ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ ಸ್ಯಾಂಕಿ ಕೆರೆ ಬಳಿ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯಿಂದ 170 ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ಪ್ರಯುಕ್ತ ವಾಯ್ಸ್ ಆಫ್ ಸದಾಶಿವನಗರ ಸಾಮಾಜಿಕ ಸೇವಾ ಸಂಘಟನೆಯ ಅಧ್ಯಕ್ಷರಾದ ಶಿಲ್ಪಿ ಜತ್ತಿ ಹಾಗೂ ಮಲ್ಲೇಶ್ವರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೂಪ್ ಅಯ್ಯಂಗಾರ್ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಉಡುಗೂರೆ ನೀಡಿ ಸನ್ಮಾನಿಸಲಾಯಿತು. ಶಿಲ್ಪ ಜತ್ತಿ ಮಾತನಾಡಿ, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಸರಿಯಲ್ಲ. ಏಕಬಳಕೆ ಪ್ಲಾಸ್ಟಿಕ್ ಅಪಾಯಕಾರಿಯಾಗಿದ್ದು, ಇಂತಹ ಪ್ಲಾಸ್ಟಿಕ್ ನಿಂದ ದೂರ ಇರುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ಉಳಿಯಬೇಕು, ಜೀವಜಲದ ಮಟ್ಟದ ಹೆಚ್ಚಾಗಬೇಕು. ನಗರದಲ್ಲಿ ಮರಗಳು ಮಳೆಯಿಂದ ಧರೆಗೆ ಉರುಳುತ್ತಿದ್ದು, ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಹುಣಿಸೆ, ಹೊಂಗೆ ಸಸಿಗಳನ್ನು ಬೆಳಸಿದರೆ ಮರಗಳು ಹೆಚ್ಚು ಬಾಳಿಕೆ ಬರುತ್ತವೆ ಎಂದರು. ಅನೂಪ್ ಅಯ್ಯಂಗಾರ್ ( Anup Iyengar )ಮಾತನಾಡಿ, ವೈದ್ಯ ಎಷ್ಟು ಮುಖ್ಯವೊ ಪೌರ ಕಾರ್ಮಿಕರು ಅಷ್ಟೆ ಮುಖ್ಯ. ಪೌರ ಕಾರ್ಮಿಕರು ನಮ್ಮ ಸ್ವಚ್ಚತಾ ರಾಯಭಾರಿಗಳು. ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಾರೆ. ನಗರದ ನಾಗರಿಕರು ಕಸ ವಿಂಗಡಣೆಗೆ ಆದ್ಯತೆ ನೀಡಬೇಕು. ಸ್ವಚ್ಚತೆ ಇದ್ದರೆ ಆರೋಗ್ಯ ಎಂಬುದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು ಎಂದರು.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles