ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ ಸ್ಯಾಂಕಿ ಕೆರೆ ಬಳಿ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯಿಂದ 170 ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ಪ್ರಯುಕ್ತ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯ ಅಧ್ಯಕ್ಷರಾದ ಶಿಲ್ಪಿ ಜತ್ತಿ ಹಾಗೂ ಮಲ್ಲೇಶ್ವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಉಡುಗೂರೆ ನೀಡಿ ಸನ್ಮಾನಿಸಲಾಯಿತು. ಶಿಲ್ಪ ಜತ್ತಿ ಮಾತನಾಡಿ, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಸರಿಯಲ್ಲ. ಏಕಬಳಕೆ ಪ್ಲಾಸ್ಟಿಕ್ ಅಪಾಯಕಾರಿಯಾಗಿದ್ದು, ಇಂತಹ ಪ್ಲಾಸ್ಟಿಕ್ ನಿಂದ ದೂರ ಇರುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ಉಳಿಯಬೇಕು, ಜೀವಜಲದ ಮಟ್ಟದ ಹೆಚ್ಚಾಗಬೇಕು. ನಗರದಲ್ಲಿ ಮರಗಳು ಮಳೆಯಿಂದ ಧರೆಗೆ ಉರುಳುತ್ತಿದ್ದು, ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಹುಣಿಸೆ, ಹೊಂಗೆ ಸಸಿಗಳನ್ನು ಬೆಳಸಿದರೆ ಮರಗಳು ಹೆಚ್ಚು ಬಾಳಿಕೆ ಬರುತ್ತವೆ ಎಂದರು. ಅನೂಪ್ ಅಯ್ಯಂಗಾರ್ ( Anup Iyengar )ಮಾತನಾಡಿ, ವೈದ್ಯ ಎಷ್ಟು ಮುಖ್ಯವೊ ಪೌರ ಕಾರ್ಮಿಕರು ಅಷ್ಟೆ ಮುಖ್ಯ. ಪೌರ ಕಾರ್ಮಿಕರು ನಮ್ಮ ಸ್ವಚ್ಚತಾ ರಾಯಭಾರಿಗಳು. ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಾರೆ. ನಗರದ ನಾಗರಿಕರು ಕಸ ವಿಂಗಡಣೆಗೆ ಆದ್ಯತೆ ನೀಡಬೇಕು. ಸ್ವಚ್ಚತೆ ಇದ್ದರೆ ಆರೋಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು ಎಂದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles