದ್ಧಿ ಆಗಬೇಕು. ಗುಂಡಿಗಳನ್ನು ಮುಚ್ಚಬೇಕಿದೆ. ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿದವರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಹೆಣ್ಮಕ್ಕಳ ಮೇಲಿನ ಅತ್ಯಾಚಾರ, ಅಪಹರಣದ ವಿರುದ್ಧ ಕ್ರಮ ಅಗತ್ಯವಿದೆ. ನಾಪತ್ತೆ ಆಗುವವರಿಗೆ ರಕ್ಷಣೆ ಸಿಗಬೇಕು. ನೂರಾರು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದರ ಬಗ್ಗೆ ಗಮನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles