ಬದುಕಿನ ಸಾರ್ಥಕತೆ ಸಾರುವ “ಆತ್ಮೋದ್ಧಾರಕ್ಕೆ ಅಮೃತ ಮಾರ್ಗ ಭಾಗವತ” ಕೃತಿ ಲೋಕಾರ್ಪಣೆ

Bengaluru : ಶ್ರೀಮದ್ಭಾಗವತದ ತತ್ತ್ವಗಳ ಮೂಲಕ ಭಕ್ತಿ, ಜ್ಞಾನ ಹಾಗೂ ಜೀವನಮೌಲ್ಯಗಳನ್ನು ಸರಳ ಕನ್ನಡದಲ್ಲಿ ಪರಿಚಯಿಸುವ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ (Gururaj PoshettiHally) ಅವರ “ಆತ್ಮೋದ್ಧಾರಕ್ಕೆ ಅಮೃತ ಮಾರ್ಗ ಭಾಗವತ” ನೂತನ ಕೃತಿ (Souvenir) ಯನ್ನು ಎಂ. ಜೆ. ಚಂದ್ರಶೇಖರ್, ನಿವೃತ್ತ ದಾವಣಗೆರೆ ಕಾಟನ್ ಮಿಲ್ಸ್ ಮ್ಯಾನೇಜರ್ ಹಾಗೂ ಜಯಲಕ್ಷ್ಮಿ ಚಂದ್ರಶೇಖರ್, ಅಧ್ಯಕ್ಷರು, ರಾಜರಾಜೇಶ್ವರಿ ಸಂಘ, ದಾವಣಗೆರೆ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಾಭವ ಸಂವತ್ಸರದ ಅಧಿಕ ಜ್ಯೇಷ್ಠ – ಪುರುಷೋತ್ತಮ ಮಾಸದಲ್ಲಿ ಭಾಗವತದಂತಹ ಆಧ್ಯಾತ್ಮಿಕ ಗ್ರಂಥಗಳನ್ನು “ಗ್ರಂಥ ತಾಂಬೂಲ” ರೂಪದಲ್ಲಿ ವಿತರಿಸುವುದು ಪರಮ ಪುಣ್ಯಕರ ಕಾರ್ಯವೆಂದು ಪರಿಗಣಿಸಲ್ಪಟ್ಟಿದೆ ಎಂದು ಹೇಳಿದರು. “ಜ್ಞಾನ ದಾನವೇ ಶ್ರೇಷ್ಠ ದಾನ” ಎಂಬ ಶಾಶ್ವತ ಸಂದೇಶವನ್ನು ಈ ಕೃತಿ ಮತ್ತಷ್ಟು ಬಲಪಡಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾದ ಡಾ. ಎಂ. ಸಿ. ಶಶಿಕಾಂತ್, ಅಧ್ಯಕ್ಷರು, ತಾಲೂಕು ಬ್ರಾಹ್ಮಣ ಸಮಾಜ, ದಾವಣಗೆರೆ ಅವರು, ಭಾಗವತದ ತತ್ವಗಳು ಇಂದಿನ ಜೀವನಕ್ಕೆ ದಾರಿದೀಪವಾಗಿದ್ದು, ಆಧ್ಯಾತ್ಮಿಕ ಚಿಂತನೆಗೆ ಹೊಸ ಆಯಾಮ ನೀಡುತ್ತವೆ ಎಂದರು.
ಕೃತಿಗೆ ಬೆನ್ನುಡಿ ಬರೆದಿರುವ ಡಾ. ರೂಪ ಶ್ರೀ ಶಶಿಕಾಂತ್, ಕವಯತ್ರಿ ಹಾಗೂ ದಂತ ವೈದ್ಯರು, ಕೃತಿ ಪರಿಚಯ ಮಾಡಿ ಮಾತನಾಡುತ್ತ ಈ ಕೃತಿ ಭಕ್ತಿ, ಸಂಸ್ಕಾರ ಮತ್ತು ಜೀವನಮೌಲ್ಯಗಳನ್ನು ಮನಮುಟ್ಟುವ ಶೈಲಿಯಲ್ಲಿ ಪರಿಚಯಿಸುತ್ತಿದ್ದು, ಓದುಗರಲ್ಲಿ ಆಧ್ಯಾತ್ಮಿಕ ಚಿಂತನೆಗೆ ಪ್ರೇರಣೆ ನೀಡುತ್ತದೆ, ಶ್ರೀಮದ್ಭಾಗವತದ ಆಧ್ಯಾತ್ಮಿಕ ಸಾರವನ್ನು ಜೀವನಸ್ಪರ್ಶಿಯಾಗಿ ನಿರೂಪಿಸಿರುವ ಲೇಖಕರು, ಭಕ್ತಿ ಕೇವಲ ಆಚರಣೆಗಷ್ಟೇ ಸೀಮಿತವಲ್ಲ; ಅದು ಬದುಕನ್ನು ಪರಿವರ್ತಿಸುವ ಆಂತರಿಕ ಶಕ್ತಿಯಾಗಿದೆ ಎಂಬುದನ್ನು ವಿವಿಧ ಲೇಖನಗಳ ಮೂಲಕ ಪರಿಣಾಮಕಾರಿಯಾಗಿ ಮನದಟ್ಟುಗೊಳಿಸಿದ್ದಾರೆ ಎಂದು ತಿಳಿಸಿದರು.

 

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles