ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಪಂಕಜ್ ಕುಮಾರ್ ಪಾಂಡೆ

*ಬೆಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಷನ್ (BANGALORE MANAGEMENT ASSOCIATION) ಅಧ್ಯಕ್ಷರಾಗಿ ಕೆಪಿಟಿಸಿಎಲ್  (KPTCL MD) ಎಂಡಿ ಪಂಕಜ್ ಕುಮಾರ್ ಪಾಂಡೆ (PANKAJ KUMAR PANDEY) ಅವಿರೋಧ ಆಯ್ಕೆ: ಉಪಾಧ್ಯಕ್ಷರಾಗಿ ಬೆಸ್ಕಾಂ ಎಂಡಿ (BESCOM MD)  ಡಾ.ಶಿವಶಂಕರ್ (DR. SHIVASHANKAR ) ಬಿಎಂಎನಲ್ಲಿ ಮೂವರು ಐಎಎಸ್ ಅಧಿಕಾರಿಗಳು ಇದೀಗ ಪದಾಧಿಕಾರಿಗಳು* 

ಬೆಂಗಳೂರು,ನ.3; ಬರುವ 2025 – 26 ರ ಸಾಲಿಗೆ ಬೆಂಗಳೂರು ಮ್ಯಾನೆಜ್ಮೆಂಟ್ ಅಸೋಸಿಯೇಷನ್ – ಬಿಎಂಎ ಅಧ್ಯಕ್ಷರಾಗಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ [ಐಎಎಸ್] ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಸರ್ಕಲ್ ನ ಬೆಸ್ಕಾಂ ಕಾರ್ಪೋರೆಟ್ ಕಚೇರಿಯ ಬೆಳಕು ಭವನದಲ್ಲಿ ಆಯೋಜಿಸಲಾದ ಸಾಮಾನ್ಯ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯದ ಅತ್ಯಂತ ಪ್ರತಿಷ್ಟಿತ ಸಂಘಟನೆಯಾದ ಬಿಎಂಎ ಉಪಾಧ್ಯಕ್ಷರಾಗಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ್ [ಐಎಎಸ್], ಉದ್ಯಮಿ ವಿ. ಶ್ರೀನಿವಾಸ ಮೂರ್ತಿ ಉಪಾಧ್ಯಕ್ಷರಾಗಿ, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಶ [ಐಎಎಸ್] ಗೌರವ ಕಾರ್ಯದರ್ಶಿ ಹಾಗೂ ಬಿಎಂಆರ್ ಸಿಎಲ್ ಸಲಹೆಗಾರರಾದ ವಸಂತ್ ರಾವ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಸರ್ವ ಸದಸ್ಯರ ಸಭೆಯಲ್ಲಿ ಮೂವರು ಹಿರಿಯ ಐಎಎಸ್ ಅಧಿಕಾರಿಗಳು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ಬಿಎಂಎ ಇತಿಹಾಸದಲ್ಲಿ ಸಾಕಷ್ಟು ಮಂದಿ ಐಎಎಸ್ ಅಧಿಕಾರಿಗಳು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಇಂದು ಪಂಕಜ್ ಕುಮಾರ್ ಪಾಂಡೆ ಅವರು ಸಹ ಈ ಸಾಲಿಗೆ ಸೇರ್ಪಡೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷರಾದ ಪ್ಲೈಟ್ ಲೆಪ್ಟಿನೆಂಟ್ ಕೆ.ಪಿ. ನಾಗೇಶ್ ಅವರಿಂದ ಪಾಂಡೆ ಅವರು ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಪಂಕಜ್ ಕುಮಾರ್ ಪಾಂಡೆ, ಬೆಂಗಳೂರು ಮ್ಯಾನೆಜ್ಮೆಂಟ್ ಅಸೋಸಿಯೇಷನ್ – ಬಿಎಂಎ ವೃತ್ತಿಪರ ಸಂಸ್ಥೆಯಾಗಿದ್ದು, 1953 ರಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಆಲ್ ಇಂಡಿಯಾ ಮ್ಯಾನೆಜ್ಮೆಂಟ್ ಅಸೋಸಿಯೇಷನ್ ನಿಂದ ಬಿಎಂಎ ಮಾನ್ಯತೆ ಪಡೆದಿದ್ದು, ಆಡಳಿತಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣಗಳು, ತರಬೇತಿ, ವೃತ್ತಿಪರರನ್ನು ಸಬಲೀಕರಣಗೊಳಿಸುವ, ಸ್ಫೂರ್ತಿದಾಯಕ ನಾಯಕತ್ವವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹೊಸ ತಂಡದೊಂದಿಗೆ ತಾವು ರಚನಾತ್ಮಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಬಿಎಂಎ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಿ. ಶ್ರೀನಿವಾಸ ಮೂರ್ತಿ ಮಾತನಾಡಿ, ನಮ್ಮ ಸಂಸ್ಥೆಗೆ ಅತ್ಯುತ್ತಮ ಪರಂಪರೆ ಇದ್ದು, ಇದು ಮತ್ತೆ ಭವ್ಯ ಇತಿಹಾಸವನ್ನು ಸೃಷ್ಟಿಸಲಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರು ಆಡಳಿತ ವ್ಯವಸ್ಥೆಯನ್ನು ಸಮರ್ಥವಾಗಿ ನಿರ್ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles